Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಅಪಾಯಕಾರಿ ಇದ್ದಿಲು ಘಟಕದ ವರದಿಗೆ...

​ಅಪಾಯಕಾರಿ ಇದ್ದಿಲು ಘಟಕದ ವರದಿಗೆ ತೆರಳಿದ ಪತ್ರಕರ್ತರ ಮೇಲೆ ನಿಂದನೆ, ಚಿತ್ರೀಕರಣಕ್ಕೆ ಅಡ್ಡಿ

ವಾರ್ತಾಭಾರತಿವಾರ್ತಾಭಾರತಿ27 March 2017 8:37 PM IST
share
​ಅಪಾಯಕಾರಿ ಇದ್ದಿಲು ಘಟಕದ ವರದಿಗೆ ತೆರಳಿದ ಪತ್ರಕರ್ತರ ಮೇಲೆ ನಿಂದನೆ, ಚಿತ್ರೀಕರಣಕ್ಕೆ ಅಡ್ಡಿ

ಮೂಡುಬಿದಿರೆ, ಮಾ.27: ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಎಂಬಲ್ಲಿ ಅಪಾಯಕಾರಿ ಇದ್ದಿಲು ಘಟಕದ ಕುರಿತಾಗಿ ವರದಿ ಮಾಡಲು ತೆರಳಿದ್ದ ಸಂದರ್ಭ ಇಬ್ಬರು ಪತ್ರಕರ್ತರಿಗೆ ಘಟಕದ ಮ್ಯಾನೇಜರ್ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಚಿತ್ರೀಕರಣಕ್ಕೆ ಅಡ್ಡಿ ಪಡಿಸಿದ ಘಟನೆ ಸೋಮವಾರ ನಡೆದಿದೆ.

ಮಾಂಟ್ರಾಡಿ ಎಂಬಲ್ಲಿ ಒಲಿವಿಯಾ ಲೋಬೋ ಎಂಬವರ ಜಾಗದಲ್ಲಿ ಅಕ್ರಮವಾಗಿ ತೆಂಗಿನ ಚಿಪ್ಪಿನ ಇದ್ದಿಲು ಘಟಕ 2012ರಿಂದ ಕಾರ್ಯಾಚರಿಸುತ್ತಿದ್ದು, ಈ ಘಟಕದಿಂದಾಗಿ ಸ್ಥಳೀಯರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿ ಸ್ಥಳೀಯರು ಶುಕ್ರವಾರ ಪ್ರತಿಭಟನೆ ನಡೆಸಿದ್ದರು.

ಸೋಮವಾರ ಬೆಳಿಗ್ಗೆ ಸ್ಥಳಕ್ಕೆ ತೆರಳಿದ್ದ ಟಿವಿ ಚಾನೆಲ್ ವರದಿಗಾರರಾದ ರಾಘವೇಂದ್ರ ಶೆಟ್ಟಿ ಹಾಗೂ ಶರತ್ ದೇವಾಡಿಗ ಕಾಂತಾವರ ಅವರ ಮೇಲೆ ಹರಿಹಾಯ್ದ ಸಂಸ್ಥೆಯ ಮ್ಯಾನೇಜರ್ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಪತ್ರಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಇದ್ದಿಲು ಘಟಕವನ್ನು ಬಂದ್ ಮಾಡುವಂತೆ ನೆಲ್ಲಿಕಾರು ಪಂಚಾಯತ್ ಪಿಡಿಒ ಪ್ರಶಾಂತ್ ಕುಮಾರ್ ಶೆಟ್ಟಿಯವರು ಮಾರ್ಚ್ 13ರಂದು ನೋಟೀಸ್ ಜಾರಿಗೊಳಿಸಿದ್ದರು. ಆದರೆ ಅದನ್ನು ಪಾಲಿಸದೇ ಅಕ್ರಮವಾಗಿ ಇದ್ದಿಲು ಘಟಕದಲ್ಲಿ ಕೆಲಸವನ್ನು ಮುಂದುವರಿಸಿದ್ದಾರೆ.

 ಈ ಬಗ್ಗೆ ಮಾದ್ಯಮಗಳೊಂದಿಗೆ ಮಾತನಾಡಿದ ನೆಲ್ಲಿಕಾರು ಗ್ರಾ.ಪಂ. ಅಧ್ಯಕ್ಷ ಜಯಂತ ಹೆಗ್ಡೆ, ಇದ್ದಿಲು ಘಟಕದ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿದ್ದು, ಘಟಕ ಮುಚ್ಚುವಂತೆ ಸೂಚಿಸಿದ ನಂತರವೂ ಕಾರ್ಯಾಚರಿಸುತ್ತಿದೆ. ಪೊಲೀಸರ ಸಹಾಯದಿಂದ ಮುಚ್ಚುವ ಬಗ್ಗೆ ಪಿಡಿಒ ಅವರಿಗೆ ಸೂಚಿಸಿದ್ದೇವೆ ಎಂದಿದ್ದಾರೆ.

ಇದ್ದಿಲು ಘಟಕದಿಂದ ಪರಿಸರದಲ್ಲಿ ವ್ಯಾಪಕವಾಗಿ ಹಾರುಬೂದಿ ಹರಡುತ್ತಿದ್ದು ಸ್ಥಳೀಯರಲ್ಲಿ ಅಸ್ತಮಾದಂತಹ ಗಂಭೀರ ಖಾಯಿಲೆಗಳ ಗುಣಲಕ್ಷಣಗಳು ಗೋಚರಿಸಿದೆ. ಈ ಕುರಿತಾಗಿ ಸ್ಥಳೀಯರು ತಮ್ಮ ವೈದ್ಯಕೀಯ ವರದಿಗಳನ್ನು ಅಧಿಕಾರಿಗಳಿಗೆ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X