Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಮದು ಗೋಧಿಗೆ ಮತ್ತೆ ಆಮದು ಸುಂಕ: ಕೇಂದ್ರ...

ಆಮದು ಗೋಧಿಗೆ ಮತ್ತೆ ಆಮದು ಸುಂಕ: ಕೇಂದ್ರ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ23 March 2017 7:58 PM IST
share
ಆಮದು ಗೋಧಿಗೆ ಮತ್ತೆ ಆಮದು ಸುಂಕ: ಕೇಂದ್ರ ಚಿಂತನೆ

ಹೊಸದಿಲ್ಲಿ,ಮಾ.23: ಈ ಬಾರಿ ಭರ್ಜರಿ ಫಸಲು ಬಂದಿರುವ ಕಾರಣ ರೈತರ ಹಿತಾಸಕ್ತಿಯನ್ನು ರಕ್ಷಿಸಲು ಗೋಧಿ ಮೇಲಿನ ಆಮದು ಸುಂಕವನ್ನು ಮತ್ತೆ ಹೇರುವ ಕುರಿತು ಕೇಂದ್ರ ಸರಕಾರ ಪರಿಶೀಲನೆ ನಡೆಸುತ್ತಿರುವುದಾಗಿ ಆಹಾರ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ರಾಮ್‌ವಿಲಾಸ್ ಪಾಸ್ವಾನ್ ಗುರುವಾರ ತಿಳಿಸಿದ್ದಾರೆ.

    ಸರಕಾರವು ನಿಗದಿಪಡಿಸಿದ ಕನಿಷ್ಠ ದರಕ್ಕಿಂತಲೂ ಕಡಿಮೆ ಬೆಲೆಗೆ ರೈತರು ಗೋಧಿಯನ್ನು ಮಾರಾಟಮಾಡಬೇಕಾದ ಪರಿಸ್ಥಿತಿಯಿದೆಯೆಂದು ಲೋಕಸಭೆಯಲ್ಲಿ ಪ್ರತಿಪಕ್ಷ ಸದಸ್ಯರು ಕಳವಳ ವ್ಯಕ್ತಪಡಿಸಿದಾಗ ಅವರು ಈ ಮಾಹಿತಿ ನೀಡಿದರು. 2006 ಹಾಗೂ 2015ರ ನಡುವೆ ಗೋಧಿ ಆಮದಿಗೆ ಸುಂಕವನ್ನು ವಿಧಿಸಲಾಗುತ್ತಿರಲಿಲ್ಲ. 2015ರಲ್ಲಿ ಆಮದು ಗೋಧಿಯ ಮೇಲೆ ಶೇ.25ರಷ್ಟು ಅಬಕಾರಿ ಸುಂಕವನ್ನು ವಿಧಿಸಲಾಗಿತ್ತಾದರೂ, ತರುವಾಯ ಅದನ್ನು ಶೇ.10ಕ್ಕೆ ಇಳಿಸಲಾಯಿತು ಮತ್ತು ಕಳೆದ ವರ್ಷದ ಡಿಸೆಂಬರ್‌ನಲ್ಲಿ ಅದನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿತ್ತು ಎಂದು ಪಾಸ್ವಾನ್ ತಿಳಿಸಿದರು.

  ಗೋಧಿ ಬೆಳೆಯುವ ಅನೇಕ ಪ್ರದೇಶಗಳಲ್ಲಿ ಕಳೆದ ವರ್ಷ ಅಲಿಕಲ್ಲು ಮಳೆಯಾದ ಹಿನ್ನೆಲೆಯಲ್ಲಿ ಗೋಧಿ ಉತ್ಪಾದನೆಯಲ್ಲಿ ಕುಸಿತವುಂಟಾಗಿ,ಅದರ ಬೆಲೆಯಲ್ಲಿ ಭಾರೀ ಏರಿಕೆಯಾಗಬಹುದೆಂಬ ಆತಂಕದಿಂದ ಅಬಕಾರಿ ಸುಂಕವನ್ನು ತೆಗೆದುಹಾಕಲಾಗಿತ್ತು. ಆದರೆ ಈ ವರ್ಷ ದೇಶದಲ್ಲಿ 96.64 ದಶಲಕ್ಷ ಟನ್ ದಾಖಲೆ ಪ್ರಮಾಣದಲ್ಲಿ ಗೋಧಿ ಉತ್ಪಾದನೆಯಾಗಿದ್ದು, ಇದರ ಜೊತೆಗೆ 60.50 ಲಕ್ಷ ಟನ್ ದಾಸ್ತಾನಿನಲ್ಲಿದೆಯೆಂದರು.

   ಆದಾಗ್ಯೂ ಅಕಾಲಿಕ ಮಳೆ ಹಾಗೂ ಅಲಿಕಲ್ಲು ಸುರಿದಲ್ಲಿ ಬೆಳೆಹಾನಿಯಾಗುವ ಸಾಧ್ಯತೆಯಿರುವುದರಿಂದ, ಮುನ್ನೆಚ್ಚರಿಕೆಯಾಗಿ ಸರಕಾರವು ಅಮದು ಸುಂಕ ಹೇರುವ ಬಗ್ಗೆ ಅವಸರದ ನಿರ್ಧಾರವನ್ನು ಕೈಗೊಳ್ಳದು ಎಂದರು. ಆದಾಗ್ಯೂ ಆಮದು ಸುಂಕ ಹೇರಿಕೆಯು ಸರಕಾರದ ಪರಿಶೀಲನೆಯಲ್ಲಿಲ್ಲ, ಈ ಬಗ್ಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದರು.

     ಸಮಾಜವಾದಿ ಪಕ್ಷದ ನಾಯಕ ರಾಮ್‌ಗೋಪಾಲ್ ಯಾದವ್ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸುತ್ತಾ,ಅಮದು ಗೋಧಿ ಅಗ್ಗದ ದರದಲ್ಲಿ ದೊರೆಯುವ ಕಾರಣ, ಮಧ್ಯಪ್ರದೇಶ ಹಾಗೂ ಗುಜರಾತ್‌ಗಳಲ್ಲಿ ರೈತರು ತಾವು ಬೆಳೆದ ಗೋಧಿಯನ್ನ್ನು ಕ್ವಿಂಟಾಲ್‌ಗೆ 1625 ರೂ.ಗಳ ಕನಿಷ್ಠ ಬೆಂಬಲ ದರದಲ್ಲಿ ಮಾರಬೇಕಾದ ಪರಿಸ್ಥಿತಿಯಿತ್ತು ಎಂದು ಹೇಳಿದ್ದರು. ಗೋಧಿ ಬೆಳೆಯಲು ಪ್ರತಿಕ್ವಿಂಟಾಲ್‌ಗೆ 1900 ರೂ. ವೆಚ್ಚವಾಗುತ್ತಿದ್ದು, ಹಾಲಿ ಕನಿಷ್ಠ ಬೆಂಬಲ ದರದಿಂದ ರೈತರಿಗೆ ಪ್ರತಿ ಕ್ವಿಂಟಾಲ್‌ಗೆ 300 ರೂ. ನಷ್ಟವಾಗುತ್ತಿದೆ ಎಂದು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X