Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎರಡು ತಿಂಗಳಲ್ಲಿ ಕೂರಾಡಿ ಸೇತುವೆ ಸಿದ್ಧ:...

ಎರಡು ತಿಂಗಳಲ್ಲಿ ಕೂರಾಡಿ ಸೇತುವೆ ಸಿದ್ಧ: ಸಚಿವ ಪ್ರಮೋದ್

ವಾರ್ತಾಭಾರತಿವಾರ್ತಾಭಾರತಿ26 March 2017 8:26 PM IST
share
ಎರಡು ತಿಂಗಳಲ್ಲಿ ಕೂರಾಡಿ ಸೇತುವೆ ಸಿದ್ಧ: ಸಚಿವ ಪ್ರಮೋದ್

ನೀಲಾವರ (ಬ್ರಹ್ಮಾವರ), ಮಾ.26: ಉಡುಪಿ ತಾಲೂಕಿನ ನೀಲಾವರದ ಪಂಚಮಿಖಾನ ಎಂಬಲ್ಲಿ ಸೀತಾ ನದಿಗೆ ಅಡ್ಡಲಾಗಿ ಕೇಂದ್ರ ರಸ್ತೆ ನಿಧಿ ಯೋಜನೆ (ಸಿಆರ್‌ಎಫ್)ಯಡಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿ ಮೇ ತಿಂಗಳ ಕೊನೆಯೊಳಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನೀಲಾವರ ಹಾಗೂ ಕೂರಾಡಿಯನ್ನು ಸಂಪರ್ಕಿಸುವ ಈ ಸೇತುವೆ ಸಿಆರ್‌ಎಫ್ ಫಂಡ್‌ನ 9 ಕೋಟಿ ರೂ. ವೆಚ್ಚದಲ್ಲಿ ಪಂಚಮಿಖಾನ ಎಂಬಲ್ಲಿ ನಿರ್ಮಾಣಗೊಳ್ಳುತ್ತಿದೆ. ಸೇತುವೆ ಕಾಮಗಾರಿ ಶೇ.80ರಷ್ಟು ಮುಗಿದಿದ್ದು, ಮೇ ತಿಂಗಳ ಕೊನೆಯ ವೇಳೆಗೆ ಉದ್ಘಾಟನೆಗೆ ಸಜ್ಜುಗೊಳ್ಳಲಿದೆ ಎಂದರು.

ರವಿವಾರ ನೀಲಾವರದಲ್ಲಿ ಸೇತುವೆಯ ಕಾಮಗಾರಿಯ ಪ್ರಗತಿ ವೀಕ್ಷಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡುತಿದ್ದರು. ಈಗಾಗಲೇ ಗುತ್ತಿಗೆದಾರ ರಿಗೆ ಶೇ.70ರಷ್ಟು ಪಾವತಿ ಮಾಡಲಾಗಿದೆ. ಆಸ್ಕರ್ ಅವರು ಕೇಂದ್ರ ಸಚಿವ ರಾಗಿದ್ದ ಈ ಸೇತುವೆಯನ್ನು ಉತ್ತರ ಕನ್ನಡದ ಪಟ್ಟಿಯಡಿ ಸೇರಿಸಿ ಅನುಮೋದನೆ ಪಡೆಯಲಾಗಿತ್ತು ಎಂದರು.

ಸೇತುವೆಯ ಉದ್ದ 128ಮೀ. ಇದ್ದು, 21.37 ಮೀ.ನ ಒಟ್ಟು 6 ಅಂಕಣ ಗಳನ್ನು ಹೊಂದಿದೆ. ಸೇತುವೆ ಅಗಲ 7.50 ಮೀ. ಇದ್ದು ಎರಡು ವಾಹನಗಳು ಸರಾಗವಾಗಿ ಸಂಚರಿಸಬಹುದಾಗಿದೆ. ಆರ್‌ಸಿಸಿ ಟಿ-ಬೀಮ್ ಡೆಕ್‌ಸ್ಲಾಬ್ ಹಾಗೂ ಪೈಲ್ ಪೌಂಡೇಶನ್ ಹಾಕಲಾಗಿದೆ. ಇನ್ನು ರಿವೈಟ್‌ಮೆಂಟ್ ಕೆಲಸವಷ್ಟೇ ಬಾಕಿ ಇದೆ ಎಂದು ಸಚಿವರು ನುಡಿದರು.

 ಸೇತುವೆಯ ಎರಡೂ ಕಡೆಗೆ -ನೀಲಾವರ ಹಾಗೂ ಕೂರಾಡಿ- ತಲಾ ಒಂದು ಕಿ.ಮೀ. ಉದ್ದದ ಸಂಪರ್ಕ ಸೇತುವೆಯನ್ನು ತಲಾ 15 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ. ಇದಕ್ಕೆ ಭೂಸ್ವಾದೀನದ ಅಗತ್ಯವಿರುವುದಿಲ್ಲ. ಸಂಪರ್ಕ ರಸ್ತೆ 5.50ಮೀ. ಅಗಲವಿರುತ್ತದೆ ಎಂದರು.

ಭೇಟಿಯ ವೇಳೆ ಸಚಿವರೊಂದಿಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಪಂ ಕೆಡಿಪಿ ಸದಸ್ಯ ಉಮೇಶ್ ನಾಯ್ಕಿ, ಉಡುಪಿ ನಗರಸಭಾ ಸದಸ್ಯ ಜನಾರ್ದನ ಭಂಡಾರ್‌ಕರ್,ರಮೇಶ್ ಕಾಂಚನ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ್, ಡಿ.ವಿ.ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X