Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿನಾಯಕ ಬಾಳಿಗಾ ಹತ್ಯೆಗೆ ವರ್ಷ : ತನಿಖೆ...

ವಿನಾಯಕ ಬಾಳಿಗಾ ಹತ್ಯೆಗೆ ವರ್ಷ : ತನಿಖೆ ಚುರುಕುಗೊಳಿಸಲು ಆಗ್ರಹಿಸಿ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ21 March 2017 7:54 PM IST
share
ವಿನಾಯಕ ಬಾಳಿಗಾ ಹತ್ಯೆಗೆ ವರ್ಷ : ತನಿಖೆ ಚುರುಕುಗೊಳಿಸಲು ಆಗ್ರಹಿಸಿ ಮೆರವಣಿಗೆ

ಮಂಗಳೂರು, ಮಾ.21: ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರು ಹತ್ಯೆಯಾಗಿ ಒಂದು ವರ್ಷ ಪೂರ್ತಿಗೊಂಡ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯನ್ನು ಚುರುಕುಗೊಳಿಸಿ ಬಾಳಿಗಾ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳವಾರ ನಗರದ ವೆಂಕಟರಮಣ ದೇವಳ ಬಳಿಯಿಂದ ಬಾಳಿಗಾ ಅವರ ಮನೆಯವರೆಗೆ ಮೆರವಣಿಗೆ ನಡೆಯಿತು. ಬಳಿಕ ಕಲಾಕುಂಜ ಸಿಬಿಇಯು ಗೋಲ್ಡನ್ ಜುಬಿಲಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ವಿಚಾರವಾದಿ ಸಂಘಟನೆಯ ಅಧ್ಯಕ್ಷ ನರೇಂದ್ರ ನಾಯಕ್, ಬಾಳಿಗಾ ಕೊಲೆ ಪ್ರಕರಣದಲ್ಲಿ ಪೊಲೀಸರ ತನಿಖೆ ವಿಳಂಬವಾಗಿದೆ. ಪೊಲೀಸರು ತನಿಖೆಯನ್ನು ತ್ವರಿತವಾಗಿ ನಡೆಸಬೇಕೆಂದು ಆಗ್ರಹಿಸಿದರು.

ನಗರದ ವೆಂಕರಮಣ ದೇವಸ್ಥಾನ ಮತ್ತು ಕಾಶಿ ಮಠದ ಹಣದ ಅವ್ಯವಹಾರವನ್ನು ಬಯಲಿಗೆಳೆದಿರುವುದು ಬಾಳಿಗಾ ಕೊಲೆಗೆ ಕಾರಣವಾಗಿದೆ. ಸಮಾಜದ ಅನ್ಯಾಯದ ವಿರುದ್ಧ ಧ್ವನಿ ಎತ್ತಿದವರ ಕೊಲೆಯಾಗಿರುವುದು ವಿಷಾದನೀಯ. ಬಾಳಿಗಾರವರು ನಡೆದ ದಾರಿಯಲ್ಲೇ ಹೆಜ್ಜೆ ಹಾಕೋಣ. ಅನ್ಯಾಯದ ವಿರುದ್ಧ ಪ್ರತಿಭಟಿಸೋಣ ಎಂದರು.

ಕೊಲೆ ಪ್ರಕರಣದಲ್ಲಿ ಸತ್ಯ ಹೊರಬರಲು ಆರೋಪಿ ಎಂದು ಗುರುತಿಸಲಾಗಿರುವ ನಮೋ ಬ್ರಿಗೇಡ್‌ನ ಸ್ಥಾಪಕ ನರೇಶ್ ಶೆಣೈರ ಮಂಪರು ಪರೀಕ್ಷೆ ನಡೆಸಬೇಕೆದು ಬಾಳಿಗಾರ ತಂದೆ ಒತ್ತಾಯಿಸಿದ್ದರು. ಆದರೆ, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಲಾಗಿತ್ತು. ಒಂದು ವೇಳೆ ನಿರಪರಾಧಿಯಾಗಿದ್ದರೆ, ಮಂಪರು ಪರೀಕ್ಷೆಗೊಳಪಡಲು ಭಯವೇಕೆ ಎಂದು ನರೇಂದ್ರ ನಾಯಕ್ ಪ್ರಶ್ನಿಸಿದರು.

ಉಡುಪಿಯ ಮನೋರೋಗ ತಜ್ಞ ಡಾ. ಪಿ.ವಿ.ಭಂಡಾರಿ ಮಾತನಾಡಿ, ಮುಂದಿನ ಮಾರ್ಚ್ ತಿಂಗಳೊಳಗೆ ತನಿಖೆ ಚುರುಕುಗೊಂಡು ಎಲ್ಲಾ ಆರೋಪಿಗಳ ಬಂಧನವಾಗಲಿ ಎಂದು ಆಗ್ರಹಿಸಿದರು.

ಡಿವೈಎಫ್‌ಐ ಮಾಜಿ ರಾಜ್ಯಾಧ್ಯಕ್ಷ ಗುರುಶಾಂತ್, ದೇಶದ ಸಂಸ್ಕೃತಿ, ದೇಶಪ್ರೇಮದ ಬಗ್ಗೆ ಮಾತನಾಡುತ್ತಿರುವವರೇ ದೇಶದ್ರೋಹಿಗಳಾಗುತ್ತಿದ್ದಾರೆ. ಜಾತಿ, ಧರ್ಮಗಳ ಬಗ್ಗೆ ಪ್ರಚೋದಿಸಿ ತಮ್ಮ ಕರಾಳ ದಂಧೆಯನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದರಲ್ಲದೆ, ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಕಾರ್ಯಕ್ರಮದಲ್ಲಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ವಿನಾಯಕ ಬಾಳಿಗಾ ಅವರ ಸಹೋದರಿ ಅನುರಾಧಾ ಬಾಳಿಗಾ, ವಿವಿ ವಿಶ್ರಾಂತ ಕುಲಪತಿ ಡಾ.ಪಂಡಿತಾರಾಧ್ಯ, ಸಮುದಾಯ ಸಾಂಸ್ಕೃತಿಕ ಸಂಘಟನೆಯ ಮುಖಂಡ ವಾಸುದೇವ ಉಚ್ಚಿಲ್, ದಸಂಸ ಮುಖಂಡ ಎಂ.ದೇವದಾಸ್, ಟಿ.ಆರ್.ಭಟ್ ಉಪಸ್ಥಿತರಿದ್ದರು.

‘ತನಿಖೆ ತ್ವರಿತಗೊಳಿಸಲು ಕೋರ್ಟ್‌ಗೆ ಅರ್ಜಿ’

ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ತ್ವರಿತಗೊಳಿಸುವಂತೆ ಮಂಗಳೂರಿನ 3ನೆ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ನರೇಂದ್ರ ನಾಯಕ್ ತಿಳಿಸಿದರು.

ವಿನಾಯಕ ಬಾಳಿಗಾ ಅವರ ಸಹೋದರಿ ಅನುರಾಧಾ ಬಾಳಿಗಾ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಪ್ರಕರಣದ ತನಿಖೆ ಚುರುಕುಗೊಳಿಸುವಂತೆ ಹಾಗೂ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಕೋರಿದ್ದಾರೆ ಎಂದು ನರೇಂದ್ರ ನಾಯಕ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X