Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಗನವಾಡಿ ನೌಕರರ ಪ್ರತಿಭಟನೆ ವಾಪಸ್

ಅಂಗನವಾಡಿ ನೌಕರರ ಪ್ರತಿಭಟನೆ ವಾಪಸ್

ವಾರ್ತಾಭಾರತಿವಾರ್ತಾಭಾರತಿ23 March 2017 7:45 PM IST
share
ಅಂಗನವಾಡಿ ನೌಕರರ ಪ್ರತಿಭಟನೆ ವಾಪಸ್

ಬೆಂಗಳೂರು, ಮಾ.23: ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ನಡೆಸಿದ ಎರಡನೆ ಸಂಧಾನ ಸಭೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ವಾಪಸ್ ಪಡೆಯಲಾಗಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವರಲಕ್ಷ್ಮೀ ಘೋಷಿಸಿದ್ದಾರೆ.

ಗುರುವಾರ ನಗರದ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಸಚಿವೆ ಉಮಾಶ್ರೀ ಅವರೊಂದಿಗೆ ನಡೆದ ಸಭೆಯೂ ಯಶಸ್ವಿಯಾಗಿದ್ದು, ಎ.10ರಂದು ಸಭೆ ನಡೆಯಲಿದೆ. ಹೀಗಾಗಿ, ಪ್ರತಿಭಟನೆ ವಾಪಸ್ ಪಡೆಯಲಾಗಿದೆ. ನಿಮಗೆಲ್ಲಾ ಒಪ್ಪಿಗೆ ಇದೆಯಾ ಎಂದು ಪ್ರತಿಭಟನಾನಿರತ ನೌಕರರನ್ನು ಪ್ರಶ್ನಿಸಿದಾಗ, ಸರಿ ಎಂದು ಒಗ್ಗಟ್ಟಿನಿಂದ ಕೂಗಿ ಚಪ್ಪಾಳೆ ತಟ್ಟಿದರು.

ತಾತ್ಕಾಲಿಕವಾಗಿ ನಮ್ಮ ಪ್ರತಿಭಟನೆ ವಾಪಸ್ ಪಡೆಯಲಾಗಿದೆ ಎಂದ ಅವರು, ಸಿಎಂ ಸಿದ್ದರಾಮಯ್ಯ ಅವರೊಂದಿಗೆ 2ಗಂಟೆ ಕಾಲ ಸಭೆ ನಡೆದಿದ್ದು, ಅಂಗನವಾಡಿ ನೌಕರರ ಗೌರವ ಧನ ಹೆಚ್ಚಿಸುವ ಬಗ್ಗೆ ರಾಜ್ಯ ಸರಕಾರ ಭರವಸೆ ನೀಡಿದೆ. ಅಲ್ಲದೆ, ಬಳಿಕ ಬೇಡಿಕೆ ಈಡೇರಿಸಿಲ್ಲ ಎಂದು ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಲಾಗುವುದೆಂದು ವರಲಕ್ಷ್ಮೀ ಎಚ್ಚರಿಕೆ ನೀಡಿದರು.

ಬೆಳಗ್ಗೆ ಹೊರಟ ನೌಕರರು:

ರಾತ್ರಿ 8 ಗಂಟೆಗೆ ಪ್ರತಿಭಟನೆ ವಾಪಸ್ ಪಡೆಯಲಾಗಿದೆ ಎಂದು ಘೋಷಣೆ ಮಾಡಿದ ಕಾರಣ, ಸಾವಿರಾರು ನೌಕರರು ಬೆಳಗ್ಗೆ ತಮ್ಮ ಊರಿಗೆ ಹೋಗಲು ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ಕೆಆರ್ ಮಾರುಕಟ್ಟೆ ಕಡೆ ಸಾಗಿದರು.

ಮತ್ತೆ ಬರುತ್ತೇವೆ:

ಎ.10 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆಯುವ ಸಭೆಯು ಮಹತ್ವದ್ದಾಗಿದ್ದು, ತಮ್ಮ ಬೇಡಿಕೆ ಈಡೇರಿಸಲು ಸರಕಾರ ಮುಂದಾಗಿಲ್ಲ ಎಂದರೆ, ನಾವು ಮತ್ತೆ ಬರುತ್ತೇವೆ ಎಂದು ನೌಕರರ ಸಂಘದ ಮುಖಂಡರು ಹೇಳಿದರು.
ಪ್ರತಿಭಟನೆ ಹಿನ್ನೆಲೆ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಾ.20ರಿಂದ ಅಹೋರಾತ್ರಿ ಧರಣಿ ಗುರುವಾರಕ್ಕೆ ನಾಲ್ಕನೆ ದಿನಕ್ಕೆ ಕಾಲಿಟ್ಟಿತ್ತು. ರಾಜ್ಯ ಸರಕಾರ ಎರಡು ದಿನದ ಹಿಂದೆ ಸಭೆ ಕರೆದು, ಎ.19ರಂದು ಮಾತುಕತೆ ನಡೆಸುವುದಾಗಿ ತಿಳಿಸಿತ್ತು. ಆದರೆ, ಪಟ್ಟುಬಿಡದ ನೌಕರರು, ಪ್ರತಿಭಟನೆ ಮುಂದುವರೆಸಿದ್ದರು. ಬಳಿಕ ಸರಕಾರದೊಂದಿಗೆ ನಡೆದ ಸಂಧಾನ ಸಭೆ ಯಶಸ್ವಿಯಾದ ಕಾರಣ ಪ್ರತಿಭಟನೆ ವಾಪಸ್ ಪಡೆಯಲಾಯಿತು.

ಪ್ರತಿಭಟನಾ ಸ್ಥಳಕ್ಕೆ ಬಂದ ಸಚಿವೆ:

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ, ಗುರುವಾರ ಸಂಜೆ ಪ್ರತಿಭಟನೆಯ ಸ್ಥಳಕ್ಕೆ ಭೇಟಿ ನೀಡಿ, ನಿಮ್ಮೆಂದಿಗೆ ಸರಕಾರ ಇದೆ. ಯಾರು ಹೆದರುವ ಅವಶ್ಯಕತೆ ಇಲ್ಲ. ನಿಮ್ಮ ಬೇಡಿಕೆಗಳನ್ನು ಈಡೇರಿಸಲು ನಾವು ಬದ್ಧ ಎಂದು ಹೇಳಿದರು.

ಸರಕಾರ ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು. ಅಲ್ಲದೆ, ಚಿಕ್ಕಮಕ್ಕಳ ಜವಾಬ್ದಾರಿ ಪಡೆಯುವ ಮತ್ತು ಶಿಕ್ಷಣ ನೀಡುವ ಇವರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ.
- ಸಾಲು ಮರದ ತಿಮ್ಮಕ್ಕ

ಅಂಗನವಾಡಿ ನೌಕರರ ಪ್ರತಿಭಟನೆಯು ರಾಷ್ಟ್ರವ್ಯಾಪ್ತಿ ಸುದ್ದಿಯಾಗಿದೆ. ಮಹಿಳೆಯರಿಗೆ ಸಮಾನತೆ ದೊರೆಯುವ ಸಮಾಜ ನಿರ್ಮಾಣವಾಗಬೇಕು. ಅಲ್ಲದೆ, ಕನಿಷ್ಠ 10 ಸಾವಿರ ರೂ. ವೇತನ ನೀಡಲು ಸರಕಾರ ಮುಂದಾಗಬೇಕು. ಇವರೆಲ್ಲಾ ಬಡವರಲ್ಲ, ದುಡಿಯುವ ವರ್ಗ. ಇವರಿಗೆ ಸದಾ ಬೆಂಬಲ ನೀಡುವೆ
-ಚೇತನ್, ಚಿತ್ರನಟ

ಹೋರಾಟಕ್ಕೆ ಜಯ ಸಿಕ್ಕಿದೆ:

ಕಳೆದ ನಾಲ್ಕು ದಿನಗಳಿಂದ ನಡೆದ ಅಹೋರಾತ್ರಿ ಧರಣಿಗೆ ಜಯ ಸಿಕ್ಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಎ.19ರ ಬದಲಾಗಿ ಎ.10ರಂದು ಸಭೆ ಕರೆದಿದ್ದಾರೆ. ಅಲ್ಲದೆ, ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದರೆ, ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು.
- ಎಸ್.ವರಲಕ್ಷ್ಮೀ, ಅಧ್ಯಕ್ಷೆ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X