Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರೈನಾ ಬಿಸಿಸಿಐ ಗುತ್ತಿಗೆ ಕಳೆದುಕೊಳ್ಳಲು...

ರೈನಾ ಬಿಸಿಸಿಐ ಗುತ್ತಿಗೆ ಕಳೆದುಕೊಳ್ಳಲು ಕಾರಣ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ24 March 2017 12:01 AM IST
share
ರೈನಾ ಬಿಸಿಸಿಐ ಗುತ್ತಿಗೆ ಕಳೆದುಕೊಳ್ಳಲು ಕಾರಣ ಬಹಿರಂಗ

ಹೊಸದಿಲ್ಲಿ, ಮಾ.23: ಒಂದೊಮ್ಮೆ ಭಾರತೀಯ ಕ್ರಿಕೆಟ್ ತಂಡದ ಸೀಮಿತ ಓವರ್ ಕ್ರಿಕೆಟ್‌ನಲ್ಲಿ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದ ಎಡಗೈ ಬ್ಯಾಟ್ಸ್‌ಮನ್ ಸುರೇಶ್ ರೈನಾ ಹೆಸರು ಬುಧವಾರ ಬಿಸಿಸಿಐ ಪ್ರಕಟಿಸಿರುವ ಆಟಗಾರರ ಕೇಂದ್ರೀಯ ಗುತ್ತಿಗೆ ಪಟ್ಟಿಯಲ್ಲಿ  ಮಾಯವಾಗಿತ್ತು.

223 ಏಕದಿನ ಪಂದ್ಯಗಳಲ್ಲಿ 5,568 ರನ್ ಹಾಗೂ 65 ಟ್ವೆಂಟಿ-20 ಪಂದ್ಯಗಳಲ್ಲಿ 1,307 ರನ್ ಗಳಿಸಿದ್ದ ರೈನಾರನ್ನು ಕೇಂದ್ರ ಗುತ್ತಿಗೆ ಪಟ್ಟಿಯಿಂದ ಕೈಬಿಟ್ಟಿರುವುದೇಕೆ? ಕೆಲವು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ. 30ರ ಹರೆಯದ ರೈನಾರನ್ನು ಆಟಗಾರರ ಗುತ್ತಿಗೆ ಪಟ್ಟಿಯಿಂದ ಕೈಬಿಡಲು ಕಾರವೇನೆಂಬುದನ್ನು ಆಂಗ್ಲ ಪತ್ರಿಕೆಯೊಂದು ಬಹಿರಂಗಪಡಿಸಿದೆ.

 ರೈನಾ 2005ರಲ್ಲಿ ವಿವಾಹವಾದ ಬಳಿಕ ಕ್ರಿಕೆಟ್‌ನಲ್ಲಿ ಆಸಕ್ತಿ ಕಳೆದುಕೊಂಡಿದ್ದಾರೆ. ತನ್ನ ಕುಟುಂಬದತ್ತ ಹೆಚ್ಚು ಗಮನ ಹರಿಸುತ್ತಿದ್ದಾರೆ. ಭಾರತೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳುವುದಕ್ಕೆ ಹೆಚ್ಚಾಗಿ ಬೇರೊಂದು ವ್ಯವಹಾರ ಆರಂಭಿಸುವತ್ತ ಹೆಚ್ಚು ವ್ಯಸ್ತರಾಗಿದ್ದಾರೆ. ರೈನಾ ಈ ಋತುವಿನಲ್ಲಿ ಉತ್ತರಪ್ರದೇಶದ ಪರ ಕೇವಲ ಮೂರು ರಣಜಿ ಪಂದ್ಯಗಳನ್ನು ಆಡಿದ್ದರು. ದೇಶೀಯ ಟ್ವೆಂಟಿ-20 ಹಾಗೂ ಏಕದಿನ ಟೂರ್ನಮೆಂಟ್‌ನಿಂದಲೂ ದೂರ ಉಳಿದಿದ್ದರು ಎಂದು ಉತ್ತರಪ್ರದೇಶದ ಮಾಜಿ ಕೋಚ್‌ವೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಆಂಗ್ಲಪತ್ರಿಕೆ ವರದಿ ಮಾಡಿದೆ.

‘‘ರೈನಾ ಗೃಹಸ್ಥನಾದ ಬಳಿಕ ಅವರ ಆದ್ಯತೆ ಬದಲಾಗಿದೆ. ಅವರು ಕ್ರಿಕೆಟ್‌ನತ್ತ ಹೆಚ್ಚು ಏಕಾಗ್ರತೆವಹಿಸದೇ ಇರುವುದನ್ನು ನಾನು ಗಮನಿಸಿದ್ದೇನೆ. ಅವರೋರ್ವ ನಿರಾಸಕ್ತಿಯ ಕ್ರಿಕೆಟಿಗನಾಗಿದ್ದಾರೆ. ಅವರು ಈ ಋತುವಿನಲ್ಲಿ ಉತ್ತರಪ್ರದೇಶದ ಪರ ಕೇವಲ 3 ರಣಜಿ ಪಂದ್ಯಗಳನ್ನಾಡಿದ್ದಾರೆ. ಮುಷ್ತಾಕ್ ಅಲಿ ಹಾಗೂ ವಿಜಯ್ ಹಝಾರೆ ಟೂರ್ನಮೆಂಟ್‌ಗಳಲ್ಲೂ ಭಾಗವಹಿಸಿಲ್ಲ ಎಂದು ಉತ್ತರಪ್ರದೇಶದ ಮಾಜಿ ಕೋಚ್ ಪತ್ರಿಕೆಗೆ ತಿಳಿಸಿದ್ದಾರೆ.

ರೈನಾ ಭಾರತೀಯ ಕ್ರಿಕೆಟ್ ತಂಡದಲ್ಲಿ ಟೆಸ್ಟ್ ಅಥವಾ ಏಕದಿನ ಕ್ರಿಕೆಟ್‌ಗೆ ವಾಪಸಾಗುವ ಸಾಧ್ಯತೆ ಕ್ಷೀಣಿಸುತ್ತಿದೆ. ಅವರೀಗ ಟ್ವೆಂಟಿ-20 ಪಂದ್ಯದತ್ತ ಮಾತ್ರ ಗಮನ ಹರಿಸುತ್ತಿದ್ದು, ಎಲ್ಲವೂ ಐಪಿಎಲ್‌ನಲ್ಲಿ ಅವರ ಪ್ರದರ್ಶನ ಅವಲಂಬಿತವಾಗಿದೆ. ಐಪಿಎಲ್‌ನಲ್ಲಿ ರೈನಾ ಗುಜರಾತ್ ಲಯನ್ಸ್ ತಂಡದ ನಾಯಕನಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X