Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ರಂಪ್ ಆರೋಗ್ಯ ಮಸೂದೆಗೆ ಸೋಲು;...

ಟ್ರಂಪ್ ಆರೋಗ್ಯ ಮಸೂದೆಗೆ ಸೋಲು; ರಿಪಬ್ಲಿಕನ್ ಸಂಸದ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ27 March 2017 7:54 PM IST
share
ಟ್ರಂಪ್ ಆರೋಗ್ಯ ಮಸೂದೆಗೆ ಸೋಲು; ರಿಪಬ್ಲಿಕನ್ ಸಂಸದ ರಾಜೀನಾಮೆ

ವಾಶಿಂಗ್ಟನ್, ಮಾ. 27: ಅಮೆರಿಕದ ಸಾರ್ವಜನಿಕ ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ‘ಒಬಾಮ ಕೇರ್’ ಕಾರ್ಯಕ್ರಮವನ್ನು ರದ್ದುಪಡಿಸುವ ಉದ್ದೇಶದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಮಹತ್ವಾಕಾಂಕ್ಷೆಯ ಮಸೂದೆಗೆ ಸೋಲಾದ ಹಿನ್ನೆಲೆಯಲ್ಲಿ ಆಡಳಿತಾರೂಢ ರಿಪಬ್ಲಿಕನ್ ಪಕ್ಷದ ಸಂಸದ ಟೆಡ್ ಪೋ, ಹೌಸ್ ಫ್ರೀಡಂ ಕಾಕಸ್‌ಗೆ ರವಿವಾರ ರಾಜೀನಾಮೆ ನೀಡಿದ್ದಾರೆ.

ಟ್ರಂಪ್ ಮಸೂದೆಯ ಸೋಲಿನಲ್ಲಿ ಹೌಸ್ ಫ್ರೀಡಂ ಕಾಕಸ್ ಮಹತ್ವದ ಪಾತ್ರ ವಹಿಸಿತ್ತು.‘‘ಬೇಡ ಎಂದು ಹೇಳುವುದು ಸುಲಭ, ಆದರೆ ಮುನ್ನಡೆಸುವುದು ಕಷ್ಟ. ಆದರೆ, ನಮ್ಮನ್ನು ಆಯ್ಕೆ ಮಾಡಿರುವುದು ಅದಕ್ಕಾಗಿಯೇ’’ ಎಂದು ಟೆಕ್ಸಾಸ್ ಸಂಸದ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ. ‘‘ಈ ಕಾಕಸ್‌ನಿಂದ ಹೊರಬಂದರೆ ನಾನು ಕಾಂಗ್ರೆಸ್‌ನ ಹೆಚ್ಚು ಪರಿಣಾಮಕಾರಿ ಸದಸ್ಯನಾಗಬಹುದು’’ ಎಂದರು.

ಟೆಡ್ ಪೋ ಅವರು ಟ್ರಂಪ್ ಮಸೂದೆಯ ಪರಾವಾಗಿದ್ದರು. ಆದರೆ, ಟ್ರಂಪ್‌ರ ಮಸೂದೆ 2010ರ ‘ಅಗ್ಗದ ಆರೋಗ್ಯ ರಕ್ಷಣೆ ಕಾಯ್ದೆ’ ಅಥವಾ ‘ಒಬಾಮಕೇರ್’ನ ಸ್ಥಾನದಲ್ಲಿ ಬರುವಷ್ಟು ಸುಸ್ಥಿರವಾಗಿಲ್ಲ ಎಂಬ ಅಭಿಪ್ರಾಯವನ್ನು ಫ್ರೀಡಂ ಕಾಕಸ್ ಹೊಂದಿತ್ತು.

ಹಾಗಾಗಿಯೇ, ಟ್ರಂಪ್‌ರ ಮಹತ್ವಾಕಾಂಕ್ಷೆಯ ಮಸೂದೆ ಸಂಸತ್ತು ಕಾಂಗ್ರೆಸ್‌ನಲ್ಲಿ ಬಿದ್ದು ಹೋಯಿತು.

ಒಬಾಮರ ಇಂಧನ ನೀತಿಗೆ ಖೊಕ್ ಕೊಡಲಿರುವ ಟ್ರಂಪ್

ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಂದ ಹೊರಡುವ ಇಂಗಾಲದ ಡೈ ಆಕ್ಸೈಡ್ ಅನಿಲದ ಪ್ರಮಾಣವನ್ನು ಸೀಮಿತಗೊಳಿಸುವ ತನ್ನ ಪೂರ್ವಾಧಿಕಾರಿ ಬರಾಕ್ ಒಬಾಮರ ಯೋಜನೆಯನ್ನು ರದ್ದುಪಡಿಸುವ ಉದ್ದೇಶದ ಸರಕಾರಿ ಆದೇಶವೊಂದಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಸಹಿ ಹಾಕಲಿದ್ದಾರೆ.

ಒಬಾಮ 2015ರಲ್ಲಿ ಜಾರಿಗೆ ತಂದ ‘ಶುದ್ಧ ವಿದ್ಯುತ್ ಯೋಜನೆ’ಯನ್ನು ರದ್ದುಪಡಿಸಿದರೆ ಕಲ್ಲಿದ್ದಲು ಕ್ಷೇತ್ರದ ಉದ್ಯೋಗಗಳು ಮರಳುತ್ತವೆ ಎಂದು ಎಬಿಸಿ ಸುದ್ದಿ ಚಾನೆಲ್‌ನ ರವಿವಾರದ ಕಾರ್ಯಕ್ರಮ ‘ದಿಸ್ ವೀಕ್’ನಲ್ಲಿ ಮಾತನಾಡಿದ ಪರಿಸರ ಸಂರಕ್ಷಣಾ ಸಂಸ್ಥೆಯ ಆಡಳಿತಗಾರ ಸ್ಕಾಟ್ ಪ್ರೂಯಿಟ್ ಹೇಳಿದರು.

‘‘ಹಿಂದಿನ ಆಡಳಿತ ಭೂಗರ್ಭ ಇಂಧನ ಬಳಕೆ ವಿರುದ್ಧದ ನೀತಿಯನ್ನು ಅನುಸರಿಸಿತ್ತು’’ ಎಂದರು.‘‘ಈ ಮೂಲಕ ಅಮೆರಿಕದ ಜನರಿಗೆ ನೀಡಿರುವ ಭರವಸೆಯನ್ನು ಟ್ರಂಪ್ ಈಡೇರಿಸುತ್ತಿದ್ದಾರೆ. ಈಗ ನಾವು ಜನರನ್ನು ಮತ್ತೆ ಕೆಲಸಕ್ಕೆ ಹಚ್ಚಬಹುದು’’ ಎಂದು ಅವರು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X