Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಹಾರ ಭದ್ರತಾ ಕಾಯ್ದೆ ಅನುಷ್ಠಾನದಲ್ಲಿ...

ಆಹಾರ ಭದ್ರತಾ ಕಾಯ್ದೆ ಅನುಷ್ಠಾನದಲ್ಲಿ ವೈಫಲ್ಯ: 9 ಬರಪೀಡಿತ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಬುಲಾವ್

ವಾರ್ತಾಭಾರತಿವಾರ್ತಾಭಾರತಿ22 March 2017 8:43 PM IST
share
ಆಹಾರ ಭದ್ರತಾ ಕಾಯ್ದೆ ಅನುಷ್ಠಾನದಲ್ಲಿ ವೈಫಲ್ಯ: 9 ಬರಪೀಡಿತ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಬುಲಾವ್

ಹೊಸದಿಲ್ಲಿ,ಮಾ.22: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್‌ಎಫ್‌ಎಸ್‌ಎ)ಯ ಅನುಷ್ಠಾನದಲ್ಲಿ ವೈಫಲ್ಯಕ್ಕಾಗಿ ಕರ್ನಾಟಕ ಸೇರಿದಂತೆ ಒಂಭತ್ತು ಬರಪೀಡಿತ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸರ್ವೋಚ್ಚ ನ್ಯಾಯಾಲಯವು ಬುಧವಾರ ಸಮನ್ಸ್ ಹೊರಡಿಸಿದೆ.

ಕಾಯ್ದೆಯು ಅಸ್ತಿತ್ವಕ್ಕೆ ಬಂದು ಸಾಕಷ್ಟು ಕಾಲವು ಸರಿದಿದ್ದರೂ ಅದನ್ನು ಅನುಷ್ಠಾನಿಸುವಲ್ಲಿ ಈ ರಾಜ್ಯಗಳು ವಿಫಲಗೊಂಡಿವೆ ಎಂದು ಹೇಳಿದ ನ್ಯಾ.ಎಂ.ಬಿ.ಲೋಕೂರ್ ನೇತೃತ್ವದ ಪೀಠವು, ಸಂಸದೀಯ ಶಾಸನಕ್ಕೆ ಮಹತ್ವ ನೀಡಲಾಗುತ್ತಿಲ್ಲ ಎನ್ನುವುದು ಕಳವಳದ ವಿಷಯವಾಗಿದೆ. ಇದರಲ್ಲಿ ಸಂವಿಧಾನದ ವಿಧಿ 21(ಬದುಕು ಮತ್ತು ವೈಯಕ್ತಿಕ ಸ್ವಾತಂತ್ರ ಹಕ್ಕು) ಕೂಡ ಸೇರಿದೆ. ಎನ್‌ಎಫ್‌ಎಸ್‌ಎದ ಕಲಂ 16ರಲ್ಲಿ ಆದೇಶಿಸಿರುವಂತೆ ರಾಜ್ಯ ಆಹಾರ ಆಯೋಗವನ್ನು ನೇಮಕಗೊಳಿಸಲಾಗಿಲ್ಲ ಎಂದು ಬೆಟ್ಟು ಮಾಡಿತು.

ಈ ಹಿನ್ನೆಲೆಯಲ್ಲಿ ನಾವು ರಾಜ್ಯ ಮುಖ್ಯಕಾರ್ಯದರ್ಶಿಗಳನ್ನು ಕರೆಸುತ್ತಿದ್ದೇವೆ.ರಾಜ್ಯ ಆಹಾರ ಆಯೋಗಗಳನ್ನು ನೇಮಿಸಲು ನಮಗೆ ಅವರ ಅಗತ್ಯವಿದೆ ಮತ್ತು ಅವರು ಎಲ್ಲ ವಿವರಗಳನ್ನು ಒದಗಿಸಬೇಕಾಗಿದೆ ಎಂದು ಪೀಠವು ಹೇಳಿತು.

ಕರ್ನಾಟಕ,ಆಂಧ್ರ ಪ್ರದೇಶ, ಗುಜರಾತ್, ಮಹಾರಾಷ್ಟ್ರ, ಜಾರ್ಖಂಡ್, ಮಧ್ಯಪ್ರದೇಶ, ಬಿಹಾರ, ಹರ್ಯಾಣ ಮತ್ತು ಛತ್ತೀಸ್‌ಗಡ ಈ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ಹೊರಡಿಸಲಾಗಿದೆ.

ನ್ಯಾಯಾಲಯವು ತೆಲಂಗಾಣ,ಒಡಿಶಾ ಮತ್ತು ಉತ್ತರ ಪ್ರದೇಶ ರಾಜ್ಯಗಳು ಕೆಲವು ನಿರ್ದೇಶಗಳನ್ನು ಪಾಲಿಸಿರುವ ಹಿನ್ನಲೆಯಲ್ಲಿ ಅವುಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್‌ನಿಂದ ವಿನಾಯಿತಿ ನೀಡಿದೆ.

ಬರಪೀಡಿತ ರಾಜ್ಯಗಳಲ್ಲಿ ರೈತರಿಗೆ ವಿವಿಧ ಪರಿಹಾರಗಳನ್ನು ಕೋರಿ ಎನ್‌ಜಿಒ ಸ್ವರಾಜ್ ಅಭಿಯಾನ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಈ ಆದೇಶ ಹೊರಡಿಸಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X