Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರ ಮಟ್ಟದ ರಾಜಕೀಯದತ್ತ ಮುಸ್ಲಿಂ...

ರಾಷ್ಟ್ರ ಮಟ್ಟದ ರಾಜಕೀಯದತ್ತ ಮುಸ್ಲಿಂ ಲೀಗ್ ಚಿತ್ತ

ವಾರ್ತಾಭಾರತಿವಾರ್ತಾಭಾರತಿ21 March 2017 1:19 PM IST
share
ರಾಷ್ಟ್ರ ಮಟ್ಟದ ರಾಜಕೀಯದತ್ತ ಮುಸ್ಲಿಂ ಲೀಗ್ ಚಿತ್ತ

ಹೊಸದಿಲ್ಲಿ, ಮಾ.21: ಸ್ಥಾಪನೆಯಾಗಿ ಸುಮಾರು 60 ವರ್ಷಗಳು ಕಳೆದ ಬಳಿಕ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಇದೀಗ ರಾಷ್ಟ್ರ ರಾಜಕಾರಣದತ್ತ ತನ್ನ ಚಿತ್ತ ಹರಿಸಿದೆ. ಕೆಲ ರಾಜ್ಯಗಳಲ್ಲಿನ ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಸ್ಪರ್ಧಿಸಿದ ಹೊರತಾಗಿ ಲೀಗ್ 1960ರಿಂದ ತನ್ನ ಭದ್ರಕೋಟೆಯಾದ ಕೇರಳ ಬಿಟ್ಟು ಆಚೆ ಹೋಗುವ ಪ್ರಯತ್ನವನ್ನೇ ಮಾಡಿಲ್ಲ. ಆದರೆ ಉತ್ತರ ಪ್ರದೇಶ ವಿಧಾಸನಭಾ ಚುನಾವಣಾ ಫಲಿತಾಂಶದ ನಂತರ ಅದರ ನಾಯಕತ್ವ ರಾಷ್ಟ್ರ ರಾಜಕಾರಣದತ್ತ ಒಲವು ತೋರಿಸಿದೆ.

ಮುಸ್ಲಿಂ ರಾಜಕೀಯ ಸಂಘಟನೆಗಳು ಸಮುದಾಯದ ಮತದಾರರ ವಿಶ್ವಾಸ ಸಂಪಾದಿಸುವಲ್ಲಿ ವಿಫಲವಾಗಿವೆ ಎಂದು ಬಲವಾಗಿ ನಂಬಿರುವ ಲೀಗ್ ನಾಯಕರು ಕಳೆದ ಗುರುವಾರ ನಡೆದ ಪಕ್ಷದ ರಾಷ್ಟ್ರೀಯ ಸೆಕ್ರಟೇರಿಯಟ್ ಸಭೆಯಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಪಾಲ್ಗೊಳ್ಳುವ ಬಗೆಗಿನ ನಿರ್ಧಾರವನ್ನು ಘೋಷಿಸಿದ್ದಾರೆ.

ರಾಜ್ಯ ಮಟ್ಟದ ಹಾಗೂ ಪ್ರಾದೇಶಿಕ ಮಟ್ಟದ ಸಮಿತಿಗಳನ್ನು ರಚಿಸಲು ಮುಂದಾಗಿರುವ ಪಕ್ಷ ಮುಂದಿನ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳನ್ನು ಸ್ಪರ್ಧಿಸಲು ನಿರ್ಧರಿಸಿದೆ. ಜೂನ್ ತಿಂಗಳಲ್ಲಿ ಗೋವಾದಲ್ಲಿ ತನ್ನ ಸದಸ್ಯರಿಗೆ ತರಬೇತಿ ಶಿಬಿರವೊಂದನ್ನೂ ಪಕ್ಷ ನಡೆಸಲಿದ್ದು ಮಾಜಿ ಅಧಿಕಾರಿಗಳು ಹಾಗೂ ವೃತ್ತಿಪರರೂ ಸೇರಿದಂತೆ ಸಮುದಾಯದ 50 ಮಂದಿ ಗಣ್ಯರು ಪಕ್ಷದ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

‘‘ಕೇವಲ ಬಾಯ್ಮತು ಹಾಗೂ ಆಕ್ರಮಣಕಾರಿ ಹೇಳಿಕೆಗಳನ್ನು ವಿರೋಧಿಗಳನ್ನು ಗುರಿಯಾಗಿಸಿ ನೀಡುವುದರಲ್ಲಿ ಪಕ್ಷ ನಂಬಿಕೆಯಿರಿಸಿಲ್ಲ,’’ ಎಂದು ಹೇಳುತ್ತಾರೆ ಸಂಸದ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಇ ಟಿ ಮೊಹಮ್ಮದ್ ಬಶೀರ್. ‘‘ಮುಸ್ಲಿಮರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಹಾಗೂ ಅವರ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯೇ ನಮ್ಮ ಗುರಿ. ಕೇರಳದಲ್ಲಿ ನಮ್ಮ ಬೆಳವಣಿಗೆಗೆ ಅನುಕೂಲಕರವಾದ ಮಾದರಿಯನ್ನೇ ನಾವು ಅನುಸರಿಸುತ್ತೇವೆ,’’ ಎಂದು ಅವರು ವಿವರಿಸುತ್ತಾರೆ.

ಕೇರಳದಲ್ಲಿ ಲೀಗ್ ಇತಿಹಾಸ: ಕೇರಳ ರಾಜ್ಯ ರಚನೆಯಾದ ನಂತರ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದ ಒಟ್ಟು 22 ಮೈತ್ರಿಕೂಟ ಸರಕಾರಗಳಲ್ಲಿ 13ರಲ್ಲಿ ಲೀಗ್ ಭಾಗಿಯಾಗಿತ್ತು. ಪಕ್ಷದ ಅತ್ಯಂತ ಹಿರಿಯ ನಾಯಕ ಮುಹಮ್ಮದ್ ಕೋಯಾ ಮುಖ್ಯಮಂತ್ರಿಯೂ ಆಗಿದ್ದರಲ್ಲದೆ ಪಕ್ಷದ ಹಲವರು ಸಚಿವ ಹುದ್ದೆಗಳನ್ನೂ ಪಡೆದಿದ್ದಾರೆ.

ಸದ್ಯ ಕೇರಳದಲ್ಲಿ ಲೀಗ್ ಗೆ 18 ಶಾಸಕರುಗಳ ಬಲವಿದ್ದು ಒಬ್ಬ ರಾಜ್ಯಸಭಾ ಸದಸ್ಯರೂ ಇದ್ದಾರೆ. ಫೆಬ್ರವರಿಯಲ್ಲಿ ನಿಧನರಾದ ಇ ಅಹಮದ್ ಅವರು ಮಲಪ್ಪುರಂ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

1948ರಲ್ಲಿ ಸ್ಥಾಪನೆಯಾದಂದಿನಿಂದ ಲೀಗ್ ತಮಿಳುನಾಡು, ಮಹಾರಾಷ್ಟ್ರ, ಕರ್ನಾಟಕ, ಉತ್ತರ ಪ್ರದೇಶ ಮತ್ತು ಅಸ್ಸಾಂ ರಾಜ್ಯಗಳಲ್ಲಿ ನಡೆದ ಸ್ಥಳೀಯಾಡಳಿತ ಚುನಾವಣೆಗಳಲ್ಲಿ ವಿಜಯ ಸಾಧಿಸಿದೆ. 70ರ ದಶಕದಲ್ಲಿ ಅದು ಪಶ್ಚಿಮ ಬಂಗಾಳದಲ್ಲಿ ಏಳು ವಿಧಾನಸಭಾ ಸ್ಥಾನಗಳನ್ನೂ ಪಡೆದಿತ್ತು.

ತನ್ನ ಯೋಜನೆಯಂತೆ ಮುಸ್ಲಿಮ್ ಲೀಗ್ ರಾಷ್ಟ್ರ ರಾಜಕಾರಣವನ್ನು ಪ್ರವೇಶಿಸಿದ್ದೇ ಆದಲ್ಲಿ ಅದು ಹೈದರಾಬಾದ್ ಮೂಲದ ಅಸಾಸುದ್ದೀನ್ ಉವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್-ಉಲ್- ಮುಸ್ಲಿಮೀನ್ ಗೆ ಪ್ರಮುಖ ಸವಾಲೊಡ್ಡುವ ಸಾಧ್ಯತೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X