Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಚೀನಾದ ಅಪಾರ್ಟ್‌ಮೆಂಟ್ ಬ್ಲಾಕ್ ಮೂಲಕ...

ಚೀನಾದ ಅಪಾರ್ಟ್‌ಮೆಂಟ್ ಬ್ಲಾಕ್ ಮೂಲಕ ಸಾಗುತ್ತಿದೆ ಮಾನೊರೈಲು

ಅಷ್ಟೇ ಅಲ್ಲ.....ಇಲ್ಲಿ ನಿಲ್ದಾಣವೂ ಇದೆ!

ವಾರ್ತಾಭಾರತಿವಾರ್ತಾಭಾರತಿ21 March 2017 11:26 PM IST
share
ಚೀನಾದ ಅಪಾರ್ಟ್‌ಮೆಂಟ್ ಬ್ಲಾಕ್ ಮೂಲಕ ಸಾಗುತ್ತಿದೆ ಮಾನೊರೈಲು

ಬಿಜಿಂಗ್,ಮಾ.21: ಚೀನಾದ ಚಾಂಗ್‌ಕಿಂಗ್ ನಗರದಲ್ಲಿ ಎಲ್ಲೆಲ್ಲೂ ಗಗನಚುಂಬಿ ಕಟ್ಟಡಗಳೇ ತುಂಬಿವೆ. ಹೀಗಾಗಿ ‘ಪರ್ವತ ನಗರಿ ’ಎಂದೇ ಕರೆಯಲಾಗುವ ಈ ನಗರದಲ್ಲಿ ಜನಸಂಖ್ಯೆ ಮಿತಿಮೀರಿದ್ದು, ಬರೋಬ್ಬರಿ 85 ಲಕ್ಷ ಜನರು ಇಲ್ಲಿ ವಾಸವಾಗಿದ್ದಾರೆ. ಕಟ್ಟಡಗಳಿಂದಲೇ ತುಂಬಿರುವ ಈ ನಗರದ ಪ್ರದೇಶವೊಂದರಲ್ಲಿ ರೈಲು ಮಾರ್ಗವೊಂದನ್ನು ನಿರ್ಮಿಸುವಂತೆ ಆಡಳಿತವು ಇಂಜಿನಿಯರ್‌ಗಳಿಗೆ ಸೂಚಿಸಿತ್ತು.

ಹೊಸ ಮಾರ್ಗ ಹಾಕಲು ಅಲ್ಲಿಯ ಭೂಮಿಯಲ್ಲಂತೂ ಜಾಗವಿಲ್ಲ. ಒಂದೇ ಭೂಗತ ಮಾರ್ಗ ನಿರ್ಮಿಸಬೇಕು ಇಲ್ಲವೇ ನಗರದ ತಲೆಯ ಮೇಲಿನ ಆಗಸದಲ್ಲಿ ಅದಕ್ಕೆ ವ್ಯವಸ್ಥೆ ಮಾಡಬೇಕು. ಆದರೆ ಅಲ್ಲಿಯ ಘಾಟಿ ಇಂಜಿನಿಯರ್‌ಗಳು ಸರಳ ಪರಿಹಾರವೊಂದನ್ನು ಕಂಡುಕೊಂಡು ಅಪಾರ್ಟ್‌ಮೆಂಟ್ ಬ್ಲಾಕ ಮೂಲಕವೇ ರೈಲು ಮಾರ್ಗವನ್ನು ನಿರ್ಮಿಸಿದ್ದಾರೆ. ಈ ಬ್ಲಾಕ್‌ನಲ್ಲಿಯೇ ನಿಲ್ದಾಣವನ್ನು ಸ್ಥಾಪಿಸಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ.

ಮೊನೊರೈಲಿಗಾಗಿ ನೆಲದಿಂದ ಸುಮಾರು ಎತ್ತರದಲ್ಲಿ ಹಳಿಗಳನು ್ನ ಅಳವಡಿಸಲಾಗಿದ್ದು, ಕಟ್ಟಡದ ಎಂಟನೆ ಮಹಡಿಯಲ್ಲಿ ಬೃಹತ್ ರಂಧ್ರವನ್ನು ಕೊರೆದು ಮಾರ್ಗವನ್ನು ನಿರ್ಮಿಸಲಾಗಿದೆ.

ವಿಚಿತ್ರವೆಂದರೆ ರೈಲಿನ ಶಬ್ದದಿಂದ ಇಲ್ಲಿಯ ನಿವಾಸಿಗಳಿಗೆ ಕಿಂಚಿತ್ತೂ ತೊಂದರೆಯಾಗುತ್ತಿಲ್ಲ. ರೈಲು ಕಟ್ಟಡದ ಮೂಲಕ ಹಾದುಹೋಗುವಾಗ ಕೇವಲ 60 ಡೆಸಿಬಲ್‌ಗಳಷ್ಟು ಶಬ್ದ ಕೇಳಿ ಬರುತ್ತಿದ್ದು, ಇದನ್ನು ಯಾವುದೇ ರೆಸ್ಟೋರಂಟ್‌ನಲ್ಲಿಯ ಗದ್ದಲಕ್ಕೆ ಹೋಲಿಸಬಹುದಾಗಿದೆ.ಈ ರೈಲು ಮಾರ್ಗ ನಿರ್ಮಾಣದಿಂದ ಈ ಪ್ರದೇಶದಲ್ಲಿ ಸಾರಿಗೆ ವ್ಯವಸ್ಥೆ ಉತ್ತಮಗೊಂಡಿರುವುದರಿಂದ ಇಲ್ಲಿಯ ಆಸ್ತಿಗಳ ವೌಲ್ಯದಲ್ಲಿ ಏರಿಕೆಯಾಗಿದೆ.

ರೈಲ್ವೆ ಮಾರ್ಗ ನಿರ್ಮಾಣಗೊಂಡ ಸಮಯದಲ್ಲಿಯೇ ಈ ಅಪಾರ್ಟ್‌ಮೆಂಟ್ ಬ್ಲಾಕ್ ಕೂಡ ನಿರ್ಮಾಣಗೊಂಡಿದ್ದು ತನ್ನದೇ ಆದ ನಿಲ್ದಾಣವನ್ನು ಹೊಂದಿದೆ.

ನಮ್ಮ ನಗರವು ಕಟ್ಟಡಗಳಿಂದಲೇ ತುಂಬಿ ಹೋಗಿದ್ದು ಹೊಸದಾಗಿ ರಸ್ತೆ ಮತ್ತು ರೈಲು ಮಾರ್ಗ ನಿರ್ಮಾಣ ನಿಜಕ್ಕೂ ಸವಾಲಿನದ್ದಾಗಿದೆ. ಹೀಗಾಗಿಯೇ ಇಂಜಿನಿಯರ್‌ಗಳು ಈ ವಿನೂತನ ಪರಿಕಲ್ಪನೆಯನ್ನು ಸಾಕಾರಗೊಳಿಸಿದ್ದಾರೆ ಎಂದು ನಗರದ ಸಾರಿಗೆ ವಕ್ತಾರ ಯುವಾನ್ ಚೆಂಗ್ ಸುದ್ದಿಗಾರರಿಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X