Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶ್ರೀಲಂಕಾ ದಿನಪತ್ರಿಕೆಯಿಂದ ಲಂಕಾ...

ಶ್ರೀಲಂಕಾ ದಿನಪತ್ರಿಕೆಯಿಂದ ಲಂಕಾ ಕ್ರಿಕೆಟ್ ತಂಡಕ್ಕೆ ‘ಶ್ರದ್ದಾಂಜಲಿ’

ವಾರ್ತಾಭಾರತಿವಾರ್ತಾಭಾರತಿ22 March 2017 11:59 PM IST
share
ಶ್ರೀಲಂಕಾ ದಿನಪತ್ರಿಕೆಯಿಂದ ಲಂಕಾ ಕ್ರಿಕೆಟ್ ತಂಡಕ್ಕೆ ‘ಶ್ರದ್ದಾಂಜಲಿ’

 ಕೊಲಂಬೊ, ಮಾ.22: ಟೆಸ್ಟ್ ಆಡುವ ರಾಷ್ಟ್ರಗಳಲ್ಲಿ ದುರ್ಬಲ ತಂಡವೆಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಬಾಂಗ್ಲಾದೇಶ ವಿರುದ್ಧ ಇತ್ತೀಚೆಗೆ ನಡೆದಿದ್ದ ಟೆಸ್ಟ್ ಪಂದ್ಯವೊಂದರಲ್ಲಿ ಸೋತಿರುವ ಶ್ರೀಲಂಕಾ ಕ್ರಿಕೆಟ್ ತಂಡದ ಬಗ್ಗೆ ತೀವ್ರ ಆಕ್ರೋಶ ಹೊರಹಾಕಿರುವ ಶ್ರೀಲಂಕಾದ ದಿನಪತ್ರಿಕೆಗಳು ಶ್ರೀಲಂಕಾ ಕ್ರಿಕೆಟ್ ತಂಡ ಸತ್ತುಹೋಗಿದೆ ಎಂದು ಘೋಷಿಸಿವೆ.

  ಸುಮಾರು 135 ವರ್ಷಗಳ ಹಿಂದೆ ಇಂಗ್ಲೆಂಡ್ ಕ್ರಿಕೆಟ್ ತಂಡವನ್ನು ಅಲ್ಲಿನ ಮಾಧ್ಯಮಗಳು ಸತ್ತು ಹೋಗಿದೆ ಎಂದು ಘೋಷಿಸಿದ್ದಲ್ಲದೆ ಚಿತಾಭಸ್ಮವನ್ನು ಆಸ್ಟ್ರೇಲಿಯಕ್ಕೆ ಕಳುಹಿಸಿಕೊಟ್ಟಿದ್ದವು. ಆ ಬಳಿಕ ಆಸ್ಟ್ರೇಲಿಯ-ಇಂಗ್ಲೆಂಡ್ ನಡುವಿನ ಸರಣಿ ಆ್ಯಶಸ್(ಚಿತಾಭಸ್ಮ) ಸರಣಿ ಎಂದೇ ಖ್ಯಾತಿ ಪಡೆದಿದ್ದು, ಈ ಸರಣಿ ಈಗಲೂ ಪ್ರತಿಷ್ಠಿತ ಸರಣಿಯಾಗಿ ಪರಿಣಮಿಸಿದೆ.

1882ರಲ್ಲಿ ಆಸ್ಟ್ರೇಲಿಯ ತಂಡದ ಇಂಗ್ಲೆಂಡ್ ತಂಡವನ್ನು ಅದರದೇ ನೆಲದಲ್ಲಿ ಸೋಲಿಸಿತ್ತು. ಇದರಿಂದ ಕೆರಳಿದ್ದ ಇಂಗ್ಲೆಂಡ್‌ನಿಂದ ಪ್ರಕಟಿಸಲ್ಪಡುತ್ತಿದ್ದ ಸ್ಪೋರ್ಟಿಂಗ್ ಟೈಮ್ಸ್ ದಿನಪತ್ರಿಕೆಯು ಇಂಗ್ಲೆಂಡ್ ತಂಡಕ್ಕೆ ಶ್ರದ್ದಾಂಜಲಿ ಸಲ್ಲಿಸಿತ್ತು.

ಇದೀಗ ಶ್ರೀಲಂಕಾ ದಿನಪತ್ರಿಕೆಯು ಇಂಗ್ಲೆಂಡ್ ಪತ್ರಿಕೆಯನ್ನು ಅನುಕರಿಸಿದ್ದು, ‘ಶ್ರೀಲಂಕಾ ತಂಡದ ಆತ್ಮಕ್ಕೆ ಶಾಂತಿ ಸಿಗಲಿ’ ಎಂಬ ಶೀರ್ಷಿಕೆಯೊಂದಿಗೆ ಸುದ್ದಿ ಪ್ರಕಟಿಸಿದೆ.

2017ರ ಮಾರ್ಚ್ 19 ರಂದು ಸತ್ತುಹೋಗಿರುವ ಶ್ರೀಲಂಕಾ ಕ್ರಿಕೆಟ್ ತಂಡವನ್ನು ಅಕ್ಕರೆಯಿಂದ ನೆನಪಿಸಿಕೊಳ್ಳುತ್ತೇವೆ ಎಂದು ದಿನಪತ್ರಿಕೆಯಲ್ಲಿ ಬರೆಯಲಾಗಿದೆ.

 ಮೃತದೇಹದ ಅಂತಿಮಸಂಸ್ಕಾರ ನೆರವೇರಿಸಲಾಗಿದ್ದು, ಚಿತಾಭಸ್ಮವನ್ನು ಬಾಂಗ್ಲಾದೇಶಕ್ಕೆ ಕೊಂಡೊಯ್ಯಲಾಗುವುದು ಎಂದು ಪತ್ರಿಕೆ ಬರೆದಿದೆ. ಮಾತ್ರವಲ್ಲ ಶ್ರೀಲಂಕಾ ಕ್ರಿಕೆಟ್ ಅಧ್ಯಕ್ಷರು ಹಾಗೂ ಕ್ರೀಡಾಸಚಿವರು ‘ಶ್ರೀಲಂಕಾ ಕ್ರಿಕೆಟ್’ ಎಂದು ಬರೆದಿರುವ ಸಣ್ಣ ಪೆಟ್ಟಿಗೆಯನ್ನು ಹಿಡಿದಿರುವ ವ್ಯಂಗ್ಯ ಚಿತ್ರವನ್ನು ಪ್ರಕಟಿಸಲಾಗಿದೆ.

ಬಾಂಗ್ಲಾದೇಶ ತಂಡ ರವಿವಾರ ಕೊಲಂಬೊದಲ್ಲಿ ಕೊನೆಗೊಂಡ ದ್ವಿತೀಯ ಟೆಸ್ಟ್ ಪಂದ್ಯವನ್ನು 4 ವಿಕೆಟ್‌ಗಳ ಅಂತರದಿಂದ ಜಯಿಸಿ ತನ್ನ 100ನೆ ಪಂದ್ಯವನ್ನು ಸ್ಮರಣೀಯವಾಗಿಸಿಕೊಂಡಿತ್ತು. ಶ್ರೀಲಂಕಾ ವಿರುದ್ಧ ಆಡಿರುವ 18ನೆ ಪಂದ್ಯದಲ್ಲಿ ಮೊದಲ ಜಯ ಸಾಧಿಸಿ ಐತಿಹಾಸಿಕ ಸಾಧನೆ ಮಾಡಿ ಸರಣಿಯನ್ನು ಸಮಬಲಗೊಳಿಸಿತ್ತು. ಶ್ರೀಲಂಕಾ ತಂಡ ಬಾಂಗ್ಲಾ ವಿರುದ್ಧ 15ರಲ್ಲಿ ಜಯ, 2ರಲ್ಲಿ ಡ್ರಾ ಸಾಧಿಸಿ ಅಜೇಯ ದಾಖಲೆ ಕಾಯ್ದುಕೊಂಡಿತ್ತು.

ಶ್ರೀಲಂಕಾ ತಂಡ ಬಾಂಗ್ಲಾದೇಶ ವಿರುದ್ಧ ಸೋತಿರುವುದು ಟೆಸ್ಟ್ ಕ್ರಿಕೆಟ್‌ನ ಕರಾಳ ದಿನವಾಗಿದೆ. ಬಾಂಗ್ಲಾದೇಶಕ್ಕೆ ಈ ಗೆಲುವು ವಿಶೇಷವಾಗಿದ್ದು, ಟೆಸ್ಟ್ ದೇಶವಾಗಿ ತಾನೆಷ್ಟು ಪ್ರಗತಿಯಾಗಿರುವೆ ಎಂದು ತೋರಿಸಿಕೊಟ್ಟಿದೆ ಎಂದು ‘ಡೈಲಿ ನ್ಯೂಸ್ ಹೆಡ್‌ಲೈನ್’ ಪತ್ರಿಕೆ ಬಾಂಗ್ಲಾದೇಶವನ್ನು ಶ್ಲಾಘಿಸಿದೆ.

ಶ್ರೀಲಂಕಾ ತಂಡದಲ್ಲಿ ಮೂಲಭೂತ ಕ್ರಮಗಳನ್ನು ಕೈಗೊಂಡು ಹಲವು ಬದಲಾವಣೆ ಮಾಡಲಾಗಿದೆ. ಆದಾಗ್ಯೂ ಬಾಂಗ್ಲಾದೇಶ, ಅಫ್ಘಾನಿಸ್ತಾನ ಹಾಗೂ ಐರ್ಲೆಂಡ್ ತಂಡವನ್ನು ಮಣಿಸಲು ಪರದಾಟ ನಡೆಸುತ್ತಿದೆ ಎಂದು ದಿನಪತ್ರಿಕೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X