Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಸ್ವಸ್ಥ ತಾಯಿಯ ಐಫೋನ್ ಅನ್ ಲಾಕ್ ಮಾಡಿ...

ಅಸ್ವಸ್ಥ ತಾಯಿಯ ಐಫೋನ್ ಅನ್ ಲಾಕ್ ಮಾಡಿ ಎಮರ್ಜನ್ಸಿ ಸೇವೆಗೆ ಕರೆ ಮಾಡಿದ 4ರ ಪೋರ!

ವಾರ್ತಾಭಾರತಿವಾರ್ತಾಭಾರತಿ24 March 2017 3:36 PM IST
share
ಅಸ್ವಸ್ಥ ತಾಯಿಯ ಐಫೋನ್ ಅನ್ ಲಾಕ್ ಮಾಡಿ ಎಮರ್ಜನ್ಸಿ ಸೇವೆಗೆ ಕರೆ ಮಾಡಿದ 4ರ ಪೋರ!

ಲಂಡನ್, ಮಾ.24: ಈಗಿನ ಮಕ್ಕಳು ಎಷ್ಟು ಬುದ್ಧಿವಂತರು ಹಾಗೂ ಚತುರರು ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಈಗಿನ ಅತ್ಯಾಧುನಿಕ ಸಾಧನಗಳಾದ ಮೊಬೈಲ್ ಫೋನ್, ಕಂಪ್ಯೂಟರುಗಳನ್ನು ಉಪಯೋಗಿಸುವಲ್ಲಿ ಹಿರಿಯರಿಗಿಂತಲೂ ಮಕ್ಕಳೇ ಹೆಚ್ಚು ನಿಪುಣರು ಎಂದು ಹಲವರು ಹೇಳುವುದುಂಟು. ಮಕ್ಕಳ ಈ ಜ್ಞಾನ ತುರ್ತು ಸಂದರ್ಭಗಳಲ್ಲೂ ಹೇಗೆ ನೆರವಾಗಬಹುದೆನ್ನುವುದಕ್ಕೆ ಇಂಗ್ಲೆಂಡಿನಲ್ಲಿ ನಡೆದ ಘಟನೆ ಒಂದು ಜ್ವಲಂತ ಉದಾಹರಣೆಯಾಗಿದೆ.

ಮಾರ್ಚ್ 7ರಂದು ರೋಮನ್ ಎಂಬ ನಾಲ್ಕು ವರ್ಷದ ಬಾಲಕ ತನ್ನ ಅವಳಿ ಸಹೋದರ ಹಾಗೂ ಕಿರಿಯ ಸಹೋದರನೊಂದಿಗೆ ಮನೆಯಲ್ಲಿದ್ದಾಗ ಅವರ ತಾಯಿ ಒಮ್ಮೆಗೇ ಕುಸಿದು ಬಿದ್ದಿದ್ದಳು. ಆಕೆ ಮೇಲೇಳದೇ ಇದ್ದಾಗ ರೋಮನ್ ಸಮಯಪ್ರಜ್ಞೆಯಿಂದ ಆಕೆಯ ಬೆರಳನ್ನು ಆಕೆಯ ಐಫೋನಿಗೆ ಹಿಡಿದು ಫಿಂಗರ್ ಪ್ರಿಂಟ್ ಸ್ಕ್ಯಾನರ್ ಮೂಲಕ ಅದನ್ನು ಅನ್ ಲಾಕ್ ಮಾಡಿ, ಇಂಗ್ಲೆಂಡಿನ ಎಮರ್ಜನ್ಸಿ ಸಂಖ್ಯೆ 999ಗೆ 'ಸಿರಿ' ಆ್ಯಪ್ ಉಪಯೋಗಿಸಿ ಕರೆ ಮಾಡಿದ್ದ. ಅತ್ತ ಕಡೆಯಿಂದ ಮಾತನಾಡಿದ ವ್ಯಕ್ತಿಗೆ ತನ್ನ ಅಮ್ಮ ಸತ್ತಿದ್ದಾಳೆಂದು ಹೇಳಿದ. ಪುಟ್ಟ ಬಾಲಕನೊಬ್ಬ ಮಾತನಾಡುತ್ತಿದ್ದಾನೆಂದು ಅರಿತ ಅತ್ತ ಕಡೆಯ ವ್ಯಕ್ತಿ ಹಾಗೆಂದರೇನು ಎಂದು ಕೇಳಿದಾಗ ‘‘ಆಕೆ ತನ್ನ ಕಣ್ಣುಗಳನ್ನು ಮುಚ್ಚಿದ್ದಾಳೆ, ಉಸಿರಾಟ ನಡೆಸುತ್ತಿಲ್ಲ’’ ಎಂದು ಬಿಟ್ಟ.

ಕೊನೆಗೆ ತನ್ನ ವಿಳಾಸವನ್ನು ಆ ಬಾಲಕ ತಿಳಿಸಿದ ಕಾರಣ, ಪೊಲೀಸರು ಹಾಗೂ ತುರ್ತು ಸೇವಾ ವಿಭಾಗದವರು ಮನೆಗೆ 13 ನಿಮಿಷಗಳಲ್ಲೇ ಆಗಮಿಸಿ ರೋಮನ್ ತಾಯಿಗೆ ಪ್ರಥಮ ಚಿಕಿತ್ಸೆ ನೀಡಿ ಆಕೆಗೆ ಸ್ಮತಿ ಮರಳಿದ ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರು.

ಹೆತ್ತವರು ಸಣ್ಣ ವಯಸ್ಸಿನಲ್ಲೇ ತಮ್ಮ ಮಕ್ಕಳ ಕೈಗೆ ಮೊಬೈಲ್ ಫೋನ್ ನೀಡುತ್ತಿರುವುದು ನಿಜವಾದರೂ ಅವರಿಗೆ ತಮ್ಮ ವಿಳಾಸ ಹಾಗೂ ಫೋನ್ ನಂಬರ್ ಬಗ್ಗೆ ಕೂಡ ಮಾಹಿತಿ ನೀಡಿ ತುರ್ತು ಸಂದರ್ಭಗಳಲ್ಲಿ ಯಾವ ಸಂಖ್ಯೆಗೆ ಕರೆ ಮಾಡಬೇಕು ಎಂಬುದನ್ನೂ ತಿಳಿಸಬೇಕು ಎಂಬುದು ಈ ಘಟನೆಯಿಂದ ಎಲ್ಲರೂ ಅರಿತಿರಬೇಕಾದ ಪಾಠವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X