Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಬಿವಿಪಿ ಬೆಂಬಲಿಗರಿಂದ ದಲಿತ...

ಎಬಿವಿಪಿ ಬೆಂಬಲಿಗರಿಂದ ದಲಿತ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ

► ದಲಿತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿನಿಂದನೆ ► ಎಬಿವಿಪಿ ಕಾರ್ಯಕರ್ತರ ಬೆದರಿಕೆಗೆ ದೂರು ಹಿಂಪಡೆದ ವಿದ್ಯಾರ್ಥಿನಿ

ವಾರ್ತಾಭಾರತಿವಾರ್ತಾಭಾರತಿ25 March 2017 7:40 PM IST
share
ಎಬಿವಿಪಿ ಬೆಂಬಲಿಗರಿಂದ ದಲಿತ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ

 ತಿರುವನಂತಪುರಂ,ಮಾ.24: ಇಲ್ಲಿನ ಎಂಜಿ ಕಾಲೇಜ್‌ನಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ದಬ್ಬಾಳಿಕೆ ನಡೆಸುತ್ತಿದೆಯೆಂದು ಆರೋಪಿಸಿ 35 ಮಂದಿ ದಲಿತ ವಿದ್ಯಾರ್ಥಿಗಳು ಲಿಖಿತ ದೂರನ್ನು ನೀಡಿದ್ದಾರೆ. ಕಳೆದ ಮಂಗಳವಾರ ಎಬಿವಿಪಿ ಕಾರ್ಯಕರ್ತರು, ಇಬ್ಬರು ದಲಿತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಕೆಲವು ದಲಿತ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ದೂರು ನೀಡಿದ್ದರು. ಎಬಿವಿಪಿ ಸದಸ್ಯರು ದಲಿತ ವಿದ್ಯಾರ್ಥಿಗಳ ಜಾತಿನಿಂದನೆ ಮಾಡಿದ್ದು, ಲಿಂಗತಾರತಮ್ಯದ ಬೈಗುಳಗಳನ್ನು ಕೂಡಾ ಆಡಿದ್ದಾರೆಂದು ದೂರಿನಲ್ಲಿ ಅವರು ಆರೋಪಿಸಿದ್ದುರ.

‘‘ಕುರವಾ ಹಾಗೂ ಪುಲಯ ಸಮುದಾಯದ ವಿದ್ಯಾರ್ಥಿಗಳು ಇಲ್ಲಿ ಕಲಿಯುವ ಅಗತ್ಯವಿಲ್ಲ. ಇದು ನಾಯರ್‌ಗಳಿಗೆ ಸೇರಿದ ಕಾಲೇಜಾಗಿದೆ’’ ಎಂದು ಎಬಿವಿಪಿ ಬೆಂಬಲಿಗರು ನಿಂದಿಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ. ದಲಿತ ವಿದ್ಯಾರ್ಥಿನಿಯರ ದೂರಿನ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರಾದ ಹರಿಲಾಲ್,ಶಿಜು ಹಾಗೂ ಆನಂತು ನಾಯರ್ ಅವರನ್ನು ಕಾಲೇಜು ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ.

    ಘಟನೆಯ ಬಗ್ಗೆ ತನಿಖೆ ನಡೆಸಿರುವ ಶಿಕ್ಷಕರ ಸಂಘವು ಸಲ್ಲಿಸಿದ ವರದಿಯೂ ಕೂಡಾ ದೂರಿನ ಸಿಂಧುತ್ವವನ್ನು ಎತ್ತಿಹಿಡಿದಿದೆ. ವರದಿಯನ್ನು ಲೈಂಗಿಕ ಕಿರುಕುಳ ವಿರೋಧಿ ಸಮಿತಿಗೆ ವರ್ಗಾಯಿಸಿದೆ. ಮಹಿಳಾ ಪ್ರೊಫೆಸರನ್ನೊಳಗೊಂಡಿದ್ದ ಸಮಿತಿಯು ಸಂತ್ರಸ್ತ ವಿದ್ಯಾರ್ಥಿನಿಯರನ್ನು ಭೇಟಿಯಾಗಿತ್ತು. ಆದರೆ ಓರ್ವ ದಲಿತ ವಿದ್ಯಾರ್ಥಿನಿ ತನ್ನ ದೂರನ್ನು ಹಿಂತೆಗೆದುಕೊಂಡಿದ್ದಳು. ಆರೆಸ್ಸೆಸ್ ಬೆಂಬಲಿಗರಿಂದ ನಿರಂತರವಾಗಿ ಬೆದರಿಕೆ ಬರುತ್ತಿದ್ದುದೇ ಆಕೆ ದೂರನ್ನು ಹಿಂತೆಗೆದುಕೊಳ್ಳಲು ಕಾರಣವೆಂದು ಆಕೆಯ ಸ್ನೇಹಿತೆಯರು ತಿಳಿಸಿದ್ದಾರೆ. ಆದಾಗ್ಯೂ ಲೈಂಗಿಕ ಕಿರುಕುಳ ವಿರೋಧಿ ಸಮಿತಿಯು ದೂರನ್ನು ಪೊಲೀಸ್ ಇಲಾಖೆಗೆ ವರ್ಗಾಯಿಸಲು ನಿರ್ಧರಿಸಿತ್ತು. ಇದನ್ನು ಪ್ರತಿಭಟಿಸಿ ಎಂಜಿ ಕಾಲೇಜ್‌ನ ಎಬಿವಿಪಿ ಬೆಂಬಲಿಗರು ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

 ಕಾಲೇಜ್‌ನ ಮ್ಯಾನೇಜ್‌ಮೆಂಟ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್, ಎಂಜಿ ಕಾಲೇಜ್‌ನಲ್ಲಿ ಎಬಿವಿಪಿಯ ಚಟುವಟಿಕೆಯನ್ನು ನಿಷೇಧಿಸಿತ್ತು. ಆದರೆ ಹೈಕೋರ್ಟ್ ಆದೇಶವನ್ನ್ನು ಉಲ್ಲಂಘಿಸಿ ಎಬಿವಿಪಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದೆ.

ಎಂಜಿ ಕಾಲೇಜ್‌ನ ವಿದ್ಯಾರ್ಥಿ ಒಕ್ಕೂಟವು 1989ರಿಂದೀಚೆಗೆ ಎಬಿವಿಪಿಯ ಹಿಡಿತದಲ್ಲಿದೆ. ಎಸ್‌ಎಫ್‌ಐ ಹಾಗೂ ಕೆಎಸ್‌ಯು ವಿದ್ಯಾರ್ಥಿ ಘಟಕಗಳು ಈ ಕಾಲೇಜ್‌ನಲ್ಲಿ ಕಾರ್ಯಾಚರಿಸುತ್ತಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X