Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರೇಮಲತಾ ವಿರುದ್ಧ ಹೀನಾಯ ಷಡ್ಯಂತ್ರ,...

ಪ್ರೇಮಲತಾ ವಿರುದ್ಧ ಹೀನಾಯ ಷಡ್ಯಂತ್ರ, ಸಿಐಡಿ ವರದಿಯಲ್ಲಿ ಬಹಿರಂಗ

ರಾಘವೇಶ್ವರ ಸ್ವಾಮಿ ಬಂಧನಕ್ಕೆ ಅಖಿಲ ಹವ್ಯಕ ಒಕ್ಕೂಟ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 March 2017 7:52 PM IST
share
ಪ್ರೇಮಲತಾ ವಿರುದ್ಧ ಹೀನಾಯ ಷಡ್ಯಂತ್ರ, ಸಿಐಡಿ ವರದಿಯಲ್ಲಿ ಬಹಿರಂಗ

ಬೆಂಗಳೂರು, ಮಾ.22: ಪ್ರೇಮಲತಾ ಪ್ರಕರಣಕ್ಕೆಸಂಬಂಧಿಸಿದಂತೆ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅನುಯಾಯಿ ಚಂದ್ರಶೇಖರ ಹಾಕಿದ್ದ ಬ್ಲಾಕ್ ಮೇಲ್ ಕೇಸ್‌ನಲ್ಲಿ ಸತ್ಯಾಂಶವಿಲ್ಲ , ದುರುದ್ದೇಶಪೂರಿತ ಎಂದು ಸಿಐಡಿ ಸಲ್ಲಿಸಿರುವ ವರದಿಯಲ್ಲಿ ದೃಢೀಕರಿಸಲಾಗಿದೆ ಎಂದು ಅಖಿಲ ಹವ್ಯಕ ಒಕ್ಕೂಟದ ಪರವಾಗಿ ಮಾಜಿ ಸಚಿವ ಕೆ.ಎಚ್.ಶ್ರೀನಿವಾಸ್ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮಲತಾ ಸ್ವಾಮೀಜಿ ಮೇಲೆ ಅತ್ಯಾಚಾರ ದೂರು ದಾಖಲಿಸಿದ ನಂತರ ಅದನ್ನು ಮುಚ್ಚಿಕೊಳ್ಳಲು ಪ್ರೇಮಲತಾ ಸೇರಿದಂತೆ ದಿವಾಕರ ಶಾಸ್ತ್ರಿ, ಸಿ.ಎಂ.ನಾರಾಯಣ ಶಾಸ್ತ್ರಿ ನನಗೆ ಬೆದರಿಕೆ ಕರೆ ಮಾಡಿ, 3 ಲಕ್ಷ ಹಣ ನೀಡಬೇಕು. ಇಲ್ಲದಿದ್ದರೆ ನಿಮ್ಮ ಮೇಲೆ ದೂರು ದಾಖಲಿಸಲಾಗುತ್ತದೆ ಎಂದು ಬೆದರಿಕೆ ಹಾಕಿದ್ದರು. ಅದನ್ನು ತಿರಸ್ಕರಿಸಿದ್ದರಿಂದ ನನ್ನ ತೇಜೋವಧೆ ಮಾಡಲು ಸುಳ್ಳು ದೂರು ನೀಡಿದ್ದಾರೆ ಎಂದು ಹೇಳಿ ಸ್ವಾಮೀಜಿ ದೂರಿನಲಿ ಆಪಾದಿಸಿದ್ದರು ಎಂದು ಹೇಳಿದರು.

ಆ ಮೂಲಕ ಸ್ವಾಮೀಜಿ ಬ್ಲಾಕ್‌ವೆುೀಲ್ ಅನ್ನು ಅಸ್ತ್ರವನ್ನಾಗಿ ಬಳಸಿಕೊಂಡು ಸೆಷನ್ಸ್ ನ್ಯಾಯಾಲಯದಲ್ಲಿ ತಮ್ಮ ವಿರುದ್ಧ ಹಾಕಲಾಗಿದ್ದ ಕೇಸನ್ನು ಯಾವುದೇ ವಿಚಾರಣೆ ಇಲ್ಲದೆ ವಜಾ ಮಾಡಿಸಲು ಷಡ್ಯಂತ್ರ ರೂಪಿಸಿದ್ದರು. ಆದರೆ, ಇದೀಗ ಸಿಐಡಿ ಪೊಲೀಸರು ನಡೆಸಿದ ತನಿಖೆಯಲ್ಲಿ ಸ್ವಾಮೀಜಿ ಮಾಡಿರುವ ಎಲ್ಲ ಆರೋಪಗಳು ಸುಳ್ಳು ಎಂದು ಹೇಳಿದೆ ಎಂದರು.

ಸಿಐಡಿ ನಡೆಸಿರುವ ತನಿಖೆ ವರದಿಯಲ್ಲಿ, ಆರೋಪಿತರಾದ ದಿವಾಕರಶಾಸ್ತ್ರಿ, ಪ್ರೇಮಲತಾ, ಸಿ.ಎಂ.ಎನ್.ಶಾಸ್ತ್ರಿ ಅವರ ವಿರುದ್ಧ ಮಾಡಲಾದ ಆರೋಪಗಳನ್ನು ದೃಢೀಕರಿಸಲು ಈವರೆಗೆ ನಡೆಸಿದ ತನಿಖೆಯಲ್ಲಿ ವಿಚಾರಣೆ ಮಾಡಿದ ಸಾಕ್ಷಿಗಳಿಂದ ಮತ್ತು ಸಂಗ್ರಹಿಸಿದ ದಾಖಲಾತಿಗಳಿಂದ ಯಾವುದೇ ಸೂಕ್ತ ಸಾಕ್ಷಾಧಾರಗಳು ಸಿಕ್ಕಿಲ್ಲ. ಅಲ್ಲದೆ, 3 ಕೋಟಿ ಹಣಕ್ಕೆ ಒತ್ತಾಯಿಸಿದ ಬಗ್ಗೆ, ಪ್ರೇಮಲತಾ ಇದಕ್ಕೆ ಕುಮ್ಮಕ್ಕು ನೀಡಿರುವ ಕುರಿತು ಸೂಕ್ತವಾದ ಸಾಕ್ಷಾಧಾರಗಳು ಇಲ್ಲ. ಆದುದರಿಂದ ಈ ಪ್ರಕರಣವು ಸುಳ್ಳು ಪಿರ್ಯಾದೆಂದು ಪರಿಗಣಿಸಿ ನ್ಯಾಯಾಲಯ ಅಂಗೀಕರಿಸಬೇಕೆಂದು ತಿಳಿಸಲಾಗಿದೆ ಎಂದು ಅವರು ತಿಳಿಸಿದರು.

ಹೀಗಾಗಿ ಕೂಡಲೇ ಬ್ಲಾಕ್‌ಮೇಲ್ ಆಧಾರದ ಮೇಲೆ ರಾಘವೇಶ್ವರ ಸ್ವಾಮೀಜಿಗೆ ನ್ಯಾಯಾಲಯ ನೀಡಿರುವ ಬೇಲ್ ತುರ್ತಾಗಿ ವಜಾ ಮಾಡಿ, ಅವರನ್ನು ಬಂಧಿಸಬೇಕು. ಸುಳ್ಳು ಕೇಸನ್ನು ದಾಖಲಿಸಿರುವ ಸ್ವಾಮೀಜಿ ಬೆಂಬಲಿಗರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ವೆುೀಲ್ಮನವಿ ದೂರಿನ ವಿಚಾರಣೆ ಶೀಘ್ರವಾಗಿ ಇತ್ಯರ್ಥ ಪಡಿಸಿ ಸಂತ್ರಸ್ತರಿಗೆ ನ್ಯಾಯಾದಾನ ನೀಡಬೇಕು ಎಂದು ಆಗ್ರಹಿಸಿದರು.

ಅನೈತಿಕ ಚಟುವಟಿಕೆಗಳಲ್ಲಿ ಕಾಲ ಕಳೆಯುತ್ತಿರುವ ರಾಘವೇಂದ್ರ ಸ್ವಾಮೀಜಿ, ಅವರು ಮಾಡುವ ತಪ್ಪನ್ನು ಹೊರಗಡೆ ಯಾರು ಹೇಳುತ್ತಾರೆ ಅವರೆಲ್ಲರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸಿ, ಬೆದರಿಸಿ, ಭಾವನಾತ್ಮಕವಾಗಿ ಬ್ಲಾಕ್‌ಮೇಲ್ ಮಾಡುತ್ತಾ, ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ತಮ್ಮ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಾ, ಗೋವಿನ ಹೆಸರಿನಲ್ಲಿ, ಹಿಂದೂಗಳ ಹೆಸರಿನಲ್ಲಿ ತಮ್ಮ ಅಕ್ರಮಗಳನ್ನು ಮುಚ್ಚಿ ಹಾಕಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X