Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್ ಸಂಸತ್ತಿನ ಬಳಿ ‘ಭಯೋತ್ಪಾದಕ...

ಬ್ರಿಟನ್ ಸಂಸತ್ತಿನ ಬಳಿ ‘ಭಯೋತ್ಪಾದಕ ದಾಳಿ’

4 ಬಲಿ, ಹಲವರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ22 March 2017 11:37 PM IST
share
ಬ್ರಿಟನ್ ಸಂಸತ್ತಿನ ಬಳಿ ‘ಭಯೋತ್ಪಾದಕ ದಾಳಿ’

ಲಂಡನ್, ಮಾ.22: ಬ್ರಿಟನ್ ಸಂಸತ್ತಿನ ಬಳಿ ಆಕ್ರಮಣಕಾರನೋರ್ವ ನಡೆಸಿದ ಉಗ್ರ ಕೃತ್ಯಕ್ಕೆ ಓರ್ವ ಮಹಿಳೆ ಹಾಗೂ ಪೊಲೀಸ್ ಅಧಿಕಾರಿ  ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ವೆಸ್ಟ್‌ಮಿನಿಸ್ಟರ್ ಸೇತುವೆ ಬಳಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿಕೊಂಡು ಬಂದ ದಾಳಿಕೋರನು ಸಂಸತ್‌ಭವನಕ್ಕೆ ನುಗ್ಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತ ಅಲ್ಲಿ ಕಾವಲಿದ್ದ ಓರ್ವ ಪೊಲೀಸ್ ಸಿಬ್ಬಂದಿಗೆ ಇರಿದಿದ್ದಾನೆ. ಬಳಿಕ ‘ಭಯೋತ್ಪಾದಕ’ನನ್ನು ಪೊಲೀಸರು ಕೊಂದು ಹಾಕಿದರು. ಇದೊಂದು ‘ಭಯೋತ್ಪಾದಕ ದಾಳಿ’ ಎಂದು ಪರಿಗಣಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆಯ ಸಂದರ್ಭ ಬ್ರಿಟನ್ ಸಂಸತ್ತಿನಲ್ಲಿ ನಡೆಯುತ್ತಿದ್ದ ಕಲಾಪವನ್ನು ಸ್ಥಗಿತಗೊಳಿಸಿ, ಜನಪ್ರತಿನಿಧಿಗಳನ್ನು ಸಂಸತ್ತಿನ ಒಳಗೇ ಇರುವಂತೆ ಸೂಚಿಸಲಾಯಿತು. ಪ್ರಧಾನಿ ಥೆರೆಸಾ ಮೇ ಸುರಕ್ಷಿತವಾಗಿದ್ದಾರೆ ಎಂದು ಅವರ ಕಚೇರಿಯ ವಕ್ತಾರರೋರ್ವರು ತಿಳಿಸಿದ್ದು, ಘಟನೆ ನಡೆದಾಗ ಪ್ರಧಾನಿ ಎಲ್ಲಿದ್ದಾರೆ ಎಂಬ ಬಗ್ಗೆ ತಿಳಿಸಲು ನಿರಾಕರಿಸಿದ್ದಾರೆ. ಪೊಲೀಸ್ ಸಿಬ್ಬಂದಿಗೆ ಇರಿದ ಆಕ್ರಮಣಕೋರ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ ಎಂದು ಸದನದ ನಾಯಕ ಡೇವಿಡ್ ಲಿಡಿಂಗ್ಟನ್ ತಿಳಿಸಿದ್ದಾರೆ.

ಬ್ರಿಟನ್ ಸಂಸತ್ತಿನ ಪಕ್ಕದಲ್ಲಿರುವ ವೆಸ್ಟ್‌ಮಿನಿಸ್ಟರ್ ಸೇತುವೆಯ ಮೇಲೆ ಚೂರಿಯನ್ನು ಹಿಡಿದಿದ್ದ ವ್ಯಕ್ತಿಯೋರ್ವ ಪಾದಚಾರಿಗಳ ಮೇಲೆಯೇ ಕಾರು ಚಲಾಯಿಸಿದ್ದು ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟು ಹಲವರು ಗಾಯಗೊಂಡರು.

ಬಳಿಕ ಆತ ಸಂಸತ್ ಭವನದ ಎದುರಿಗಿದ್ದ ಪೊಲೀಸರತ್ತ ಗುಂಡಿನ ಮಳೆಗೆರೆದ. ಘಟನೆಯಲ್ಲಿ ಕನಿಷ್ಟ 12 ಮಂದಿ ಗಾಯಗೊಂಡಿರುವುದನ್ನು ಕಂಡಿರುವುದಾಗಿ ರಾಯ್‌ಟರ್ಸ್ ಪತ್ರಿಕೆಯ ಛಾಯಾಚಿತ್ರಗಾಹಕ ತಿಳಿಸಿದ್ದಾರೆ. ನೆಲದ ಮೇಲೆ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿರುವ ಜನರು ಇವರು ತೆಗೆದ ಚಿತ್ರಗಳಲ್ಲಿ ಕಂಡು ಬಂದಿದ್ದಾರೆ. ಘಟನೆಯ ಸಂಪೂರ್ಣ ಚಿತ್ರಣ ದೊರಕುವವರೆಗೆ ಇದೊಂದು ಭಯೋತ್ಪಾದಕ ದಾಳಿ ಎಂದೇ ಪರಿಗಣಿಸಲಾಗುವುದು ಎಂದು ಲಂಡನ್ ಮಹಾನಗರದ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಸಂಸತ್ತಿನ ಹೊರಗೆ ಕಾರೊಂದು ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿರುವುದಾಗಿ ಬಿಬಿಸಿ ವರದಿ ಮಾಡಿದೆ. ಆದರೆ ಈ ವರದಿಯನ್ನು ಪೊಲೀಸರು ದೃಢಪಡಿಸಿಲ್ಲ. ಘಟನೆಯ ಬಳಿಕ ಸಂಸತ್ತಿನ ಒಳಗೆ ಸಶಸ್ತ್ರಧಾರಿ ಪೊಲೀಸರು ಗಸ್ತು ನಡೆಸುತ್ತಿದ್ದಾರೆ ಎಂದು ರಾಯ್‌ಟರ್ ವರದಿ ಮಾಡಿದೆ. ಇದೇ ರೀತಿಯ ಘಟನೆ ನಗರದ ಹಲವೆಡೆ ನಡೆದಿರುವ ಸಾಧ್ಯತೆಯಿದೆ ಎಂದೂ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X