Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಗಿಗೆ ತುಪ್ಪ ಸವರಿದ ಸರಕಾರ : ಬಜೆಟ್...

ಮೂಗಿಗೆ ತುಪ್ಪ ಸವರಿದ ಸರಕಾರ : ಬಜೆಟ್ ವಿರುದ್ಧ ಜೆಡಿಎಸ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ21 March 2017 6:57 PM IST
share
ಮೂಗಿಗೆ ತುಪ್ಪ ಸವರಿದ ಸರಕಾರ : ಬಜೆಟ್ ವಿರುದ್ಧ ಜೆಡಿಎಸ್ ಟೀಕೆ

ಮಡಿಕೇರಿ ಮಾ.21 :ಸುಮಾರು ಒಂದು ಲಕ್ಷ ಕೋಟಿಗೂ ಮೀರಿದ ಬಜೆಟ್ ಮಂಡಿಸಿದ ರಾಜ್ಯ ಸರ್ಕಾರ ಕೊಡಗು ಜಿಲ್ಲೆಗೆ ಕೇವಲ 50 ಕೋಟಿ ರೂ. ಪ್ಯಾಕೇಜ್ ನಿಡುವ ಮೂಲಕ ಜಿಲ್ಲೆಯ ಜನರನ್ನು ಕಡೆಗಣಿಸಿದೆ ಎಂದು ಜಾತ್ಯಾತೀತ ಜನತಾದಳದ ಜಿಲ್ಲಾ ಘಟಕ ಟೀಕಿಸಿದೆ.

      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾ ವಕ್ತಾರ ಪಿ.ಎಸ್. ಭರತ್ ಕುಮಾರ್, ರಾಜ್ಯ ಬಜೆಟ್ ಜನರ ನಿರೀಕ್ಷೆಯನ್ನು ಹುಸಿಗೊಳಿಸಿದ್ದು, ಕೊಡಗಿನ ಜನರ ಮೂಗಿಗೆೆ ತುಪ್ಪ ಸವರುವ ಕಾರ್ಯ ಮಾಡಲಾಗಿದೆಯೆಂದು ಆರೋಪಿಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಎರಡೂ ಬಜೆಟ್‌ಗಳು ಕೂಡ ಜನ ಸಾಮಾನ್ಯರಿಗೆ ವಿರುದ್ಧವಾಗಿದೆ. ಕಾಫಿ ಕ್ಷೇತ್ರದ ಸಂಕಷ್ಟ ಮತ್ತು ಬರ ಪರಿಸ್ಥಿತಿಯ ಈ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಯಾವುದೇ ವಿಶೇಷ ಅನುದಾನ ನೀಡಿಲ್ಲ. ರಾಜ್ಯದ ರೈತರ ಸಾಲವನ್ನು ಮನ್ನಾ ಮಾಡುವ ನಿರೀಕ್ಷೆ ಇತ್ತಾದರು ಬಡ್ಡಿಯನ್ನು ಕೂಡ ಮನ್ನಾ ಮಾಡದ ರಾಜ್ಯ ಸರ್ಕಾರದ ಬಳಿ ಹಣ ಇಲ್ಲವೆನ್ನುವುದು ಸಾಬೀತಾಗಿದೆ ಎಂದು ಭರತ್ ಕುಮಾರ್ ಟೀಕಿಸಿದರು. ಪಕ್ಷ ಕಟ್ಟುವುದಕ್ಕಾಗಿ ಹಣ ಪೋಲಾಗುತ್ತಿದೆಯೆಂದು ಆರೋಪಿಸಿದರು

      ಕುಶಾಲನಗರ ಕಾವೇರಿ ತಾಲ್ಲೂಕು ರಚನೆ ಬೇಡಿಕೆಗೂ ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಈ ಹಿಂದೆ ಹೆಚ್.ಡಿ.ಕುಮಾರ ಸ್ವಾಮಿಯವರು

ಮುಖ್ಯಮಂತ್ರಿಗಳಾಗಿದ್ದಾಗ ಕೊಡಗಿನ ಪೊನ್ನಂಪೇಟೆ, ನಾಪೋಕ್ಲು ಹಾಗೂ ಕುಶಾಲನಗರವನ್ನು ತಾಲ್ಲೂಕುಗಳನ್ನಾಗಿ ರಚನೆ ಮಾಡಬೇಕೆನ್ನುವ ಪ್ರಸ್ತಾವನೆ ಇತ್ತು. ಈ ಸರ್ಕಾರ ತಾಲ್ಲೂಕು ರಚನೆಗೆ ಬೆಂಬಲ ನೀಡದಿರುವುದರಿಂದ ಜೆಡಿಎಸ್ ವತಿಯಿಂದ ಮೂರು ತಾಲ್ಲೂಕುಗಳಿಗಾಗಿ ಹೋರಾಟ ನಡೆಸಲಾಗುವುದೆಂದರು.

      ಡಾ.ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪಕ್ಷಗಳು ಸಮಸ್ಯೆಗೆ ಪರಿಹಾರವನ್ನು ಸೂಚಿಸದೆ ಕೇವಲ ಪರಸ್ಪರ ಟೀಕೆಯಲ್ಲಿ ತೊಡಗಿವೆಯೆಂದು ಅಸಮಾಧಾನ ವ್ಯಕ್ತಪಡಿಸಿದರು. ಕಾವೇರಿ ನೀರನ್ನು ರಾಜ್ಯ ಬಳಸುತ್ತಿರುವುದರಿಂದ ಕೊಡಗು ಜಿಲ್ಲೆಗೆ ವೈಜ್ಞಾನಿಕ ಆಧಾರದಲ್ಲಿ ಕೊಡಗಿಗೆ ಅನುದಾನ ಬಿಡುಗಡೆ ಮಾಡುವ ಅಗತ್ಯವಿದೆಯೆಂದು ಭರತ್ ಕುಮಾರ್ ಒತ್ತಾಯಿಸಿದರು.

ಪಕ್ಷದ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಡಾ.ಯಾಲದಾಳು ಮನೋಜ್ ಬೋಪಯ್ಯ ಮಾತನಾಡಿ, ರಾಜ್ಯ ಸರ್ಕಾರದ ಬಜೆಟ್‌ನಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣ್ಣ ಬಯಲಾಗಿದ್ದು, ಕೊಡಗಿನ ಸಂಕಷ್ಟಕ್ಕೆ ಸ್ಪಂದಿಸದೆ ಇರುವುದು ಖಂಡನೀಯವೆಂದರು. ಕೊಡಗು ಜಿಲ್ಲೆ ಕರ್ನಾಟಕ ರಾಜ್ಯದ ಭೂಪಟದಲ್ಲಿ ಇದೇ ಎನ್ನುವುದನ್ನು ರಾಜ್ಯ ಸರ್ಕಾರ ಮರೆತಿದ್ದು, ಈ ಬೆಳವಣಿಗೆಗೆ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಜನಪ್ರತಿನಿಧಿಗಳೆ ಕಾರಣವೆಂದು ಆರೋಪಿಸಿದರು.

      ಸರ್ಕಾರ ಹಾಗೂ ಜನಪ್ರತಿನಿಧಿಗಳು ಕೊಡಗಿನ ಜನರ ಬೆಂಬಲಕ್ಕಿಲ್ಲವೆಂದ ಅವರು, ಸರ್ಕಾರ ನಿದ್ರಾವಸ್ಥೆಯಲ್ಲಿದೆಯೆಂದು ಟೀಕಿಸಿದರು. ರಾಜ್ಯದಲ್ಲಿ ಬದಲಿ ಸರ್ಕಾರದ ಅಗತ್ಯವಿದ್ದು, ರೈತಪರ ಸರ್ಕಾರ ರಚನೆ ಜೆಡಿಎಸ್‌ನಿಂದ ಮಾತ್ರ ಸಾಧ್ಯವೆಂದು ಅಭಿಪ್ರಾಯಪಟ್ಟರು.

ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಮನ್ಸೂರ್ ಆಲಿ ಮಾತನಾಡಿ, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ದೊಡ್ಡ ಮೊತ್ತದ ಅನುದಾನ ನೀಡಿದಂತೆ ಪ್ರತಿಬಿಂಬಿಸಲಾಗಿದೆ. ಆದರೆ, ಇವುಗಳು ಅನುಷ್ಠಾನಗೊಳ್ಳುವುದು ಸಂಶಯಕ್ಕೆ ಕಾರಣವಾಗಿದ್ದು, ಶಾದಿ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಮಕ್ಕಳಾದರು ಅರ್ಹ ಸೌಲಭ್ಯ ದೊರಕುತ್ತಿಲ್ಲವೆಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಸಿ.ಟಿ. ಮಾದಪ್ಪ, ನಗರ ಕಾರ್ಯದರ್ಶಿ ಮೊಹಮ್ಮದ್ ಅಬ್ರಾರ್ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ ಘಟಕದ ಜಿಲ್ಲಾಧ್ಯಕ್ಷರಾದ ಹೆಚ್.ಎಸ್. ಯೋಗೇಶ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X