Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಗ್ರ...

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಗ್ರ ಸ್ಥಾನಕ್ಕೇರಿದ ಜಡೇಜ, ಪೂಜಾರಗೆ ಭಡ್ತಿ

ವಾರ್ತಾಭಾರತಿವಾರ್ತಾಭಾರತಿ21 March 2017 11:23 PM IST
share
ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಗ್ರ ಸ್ಥಾನಕ್ಕೇರಿದ ಜಡೇಜ, ಪೂಜಾರಗೆ ಭಡ್ತಿ

ಹೊಸದಿಲ್ಲಿ, ಮಾ.21: ಭಾರತದ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜ ಸಹ ಆಟಗಾರ ಆರ್.ಅಶ್ವಿನ್‌ರನ್ನು ಹಿಂದಿಕ್ಕಿ ಐಸಿಸಿ ಟೆಸ್ಟ್ ಬೌಲರ್‌ಗಳ ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ಬ್ಯಾಟ್ಸ್‌ಮನ್‌ಗಳ ರ್ಯಾಂಕಿಂಗ್‌ನಲ್ಲಿ ಎರಡನೆ ಸ್ಥಾನಕ್ಕೆ ಭಡ್ತಿ ಪಡೆದಿರುವ ಚೇತೇಶ್ವರ ಪೂಜಾರ ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ.

ಆಸ್ಟ್ರೇಲಿಯ ವಿರುದ್ಧ ರಾಂಚಿಯಲ್ಲಿ ಸೋಮವಾರ ಡ್ರಾನಲ್ಲಿ ಕೊನೆಗೊಂಡ ಮೂರನೆ ಟೆಸ್ಟ್ ಪಂದ್ಯದಲ್ಲಿ ಒಟ್ಟು 9 ವಿಕೆಟ್‌ಗಳನ್ನ ಕಬಳಿಸಿದ್ದ ಜಡೇಜ ರ್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನ ಅಲಂಕರಿಸಿದ್ದಾರೆ. ಜಡೇಜ 124 ರನ್‌ಗೆ 5 ಹಾಗೂ 52 ರನ್‌ಗೆ 4 ವಿಕೆಟ್ ಕಬಳಿಸಿದ್ದ ಜಡೇಜ ಒಟ್ಟು 899 ಅಂಕ ಸಂಪಾದಿಸಿದರು.

892 ಅಂಕಗಳೊಂದಿಗೆ ಅಶ್ವಿನ್‌ರೊಂದಿಗೆ ನಂ.1 ಸ್ಥಾನ ಹಂಚಿಕೊಂಡಿದ್ದ ಜಡೇಜ ಇದೀಗ ಅಗ್ರ ಸ್ಥಾನಕ್ಕೆ ಏರಿದ್ದಾರೆ. ಅಶ್ವಿನ್ ಹಾಗೂ ಬಿಷನ್ ಸಿಂಗ್ ಬೇಡಿಯ ಬಳಿಕ ನಂ.1 ಸ್ಥಾನಕ್ಕೇರಿದ ಭಾರತದ ಮೂರನೆ ಬೌಲರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ರಾಂಚಿ ಟೆಸ್ಟ್‌ನಲ್ಲಿ 202 ರನ್ ಗಳಿಸಿದ್ದ ಸೌರಾಷ್ಟ್ರದ ಬ್ಯಾಟ್ಸ್‌ಮನ್ ಪೂಜಾರ 661 ಅಂಕದೊಂದಿಗೆ ನಾಲ್ಕು ಸ್ಥಾನ ಭಡ್ತಿ ಪಡೆದು ಜೀವನಶ್ರೇಷ್ಠ ದ್ವಿತೀಯ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಪೂಜಾರ ನ್ಯೂಝಿಲೆಂಡ್‌ನ ನಾಯಕ ಕೇನ್ ವಿಲಿಯಮ್ಸ್‌ರನ್ನು ಐದನೆ ಸ್ಥಾನಕ್ಕೆ ತಳ್ಳಿ ನಂ.2ನೆ ಸ್ಥಾನಕ್ಕೇರಿದ್ದಾರೆ.

ನಂ.1 ಸ್ಥಾನದಲ್ಲಿ ಮುಂದುವರಿದಿರುವ ಆಸ್ಟ್ರೇಲಿಯದ ನಾಯಕ ಸ್ಟೀವ್ ಸ್ಮಿತ್ ಜೀವನಶ್ರೇಷ್ಠ 941 ಅಂಕ ಗಳಿಸಿದ್ದಾರೆ. ಸ್ಮಿತ್ ಮೂರನೆ ಟೆಸ್ಟ್‌ನಲ್ಲಿ ಅಜೇಯ 178 ಹಾಗೂ 21 ರನ್ ಗಳಿಸಿದ್ದರು.

 ಇದೇ ವೇಳೆ ಐಸಿಸಿ ಟೆಸ್ಟ್ ಟೀಮ್ ರ್ಯಾಂಕಿಂಗ್‌ನಲ್ಲಿ ಎರಡನೆ ಸ್ಥಾನಕ್ಕಾಗಿ ಆಸ್ಟ್ರೇಲಿಯ ಹಾಗೂ ದಕ್ಷಿಣ ಆಫ್ರಿಕ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಎಪ್ರಿಲ್ 1ಕ್ಕೆ ಮೊದಲು ಯಾವ ತಂಡ 2ನೆ ಸ್ಥಾನಕ್ಕೇರಲಿದೆ ಎಂಬ ಕುತೂಹಲ ಮನೆಮಾಡಿದೆ. ನಂ.1 ಸ್ಥಾನದಲ್ಲಿರುವ ಭಾರತ ಈಗಾಗಲೇ ಐಸಿಸಿಯಿಂದ ಕೊಡಮಾಡುವ 1 ಮಿಲಿಯನ್ ಡಾಲರ್ ನಗದು ಬಹುಮಾನವನ್ನು ದೃಢಪಡಿಸಿದೆ. ಆಸ್ಟ್ರೇಲಿಯ ಎರಡನೆ ಸ್ಥಾನ ಗಳಿಸಿದರೆ 500,000 ಡಾಲರ್ ಬಹುಮಾನ ಪಡೆಯಲಿದೆ. ಧರ್ಮಶಾಲಾದಲ್ಲಿ ಭಾರತ ವಿರುದ್ಧದ ನಾಲ್ಕನೆ ಪಂದ್ಯದಲ್ಲಿ ಡ್ರಾ ಸಾಧಿಸಿದರೆ ಆಸೀಸ್ 2ನೆ ಸ್ಥಾನ ಗಳಿಸಲಿದೆ.

ಒಂದು ವೇಳೆ ಆಸ್ಟ್ರೇಲಿಯ ತಂಡ ಭಾರತ ವಿರುದ್ಧ ಪಂದ್ಯವನ್ನು ಸೋತ ಬಳಿಕ ದಕ್ಷಿಣ ಆಫ್ರಿಕ ತಂಡ ನ್ಯೂಝಿಲೆಂಡ್ ವಿರುದ್ಧದ ಪಂದ್ಯವನ್ನು ಡ್ರಾ ಸಾಧಿಸಿದರೆ 2ನೆ ಸ್ಥಾನ ಪಡೆಯಲು ಅರ್ಹತೆ ಪಡೆಯುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X