Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಧರ ಏಷ್ಯನ್ ಚೆಸ್: ಅಗ್ರಸ್ಥಾನಕ್ಕೆ...

ಅಂಧರ ಏಷ್ಯನ್ ಚೆಸ್: ಅಗ್ರಸ್ಥಾನಕ್ಕೆ ಎಜಾಝ್, ಕಿಶನ್

ವಾರ್ತಾಭಾರತಿವಾರ್ತಾಭಾರತಿ25 March 2017 7:04 PM IST
share
ಅಂಧರ ಏಷ್ಯನ್ ಚೆಸ್: ಅಗ್ರಸ್ಥಾನಕ್ಕೆ ಎಜಾಝ್, ಕಿಶನ್

ಉಡುಪಿ, ಮಾ.25: ಅಂಧರ ರಾಷ್ಟ್ರೀಯ 'ಎ'ಚೆಸ್ ಚಾಂಪಿಯನ್ ಕರ್ನಾಟಕದ ಕಿಶನ್ ಗಂಗುಲಿ ಹಾಗೂ ಅತ್ಯಧಿಕ ಫಿಡೆ ಶ್ರೇಯಾಂಕಿತ ಆಟಗಾರ ರಾದ ಬಾಂಗ್ಲಾದೇಶದ ಹುಸೈನ್ ಎಜಾಝ್ ಅವರು ಅಂಧರ ಐಬಿಸಿಎ ಏಷ್ಯನ್ ಚೆಸ್ ಚಾಂಪಿಯನ್‌ಷಿಪ್‌ನ ಮೂರನೇ ಸುತ್ತಿನ ಪಂದ್ಯಗಳ ಕೊನೆಗೆ ಅಗ್ರಸ್ಥಾನವನ್ನು ಹಂಚಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಬ್ರೈಲಿ ಚೆಸ್ ಅಸೋಸಿಯೇಷನ್ ವತಿಯಿಂದ ಮಣಿಪಾಲ ವಿವಿ ಆಶ್ರಯದಲ್ಲಿ ಮಣಿಪಾಲ ಕೆಎಂಸಿಯ ಡಾ.ಟಿಎಂಎ ಪೈ ಹಾಲ್‌ನಲ್ಲಿ ನಡೆದಿರುವ ಟೂರ್ನಿಯ ನಾಲ್ಕನೇ ದಿನದಾಟದಲ್ಲಿ ಇಬ್ಬರೂ ತಮ್ಮ ಎದುರಾಳಿಗಳ ವಿರುದ್ಧ ಪರಸ್ಪರ ವೈರುದ್ಧದ ಜಯ ದಾಖಲಿಸುವ ಮೂಲಕ ಅಜೇಯರಾಗುಳಿದರು.

ಅಗ್ರಸೀಡ್ ಆಟಗಾರ ಎಜಾಝ್ ಅವರು ತನ್ನ ಎದುರಾಳಿ ಭಾರತದ ಯುಧ್‌ಜೀತ್ ಡೇ ವಿರುದ್ಧ ಜಯಗಳಿಸಲು ತನ್ನೆಲ್ಲಾ ಅನುಭವವನ್ನು ಧಾರೆ ಎರೆಯಬೇಕಾಯಿತು. ಟಾಪ್‌ಬೋರ್ಡ್‌ನಲ್ಲಿ ಬಿಳಿಕಾಯಿಗಳೊಂದಿಗೆ ಆಡಿದ ಎಜಾಝ್, ಕಿಂಗ್ಸ್ ಇಂಡಿಯನ್ ಆಕ್ರಮಣದೊಂದಿಗೆ ಸೆಣಸಿದರು. 21ನೇ ನಡೆಯವರೆಗೂ ಇಬ್ಬರೂ ಸಮಬಲದ ಆಟ ಪ್ರದರ್ಶಿಸಿದರು.

ಆದರೆ 40ನೇ ಪಾನ್ ನಡೆಯಲ್ಲಿ ದೊರೆತ ಅಲ್ಪ ಮೇಲುಗೈಯನ್ನು ತನ್ನ ಪರವಾಗಿ ಬಳಸಿಕೊಂಡ ಎಜಾಝ್, ಪಂದ್ಯದ ದಿಕ್ಕನ್ನೇ ಬದಲಿಸಿ 62ನೇ ನಡೆಯಲ್ಲಿ ಯುಧ್‌ಜೀತ್‌ರನ್ನು ಪರಾಭವಗೊಳಿಸುವಲ್ಲಿ ಯಶಸ್ವಿಯಾಗಿ ಒಂದು ಪೂರ್ಣ ಅಂಕ ಸಂಪಾದಿಸಿದರು.

ಎರಡನೇ ಬೋರ್ಡಿನಲ್ಲಿ ಕಿಶನ ಗಂಗುಲಿ ಅವರು ಭಾರತದ ಅಶ್ವಿನ್ ಕೆ. ಮಕ್ವಾನ್‌ರನ್ನು ಬಿಳಿಕಾಯಿಯೊಂದಿಗೆ ಆಡಿ ಸುಲಭವಾಗಿ ಮಣಿಸಿದರು. ಗುಜರಾತ್‌ನ ಅಶ್ವಿನ್ 7ನೇ ನಡೆಯಲ್ಲಿ ನಡೆಸಿದ ತಪ್ಪು ನಡೆ ಅವರಿಗೆ ಮುಳು ವಾಯಿತು. ಕಿಶನ್ ಈ ಪಂದ್ಯವನ್ನು 23ನೇ ನಡೆಯಲ್ಲಿ ಗೆದ್ದುಕೊಂಡರು.

ಭಾರತದ ಆರ್ಯನ್ ಬಿ.ಜೋಷಿ ಅವರು ಮೂರು ಪಂದ್ಯಗಳ ಕೊನೆಗೆ 2.5 ಅಂಕಗಳನ್ನು ಗಳಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಅವರು ಇಂದು ಸುಮಂತ್ ಮಿಲಿಂದ್ (1.5)ರನ್ನು ಪರಾಭವಗೊಳಿಸಿದರು. ಕೃಷ್ಣ ಉಡುಪ (2) ಮತ್ತು ಸ್ವಪ್ನೀಲ್ ಶಾ (1.5) ನಡುವಿನ ಪಂದ್ಯ ಸಮಬಲದಲ್ಲಿ ಮುಕ್ತಾಯಗೊಂಡಿತು. ಉಳಿದಂತೆ ವೈಶಾಲಿ ನರೇಂದ್ರ ಸಾಲ್ವಾಕರ್ (2) ಅವರು ಶಿರಿಶ್ ಪಾಟೀಲ್ (1)ರನ್ನು ಸೋಲಿಸಿದರೆ, ಸೌಂದರ್ಯ ಕುಮಾರ್ ಪ್ರದಾನ್ (2) ಅವರು ಮಾರಿಮುತ್ತು ಕೆ. (1) ಅವರನ್ನು ಸೋಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X