Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದ್ರಸ ಅಧ್ಯಾಪಕನ ಕೊಲೆ: ಕಾಸರಗೋಡಿನಲ್ಲಿ...

ಮದ್ರಸ ಅಧ್ಯಾಪಕನ ಕೊಲೆ: ಕಾಸರಗೋಡಿನಲ್ಲಿ ಹರತಾಳ

ವಾರ್ತಾಭಾರತಿವಾರ್ತಾಭಾರತಿ21 March 2017 3:40 PM IST
share
ಮದ್ರಸ ಅಧ್ಯಾಪಕನ ಕೊಲೆ: ಕಾಸರಗೋಡಿನಲ್ಲಿ ಹರತಾಳ

ಕಾಸರಗೋಡು, ಮಾ.21: ಮದ್ರಸ ಅಧ್ಯಾಪಕ ಮಡಿಕೇರಿಯ ರಿಯಾಝ್ ಕೊಲೆಯನ್ನು ಖಂಡಿಸಿ ಮಂಗಳವಾರ ಕಾಸರಗೋಡು ತಾಲೂಕಿನಲ್ಲಿ ಮುಸ್ಲಿಂ ಲೀಗ್ ಕರೆ ನೀಡಿರುವ ಹರತಾಳದಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಬಸ್ಸು ಸೇರಿದಂತೆ  ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಈ ನಡುವೆ ವಾರ್ಷಿಕ ಪರೀಕ್ಷೆ ನಡೆಯುತ್ತಿರುವುದರಿಂದ ಬಹುತೇಕ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಹರಸಾಹಸ  ಪಡಬೇಕಾಯಿತು.  

ಜಿಲ್ಲಾಧಿಕಾರಿಯವರು ವಿಶೇಷ ವಾಹನ ವ್ಯವಸ್ಥೆ ಕಲ್ಪಿಸಿದ್ದರಿಂದ ಹಲವು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಿದರು. ವಿದ್ಯಾರ್ಥಿಗಳು ಹಾಗೂ ನಾಗರಿಕರಿಗೆ ಹರತಾಳ ಕರೆ ನೀಡಿದ ಬಗ್ಗೆ ಮಾಹಿತಿ ಇರಲಿಲ್ಲ.  ಬೆಳಗ್ಗೆಯಷ್ಟೇ ಮುಸ್ಲಿಂ ಲೀಗ್ ಹರತಾಳಕ್ಕೆ ಕರೆ ನೀಡಿತ್ತು. ಬಸ್ಸು ಹಾಗೂ ವಾಹನ ಸಂಚಾರ ಇಲ್ಲದೆ  ಜನಸಾಮಾನ್ಯರು  ಪರದಾಡಬೇಕಾಯಿತು.

ಅಲ್ಲಲ್ಲಿ ಘರ್ಷಣೆ , ರಸ್ತೆ ತಡೆ, ಕಲ್ಲೆಸೆತ 

ಹರತಾಳದ ಹಿನ್ನಲೆಯಲ್ಲಿ ಅಲ್ಲಲ್ಲಿ ಘರ್ಷಣೆಗಳು ನಡೆದ ಬಗ್ಗೆ ವರದಿಯಾಗಿದೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿವೆ. ಕಾಸರಗೋಡು ನಗರ , ಚೆರ್ಕಳ , ತಳಂಗರೆ , ಎಡನೀರು ಸೇರಿದಂತೆ ಹಲವಡೆ ರಸ್ತೆಗೆ ಕಲ್ಲು ಮತ್ತು ಮರಗಳನ್ನಿಟ್ಟು ರಸ್ತೆ ತಡೆ ನಡೆಸಲಾಗಿತ್ತು. ವಾಹನಗಳು ಸಂಚರಿಸಲು ಅನುವು ಮಾಡಿಕೊಡದ ಹಿನ್ನೆಲೆಯಲ್ಲಿ  ಮಾತಿನ ಚಕಮಕಿ, ಘರ್ಷಣೆಗಳು ನಡೆದಿವೆ.

ವಿದ್ಯಾನಗರ , ಚೆರ್ಕಳ , ನಾಲ್ಕನೆ ಮೈಲು  ಮೊದಲಾದೆಡೆ ಖಾಸಗಿ ವಾಹನಗಳನ್ನು ತಡೆದ ಘಟನೆ ನಡೆಯಿತು ಮಂಗಳೂರಿನಿಂದ ಕಾಸರಗೋಡಿಗೆ ಬರುವ ಬಸ್ಸು ಹಾಗೂ ಇತರ ವಾಹನಗಳು ಕುಂಬಳೆ ತನಕ ಸಂಚರಿಸಿದವು. ಕೆಲವಡೆ ಮನೆಗಳ ಮೇಲೆ ಕಲ್ಲೆಸೆದ ಘಟನೆಯೂ ನಡೆದಿದೆ. 

ಮುಂಜಾಗ್ರತಾ ಕ್ರಮವಾಗಿ ಕಾಸರಗೋಡು ಹಾಗೂ ಹೊರವಲಯದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್  ಏರ್ಪಡಿಸಲಾಗಿದೆ. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಂಜೆ  ನಾಲ್ಕು ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ಕರೆಯಲಾಗಿದೆ. 

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ  ಕಾಸರಗೋಡು ಡಿವೈಎಸ್ಪಿ  ವಿ.ಸುಕುಮಾರನ್  ನೇತೃತ್ವದ ವಿಶೇಷ ತಂಡವನ್ನು ತನಿಖೆಗೆ ನಿಯೋಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ  ಸ್ಥಳೀಯ ನಿವಾಸಿಯೋರ್ವನ ಸುಳಿವಿನಂತೆ ಕಾಸರಗೋಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕೊಲೆಗೆ ಕಾರಣವೇನೆಂಬುದು ಸ್ಪಷ್ಟಗೊಂಡಿಲ್ಲ. ವೈಯುಕ್ತಿಕ ದ್ವೇಷ ಅಥವಾ ಇನ್ಯಾವುದೇ ಕಾರಣವಾಗಿರಬಹುದೇ  ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಸ್ಥಳಕ್ಕೆ ಬೆರಳಚ್ಚು ತಜ್ಞರು , ಶ್ವಾನ ದಳ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದೆ. ಉತ್ತರ ವಲಯ  ಎಡಿಜಿಪಿ  ರಾಜೇಶ್ ದಿವಾನ್ , ಕಣ್ಣೂರು ವಲಯ ಐ ಜಿ  ಮಹಿಪಾಲ್ ನೇತೃತ್ವದ ತಂಡವು ಕಾಸರಗೋಡಿನಲ್ಲಿ  ಮೊಕ್ಕಾ೦ ಹೂಡಿದ್ದು , ಸ್ಥಿತಿ ಗತಿಗಳ ಅವಲೋಕನ ನಡೆಸುತ್ತಿದೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X