Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಣ ತಿವಿದು ವ್ಯಕ್ತಿ ಸಾವು; ತಿವಿದಿದ್ದು...

ಕೋಣ ತಿವಿದು ವ್ಯಕ್ತಿ ಸಾವು; ತಿವಿದಿದ್ದು ಕಾಡುಕೋಣ ಎಂಬ ವದಂತಿ

ವಾರ್ತಾಭಾರತಿವಾರ್ತಾಭಾರತಿ25 March 2017 9:59 PM IST
share
ಕೋಣ ತಿವಿದು ವ್ಯಕ್ತಿ ಸಾವು; ತಿವಿದಿದ್ದು ಕಾಡುಕೋಣ ಎಂಬ ವದಂತಿ

ಬೆಳ್ತಂಗಡಿ, ಮಾ.25: ನಡ ಗ್ರಾಮದ ಮಂಜೊಟ್ಟಿ ಸಮೀಪ ಪೆರ್ಮಾನು ಬಸದಿ ರಸ್ತೆಯ ಬಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕೋಣವೊಂದು ತಿವಿದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ನಡೆದಿದೆ.

ಮೃತಪಟ್ಟವರು ಬೆಳ್ತಂಗಡಿ ನಗರ ವ್ಯಾಪ್ತಿಯ ಡೊಂಬಯ್ಯ ಪೂಜಾರಿ (53) ಎಂಬವರಾಗಿದ್ದಾರೆ. ಇವರು ಕೂಲಿ ಕೆಲಸಕ್ಕೆಂದು ಅನಿಲ್ ಎಂಬವರ ಮಾಲಕತ್ವದ ತೋಟಕ್ಕೆ ಹೋಗುತ್ತಿದ್ದು ಶನಿವಾರ ಸಂಜೆ ಹುಲ್ಲು ತೆಗೆದುಯುತ್ತಿದ್ದ ವೇಳೆ ಹಿಂದಿನಿಂದ ಬಂದ ಕೋಣವೊಂದು ಕೊಂಬಿನಿಂದ ತಿವಿದಿದ್ದು ತಿವಿದ ಭರಸಕ್ಕೆ ಬೆನ್ನಿನಿಂದ ಬಂದ ಕೊಂಬು ಎದೆಯನ್ನು ಸೀಳಿದ್ದು ತಕ್ಷಣ ಸ್ಥಳಿಯರ ಸಹಕಾರದಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಮೃತಶರೀರವನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕಾಡು ಕೋಣ ವದಂತಿ:

ಕೆಲಸ ಮಾಡುತ್ತಿದ್ದ ಮನೆ ಮಾಲಕ ಒಂಟಿ ಕೋಣವನ್ನು ಸಾಕುತ್ತಿದ್ದು, ಇದನ್ನು ಹಗ್ಗವೊಂದರಿಂದ ಕಟ್ಟಿ ಹಾಕಿದ್ದು ಅದೇ ವೇಳೆ ಹಗ್ಗವನ್ನು ತುಂಡರಿಸಿ ಈತನ ಮೇಲೆ ದಾಳಿ ನಡೆಸಿದೆ. ಇದನ್ನು ಭೂಮಾಲಿಕ ತಪ್ಪಿಸುವ ಸಲುವಾಗಿ ಕಾಡುಕೋಣ ಬಂದು ತಿವಿದಿದ್ದು ಇದರಿಂದ ಸಾವನ್ನಪ್ಪಿದ್ದಾನೆ ಎಂದು ವದಂತಿ ಹಬ್ಬಿಸಿದ್ದಾನೆ ಎನ್ನಲಾಗಿದೆ.

ಇದೇ ವೇಳೆ ಸ್ಥಳಿಯರ ಮಾಹಿತಿ ಮೆರೆಗೆ ಅಂಬುಲೆನ್ಸ್ ಚಾಲಕ ಸ್ಥಳಕ್ಕೆ ದಾಳಿಗೊಳಗಾದ ಡೊಂಬಯ್ಯ ಪೂಜಾರಿಯವರನ್ನು ರಕ್ಷಿಸಲು ಸ್ಥಳಕ್ಕಾಗಮಿಸಿದ್ದು ಅದೇ ಸಂದರ್ಭ ಸಾಕು ಕೋಣವನ್ನು ಹಗ್ಗದೊಂದಿಗೆ ನಿಂತಿದ್ದನ್ನು ಕಂಡಿದ್ದಾರೆ. ಇದರಿಂದ ಸ್ಥಳಿಯರು ಸಂಶಯಕ್ಕೊಳಗಾಗಿದ್ದು ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅರಣ್ಯ ಇಲಾಖೆ ಭೇಟಿ:

ಸ್ಥಳದಲ್ಲಿ ಸಿಕ್ಕಿರುವ ಕೋಣದ ಪೋಟೊ ಹಾಗೂ ಮೃತ ಶರೀರದ ಗಾಯವನ್ನು ಅಧಿಕಾರಿಗಳು ಪರಿಶೀಲಿಸಿ ಇದು ಕಾಡು ಕೋಣ ಅಲ್ಲ ಇದರ ಮೇಲೆ ಸಂಶಯವಿದೆ. ಸ್ಥಳಕ್ಕೆ ಭೇಟಿ ನೀಡಿ ಈ ಬಗ್ಗೆ ಪರಿಶೀಲನೆ ಮಾಡಲಾಗುವುದು ಹಾಗೂ ಮೃತ ದೇಹದ ಮರಣೋತ್ತರ ಪರೀಕ್ಷೆಯಿಂದ ಕಾಡು ಕೋಣವೇ ಅಥವಾ ಸಾಕಿದ ಕೋಣದಿಂದ ಅನಾಹುತ ಸಂಭವಿಸಿದೆಯೇ ಎಂದು ತಿಳಿಯಬೇಕಾಗಿದೆ ಎಂದು ಅರಣ್ಯ ಅಧಿಕಾರಿಗಳು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಬಳಿ ಸೇರಿದ ಜನಸ್ತೋಮಕ್ಕೆ ಮಾಹಿತಿ ನೀಡುತ್ತಿದ್ದರು.

ತನಿಖೆಗೆ ಆಗ್ರಹ ಮೃತರ ಕುಟುಂಬವು ಇದೊಂದು ಬೇಜವಾಬ್ದಾರಿಯಿಂದ ನಡೆದ ಘಟನೆ ದಷ್ಟಪುಷ್ಟವಾದ ಕೋಣವನ್ನು ಈ ಭೂಮಾಲಕ ಸಾಕುತ್ತಿದ್ದು ಇದನ್ನು ಸಾಮಾನ್ಯ ಹಗ್ಗದಿಂದ ಕಟ್ಟಿಹಾಕಿದ್ದಾರೆ. ಇದರಿಂದಾಗಿ ಹಸಿವಿನಿಂದ ಅಥವಾ ಸಿಟ್ಟಿನಿಂದ ಹಗ್ಗವನ್ನು ತುಂಡರಿಸಿ ದಾಳಿ ನಡೆಸಿದ್ದು ಇದರಿಂದಾಗಿ ಸಾವು ನಡೆದಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಬೆಳ್ತಂಗಡಿ ಶವಗಾರದ ಬಳಿ ಕುಟುಂಬಸ್ಥರು ಆಗ್ರಹಿಸುತ್ತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X