Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶದ ಶಾಲೆಗಳಲ್ಲಿ ಬೆಚ್ಚಿ...

ಉತ್ತರ ಪ್ರದೇಶದ ಶಾಲೆಗಳಲ್ಲಿ ಬೆಚ್ಚಿ ಬೀಳಿಸುವ ಪರೀಕ್ಷಾ ಅವ್ಯವಹಾರಗಳು

ರಾಜಾರೋಷವಾಗಿ ಕಾರ್ಯಾಚರಿಸುವ ನಕಲಿ ಮಾಫಿಯಾ

ವಾರ್ತಾಭಾರತಿವಾರ್ತಾಭಾರತಿ24 March 2017 12:10 PM IST
share
ಉತ್ತರ ಪ್ರದೇಶದ ಶಾಲೆಗಳಲ್ಲಿ ಬೆಚ್ಚಿ ಬೀಳಿಸುವ ಪರೀಕ್ಷಾ ಅವ್ಯವಹಾರಗಳು

ಮಥುರಾ, ಮಾ.23: ಉತ್ತರ ಪ್ರದೇಶದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಗುರುವಾರ ನಡೆದ 10ನೇ ತರಗತಿ ಬೋರ್ಡ್ ಪರೀಕ್ಷೆಗಳಲ್ಲಿ ನಡೆದಿರುವ ಅವ್ಯವಹಾರಗಳು ಎಂಥವರನ್ನೂ ಬೆಚ್ಚಿ ಬೀಳಿಸಬಹುದು. ಆಡಳಿತವು ಎಲ್ಲವೂ ಸುಸೂತ್ರವಾಗಿ ನಡೆದಿದೆ ಎಂದು ಹೇಳಬಹುದಾದರೂ, ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ಪ್ರತಿನಿಧಿಯ ಅನುಭವ ಮಾತ್ರ ಬೇರೆ ಏನನ್ನೋ ಹೇಳುತ್ತಿದೆ.

ಪರೀಕ್ಷಾ ಕೇಂದ್ರಗಳಿಂದ ಪ್ರತೀ 500 ಮೀಟರುಗಳ ಅಂತರಲ್ಲಿ ‘ಸ್ಪಾಟ್ಟರು’ಗಳು ತಮ್ಮ ಬೈಕುಗಳನ್ನು ನಿಲ್ಲಿಸಿ ಯಾರಾದರೂ ಶಂಕಾಸ್ಪದ ವ್ಯಕ್ತಿಗಳು ಬರುತ್ತಿದ್ದಾರೇನೋ ಎಂದು ಗಮನಿಸುತ್ತಿದ್ದರು. ಹಾಗೇನಾದರೂ ಇದ್ದರೆ ಅವರು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ತಮ್ಮ ಏಜಂಟರಿಗೆ ತಕ್ಷಣ ಸುದ್ದಿ ಮುಟ್ಟಿಸುತ್ತಾರೆ.
ಅಚ್ಚರಿಯೆಂದರೆ ಪತ್ರಿಕಾ ಪ್ರತಿನಿಧಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸಿದರೂ ಯಾರೂ ಅವರನ್ನು ತಡೆಯಲಿಲ್ಲ. ಅಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹೆತ್ತವರು ಎಲ್ಲರೂ ಇದ್ದರು.
ತರಗತಿಯಲ್ಲಿ ಎಲ್ಲಾ ಡೆಸ್ಕುಗಳೂ ಒಂದಕ್ಕೊಂದು ತಾಗಿಯೇ ಜೋಡಿಸಲ್ಪಟ್ಟಿತ್ತು ಹಾಗೂ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳಲ್ಲಿ ಬರೆಯುತ್ತಿದ್ದರು. ಕಿಟಿಕಿಯ ಹೊರಗೆ ನಿಂತ ವ್ಯಕ್ತಿ ‘‘ಮೊದಲ ಪ್ರಶ್ನೆಯ ಉತ್ತರ ಬರೆದಾಯಿತೇ ? ಎರಡನೇ ಉತ್ತರ ಬರೆಯಿರಿ’’ ಎಂದು ಹೊರಗಿನಿಂದಲೇ ಉತ್ತರ ಹೇಳುತ್ತಿದ್ದನು. ಈ ದೃಶ್ಯ ಮಥುರಾದ ಶ್ಯಾಮಲಾಲ್ ಇಂಟರ್ ಕಾಲೇಜಿನದ್ದಾಗಿತ್ತು. ಇಂತಹುದೇ ಪರಿಸ್ಥಿತಿ ರಯಾದ ರಾಧಾ ಗೋಪಾಲ್ ಇಂಟರ್ ಕಾಲೇಜಿನಲ್ಲೂ ಇತ್ತು. ಸಂಸ್ಥೆಗಳಲ್ಲಿ ಶಿಕ್ಷಕರು ಮತ್ತು ಪೊಲೀಸರಿದ್ದರೂ ಅವರ ಮೂಗಿನ ನೇರಕ್ಕೇ ನಡೆಯುತ್ತಿರುವ ಈ ಅವ್ಯವಹಾರಕ್ಕೆ ಯಾರೂ ತುಟಿ ಪಿಟಿಕ್ಕೆನ್ನುತ್ತಿರಲಿಲ್ಲ.
ಮೂಲಗಳ ಪ್ರಕಾರ ಈ ನಕಲು ಮಾಫಿಯಾ ತನ್ನ ದರಗಳನ್ನೂ ನಿಗದಿ ಪಡಿಸಿದೆ. ತಾವೇ ಉತ್ತರಗಳನ್ನು ಸಿದ್ಧಪಡಿಸಿಕೊಂಡು ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಂದ ರೂ.5000 ಪಡೆಯಲಾಗುತ್ತಿದ್ದರೆ, ಸರಿಯಾದ ಉತ್ತರಗಳನ್ನು ಏಜಂಟರಿಂದ ತಿಳಿದುಕೊಂಡು ಅವುಗಳನ್ನು ಬರೆಯುವ ವಿದ್ಯಾರ್ಥಿಗಳಿಗೆ ರೂ.10,000 ವಿಧಿಸಲಾಗುತ್ತದೆ. ತರುವಾಯ ಪರೀಕ್ಷಾ ಕೇಂದ್ರಗಳಿಗೆ ಬಂದು ಹಾಜರಿ ಹಾಕಿ ನಂತರ ಏಜಂಟರುಗಳ ಮುಖಾಂತರವೇ ಉತ್ತರ ಪತ್ರಿಕೆ ಬರೆಸುವ ವಿದ್ಯಾರ್ಥಿಗಳಿಂದ ರೂ.15000 ಪಡೆಯಲಾಗುತ್ತದೆ ಎನ್ನುತ್ತವೆ ಮೂಲಗಳು.

ವಿದ್ಯಾರ್ಥಿಗಳು ಆರಿಸಿದ ಪ್ಯಾಕೇಜಿನನ್ವಯ ಅವರನ್ನು ಕೂರಿಸಿ ಪರೀಕ್ಷೆ ಬರೆಯುವಂತೆ ಮಾಡಲಾಗುತ್ತದೆ. ಕೆಲವು ಕಡೆಗಳಲ್ಲಿ ಹೆತ್ತವರೂ ಉತ್ತರ ಬರೆಯಲು ತಮ್ಮ ಮಕ್ಕಳಿಗೆ ಸಹಾಯ ಮಾಡುತ್ತಿರುವುದು ಕಾಣಿಸಿದೆ.
ಮಥುರಾ ಎಡಿಎಂಎಕೆ ಅವಸ್ಥಿ ಪ್ರಕಾರ ಈ ಪರೀಕ್ಷಾ ಅವ್ಯವಹಾರಗಳನ್ನು ತಡೆಯಲು ಸರ್ವ ಪ್ರಯತ್ನ ನಡೆಸಲಾಗುತ್ತಿದೆ. ಇಲ್ಲಿಯ ತನಕ ಅವ್ಯವಹಾರ ನಡೆಸಿದ 55 ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅವರು ಹೇಳಿದ್ದಾರೆ.

ಈಗಾಗಲೇ ಅವ್ಯವಹಾರಗಳಿಗಾಗಿ 35 ಶಾಲೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಮಥುರಾದ ಜಿಲ್ಲಾ ಶಿಕ್ಷಣ ಅಧಿಕಾರಿ ಇಂದ್ರಪ್ರಕಾಶ್ ಸಿಂಗ್ ಹೇಳುತ್ತಾರೆ. ಅವ್ಯವಹಾರ ನಡೆದಿದ್ದು ಸಾಬೀತಾದರೆ ಅಂತಹ ಶಾಲೆಗಳನ್ನು ಐದು ವರ್ಷಗಳ ಕಾಲ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X