Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಬೇಡ್ಕರ್ ವಿಚಾರವನ್ನು ಅಪಹರಿಸಿರುವ...

ಅಂಬೇಡ್ಕರ್ ವಿಚಾರವನ್ನು ಅಪಹರಿಸಿರುವ ಮಾಕ್ಸ್‌ವಾದಿಗಳು ಸಮಾಜದ ದಾರಿ ತಪ್ಪಿಸುತ್ತಿದ್ದಾರೆ: ಡಾ.ರೋಹಿಣಾಕ್ಷ

ವಾರ್ತಾಭಾರತಿವಾರ್ತಾಭಾರತಿ23 March 2017 11:06 PM IST
share
ಅಂಬೇಡ್ಕರ್ ವಿಚಾರವನ್ನು ಅಪಹರಿಸಿರುವ ಮಾಕ್ಸ್‌ವಾದಿಗಳು ಸಮಾಜದ ದಾರಿ ತಪ್ಪಿಸುತ್ತಿದ್ದಾರೆ: ಡಾ.ರೋಹಿಣಾಕ್ಷ

ಪುತ್ತೂರು, ಮಾ.23: ಅಂಬೇಡ್ಕರ್ ಯಾವುದೇ ಒಂದು ಜಾತಿ ಸಮುದಾಯದ ಸೊತ್ತಲ್ಲ. ಅವರು ಮನುಕುಲದ ಆಸ್ತಿ. ಅವರನ್ನು ಜಾತಿ ಸಮುದಾಯಗಳಿಗೆ ಸೀಮಿತ ಮಾಡುವುದು ಅವರಿಗೆ ಅಪಚಾರ ಮಾಡಿದಂತೆ. ಅವರೊಬ್ಬ ಪ್ರಖರ ರಾಷ್ಟ್ರೀಯವಾದಿ. ಆದರೆ ಅಂಬೇಡ್ಕರ್ ವಿಚಾರಗಳನ್ನು ಮಾರ್ಕ್ಸ್‌ವಾದಿಗಳು ಅಪಹರಿಸಿ ಸಮಾಜದ ದಾರಿ ತಪ್ಪಿಸುತ್ತಾ ಚಳವಳಿಗಳನ್ನು ದಾರಿ ತಪ್ಪಸುತ್ತಿದ್ದಾರೆ ಎಂದು ವಿವೇಕಾನಂದ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ರೋಹಿಣಾಕ್ಷ ಶಿರ್ಲಾಲು ಹೇಳಿದರು.

ಅವರು ಬುಧವಾರ ರಾಜ್ಯ ಸಮಾಜ ಕಲ್ಯಾಣ ಇಲಾಖೆ ವಿವೇಕಾನಂದ ಕಾಲೇಜಿನಲ್ಲಿ ಅನ್ಯಾನ್ಯ ಸಂಘಗಳ ಆಯೋಜಿಸಿದ್ದ ಅಂಭೇಡ್ಕರ್ ಜ್ಞಾನ ದರ್ಶನ ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು.

ದಲಿತ ಸಮುದಾಯವನ್ನು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮೇಲೆತ್ತುವ ಕೆಲಸವನ್ನು ಮಾಡಿದ ಅಂಬೇಡ್ಕರ್ ತನ್ನ ಕೊನೆಯ ದಿನಗಳಲ್ಲಿ ತನ್ನ ಸಮುದಾಯದ ಆಕ್ರೋಷ, ಅಸಹನೆಗಳು ಕಮ್ಯುನಿಷ್ಟರ ಕೋವಿಗಳಿಗೆ ಸಿಡಿಗುಂಡುಗಳಾಗಬಾರದು ಎನ್ನುತ್ತಾ ಕಮ್ಯುನಿಷ್ಟರು ಮತ್ತು ದಲಿತರ ನಡುವೆ ತಾನು ಅಡ್ಡಗೋಡೆ ಎಂದು ಹೇಳುತ್ತಿದ್ದರು. ಧರ್ಮ ಬಡವರ ಅವಶ್ಯಕತೆಯಾಗಿದ್ದು ಅದು ಶೋಷಣಾ ರಹಿತವಾಗಬೇಕು ಎನ್ನುತ್ತಾ ಬೌದ್ಧ ಧರ್ಮಕ್ಕೆ ಮತಾಂತರವಾದರೇ ಹೊರತು ಧರ್ಮವನ್ನು ಕಮ್ಯುನಿಷ್ಟರ ಹಾಗೆ ಅಫೀಮು ಎನ್ನಲಿಲ್ಲ. ಸಶಕ್ತ ಭಾರತವನ್ನು ಕಟ್ಟುವಲ್ಲಿ ಅಂಬೇಡ್ಕರ್ ವಿಚಾರ ದಾರಿ ದೀಪ ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಗೋವಿಂದರಾಜು ಮಾತನಾಡಿ ಅಂಬೇಡ್ಕರ್ ಹಿಂದೂ ಕೋಡ್ ಬಿಲ್ ಮೂಲಕ ಸಮಾಜದಲ್ಲಿ ಸಮಾನತೆಯನ್ನು ತರುವ ಪ್ರಯತ್ನ ಮಾಡಿದರು. ಈ ಕಾನೂನಿನಿಂದ ದೇಶದ ಮಹಿಳೆಯರು ಅತೀ ಹೆಚ್ಚು ಪ್ರಯೋಜನ ಪಡೆಯುವಂತಾಯಿತು. ಆಸ್ತಿಯ ಹಕ್ಕಿನಲ್ಲಿ ಸಮಾನ ಪಾಲು ಪಡೆಯಲು ಸಾಧ್ಯ ವಾಯಿತು ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ರಘು ಧರ್ಮಸೇನ ಮಾತನಾಡಿ ಅಂಬೇಡ್ಕರ್ ಜಾತಿ ವಿನಾಶವನ್ನು ಬಯಸಿದರು. ಅದಕ್ಕಾಗಿ ಶಿಕ್ಷಣವನ್ನು ಅವರು ಮಾಧ್ಯಮವಾಗಿಸಿಕೊಂಡರು. ಶಿಕ್ಷಣದಿಂದ ಉನ್ನತ ಅಧಿಕಾರವನ್ನು ಪಡೆಯಲು ಸಾದ್ಯ . ಇದರಿಂದ ಜಾತಿಯ ಅಸಮಾನತೆಯನ್ನು ಕಳೆದುಕೊಳ್ಳಲು ಸಾಧ್ಯ ಎಂದರು. ಆದರೆ ಇಂದು ಸಮಾಜ ಅಸ್ಪಶ್ಯತೆಯನ್ನು ನಿವಾರಿಸುವ ಬದಲು ಅದರ ಲಕ್ಷಣಗಳಿಗೆ ಔಷಧಿ ಮಾಡುತ್ತಿದೆ ಎಂದರು.

 ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ ಸಂವಿದಾನ ಶಿಲ್ಪಿಯಾದ ಅಂಬೇಡ್ಕರ್ ಸತತ ಪರಿಶ್ರಮದಿಂದ ಆ ಸಾಧನೆಯನ್ನು ಮಾಡುವುದಕ್ಕೆ ಸಾಧ್ಯವಾಯಿತು. ಬಾಲ್ಯದಿಂದ ತೊಡಗಿ ಜೀವನವೆಲ್ಲಾ ಅಪಮಾನಗಳನ್ನು ಎದುರಿಸಿದರೂ ಅವರು ದೇಶವಾಸಿಗಳನ್ನು ಶಿಕ್ಷಣ, ಸಹೋದರತೆ , ಸ್ವಾವಲಂಬನೆಯಿಂದ ಮಾತ್ರ ಮೇಲೆತ್ತಲು ಸಾಧ್ಯ ಎಂದು ಹೇಳಿದರು. ಅವರ ಜ್ಞಾನರಾಶಿಯನ್ನು ಪರಿಗಣಿಸಿಯೇ ವಿಶ್ವ ಸಂಸ್ಥೆ ಅವರ ಜನ್ಮ ದಿನವನ್ನು ಜಾಗತಿಕ ಜ್ಞಾನ ದಿನವಾಗಿ ಆಚರಿಸುತ್ತಿರುವುದು ಎಂದರು.

ವೇದಿಕೆಯಲ್ಲಿ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿಯರಾದ ಅನಿತಾ ಕಾಮತ್ ಹಾಗೂ ಕವಿತಾ ಉಪಸ್ಥಿತರಿದ್ದರು. ಅಂಬೇಡ್ಕರ್ ಜ್ಞಾನ ದರ್ಶನ ಸಮಾರಂಭದ ಜಿಲ್ಲಾ ಸಂಯೋಜಕಿಯಾದ ಪದ್ಮಾವತಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ವಿದ್ಯಾ ಎಸ್ ವಂದಿಸಿದರು. ವಿದ್ಯಾರ್ಥಿ ವರುಣ್ ಕೆ.ಪಿ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X