Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂಧರ ಏಷ್ಯನ್ ಚೆಸ್: ಕಿಶನ್‌ಗೆ ಮಣಿದ...

ಅಂಧರ ಏಷ್ಯನ್ ಚೆಸ್: ಕಿಶನ್‌ಗೆ ಮಣಿದ ಎಜಾಝ್

ವಾರ್ತಾಭಾರತಿವಾರ್ತಾಭಾರತಿ26 March 2017 8:52 PM IST
share
ಅಂಧರ ಏಷ್ಯನ್ ಚೆಸ್: ಕಿಶನ್‌ಗೆ ಮಣಿದ ಎಜಾಝ್

ಉಡುಪಿ, ಮಾ.26: ನಾಲ್ಕನೇ ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಟೂರ್ನಿಯ ಅತ್ಯಧಿಕ ಫಿಡೆ ಶ್ರೇಯಾಂಕಿತ ಆಟಗಾರ ಬಾಂಗ್ಲಾದೇಶದ ಹುಸೈನ್ ಎಜಾಝ್‌ರನ್ನು ಪರಾಭವಗೊಳಿಸಿದ ಅಂಧರ ರಾಷ್ಟ್ರೀಯ 'ಎ' ಚೆಸ್ ಚಾಂಪಿಯನ್ ಕರ್ನಾಟಕದ ಕಿಶನ್ ಗಂಗುಲಿ ಅಂಧರ ಐಬಿಸಿಎ ಏಷ್ಯನ್ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ ಗರಿಷ್ಠ ನಾಲ್ಕು ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದಾರೆ.

ಅಂತಾರಾಷ್ಟ್ರೀಯ ಬ್ರೈಲಿ ಚೆಸ್ ಅಸೋಸಿಯೇಷನ್ ವತಿಯಿಂದ ಮಣಿಪಾಲ ವಿವಿ ಆಶ್ರಯದಲ್ಲಿ ಮಣಿಪಾಲ ಕೆಎಂಸಿಯ ಡಾ.ಟಿಎಂಎ ಪೈ ಹಾಲ್‌ನಲ್ಲಿ ನಡೆದಿರುವ ಟೂರ್ನಿಯ ಐದನೇ ದಿನದಾಟದಲ್ಲಿ ಕಿಶನ್ ಗಂಗುಲಿ ಅವರು ನಾಲ್ಕು ಗಂಟೆಗಳ ಮ್ಯಾರಥಾನ್ ಹೋರಾಟದ ಕೊನೆಗೆ 75ನೇ ನಡೆಯಲ್ಲಿ ಎದುರಾಳಿಯನ್ನು ಮಣಿಸುವಲ್ಲಿ ಯಶಸ್ವಿಯಾದರು.

 ಅಗ್ರಸೀಡ್ ಆಟಗಾರ ಎಜಾಝ್ ವಿರುದ್ಧದ ಪಂದ್ಯದಲ್ಲಿ ಕಿಶನ್ ಬಿಳಿಕಾಯಿಗಳೊಂದಿಗೆ ಆಡಿದರು. ಆಟದ 10ನೇ ನಡೆಯಲ್ಲಿ ಹುಸೈನ್ ಅವರು ತನ್ನ ನಡೆಯಲ್ಲಿ ಸಣ್ಣ ತಪ್ಪೆಸಗಿದರು. ಆದರೆ ಈ ಅವಕಾಶವನ್ನು ಕೂಡಲೇ ಬಾಚಿಕೊಂಡ ಕಿಶನ್ ಎದುರಾಳಿ ಮೇಲೆ ಒತ್ತಡ ಹೇರುತ್ತಾ ಸಾಗಿದರು.

ಆಟ ಸಾಗಿದಂತೆ ಕಿಶನ್ ಸಹ ನಡೆಯಲ್ಲಿ ತಪ್ಪೆಸಗಿದರೂ ಅದನ್ನು ಸದುಪಯೋಗ ಪಡಿಸಿಕೊಳ್ಳಲು ಎಜಾಝ್ ವಿಫಲರಾಗಿ ಅಂತಿಮವಾಗಿ ಸೋಲೊಪ್ಪಿಕೊಂಡರು. ಅವರು ತನ್ನ ಎದುರಾಳಿ ಭಾರತದ ಯುಧ್‌ಜೀತ್ ಡೇ ವಿರುದ್ಧ ಜಯಗಳಿಸಲು ತನ್ನೆಲ್ಲಾ ಅನುಭವವನ್ನು ಧಾರೆ ಎರೆಯಬೇಕಾಯಿತು. ಟಾಪ್‌ಬೋರ್ಡ್‌ನಲ್ಲಿ ಬಿಳಿಕಾಯಿಗಳೊಂದಿಗೆ ಆಡಿದ ಎಜಾಝ್, ಕಿಂಗ್ಸ್ ಇಂಡಿಯನ್ ಆಕ್ರಮಣದೊಂದಿಗೆ ಸೆಣಸಿದರು. 21ನೇ ನಡೆಯವರೆಗೂ ಇಬ್ಬರೂ ಸಮಬಲದ ಆಟ ಪ್ರದರ್ಶಿಸಿದರು.

ಎರಡನೇ ಬೋರ್ಡ್‌ನಲ್ಲಿ ಗುಜರಾತ್‌ನ ಅಶ್ವಿನ್ ಕೆ. ಮಕ್ವಾನ್ ಅವರು ಮಹಾರಾಷ್ಟ್ರದ ಆರ್ಯನ್ ಬಿ.ಜೋಷಿ ಅವರನ್ನು ಎದುರಿಸಿದರು. ಈ ಪಂದ್ಯ ಟೂರ್ನಿಯ ಸುದೀರ್ಘ ಪಂದ್ಯವೆನಿಸಿಕೊಂಡಿತು. ಕಪ್ಪುಕಾಯಿಯೊಂದಿಗೆ ಆಡಿದ ಅಶ್ವಿನ್ ಅಂತಿಮವಾಗಿ 94ನೇ ನಡೆಯಲ್ಲಿ ಆರ್ಯನ್ ಜೋಶಿ ಅವರನ್ನು ಪರಾಭವಗೊಳಿಸಿದರು. ಈ ಎರಡು ಪಂದ್ಯ ದಿನದ ಪ್ರಧಾನ ಆಕರ್ಷಣೆಗಳೆಸಿಕೊಂಡವು.

ನಾಲ್ಕನೇ ಸುತ್ತಿನ ಕೊನೆಗೆ ಕಿಶನ್ ಗಂಗುಲಿ 4 ಅಂಕಗಳೊಂದಿಗೆ ಅಗ್ರಸ್ಥಾನಿಯಾದರೆ, ಎಜಾಝ್, ಅಶ್ವಿನ್, ಕೃಷ್ಣ ಉಡುಪ, ಯುಧ್‌ಜೀತ್ ಡೇ, ಸೌಂದರ್ಯ ಕುಮಾರ್ ಪ್ರಧಾನ್, ಸೋಮೆಂದರ್ ಬಿ.ಎಲ್. ತಲಾ ಮೂರು ಅಂಕ ಗಳಿಸಿ ಎರಡನೇ ಸ್ಥಾನಗಳನ್ನು ಹಂಚಿಕೊಂಡಿದ್ದಾರೆ.

  ಇಂದಿನ ಕೆಲ ಪಂದ್ಯಗಳಲ್ಲಿ ಕೃಷ್ಣ ಉಡುಪ ಅವರು ಸಚಿನ್ ಲಹು ಅವರನ್ನು ಸೋಲಿಸಿದರೆ, ಯುಧ್‌ಜಿತ್ ಡೇ ಅವರು ವೈಶಾಲಿ ನರೇಂದ್ರ ಸಾಲ್ವಾಕರ್‌ರನ್ನು ಸೋಲಿಸಿದರು. ಪಿಲಿಪ್ಪೈನ್ಸ್‌ನ ರೊಡಾಲ್ಫ್ ಸರಿಮೆಂಟೊ ಅವರನ್ನು ಸೌಂದರ್ಯ ಕುಮಾರ್ ಪ್ರಧಾನ್ ಪರಾಭವಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X