Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 25 ಲಕ್ಷ ಜನರ ಉದ್ಯೋಗಕ್ಕೆ ಕುತ್ತು?

25 ಲಕ್ಷ ಜನರ ಉದ್ಯೋಗಕ್ಕೆ ಕುತ್ತು?

ಉತ್ತರ ಪ್ರದೇಶ: ಕಸಾಯಿಖಾನೆ ಬಂದ್

ವಾರ್ತಾಭಾರತಿವಾರ್ತಾಭಾರತಿ27 March 2017 11:04 PM IST
share

ಲಕ್ನೊ, ಮಾ.27: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರ ರಾಜ್ಯದ ಅಕ್ರಮ ಕಸಾಯಿಖಾನೆಗಳ ವಿರುದ್ಧ ಸಾರಿರುವ ಸಮರವನ್ನು ವಿರೋಧಿಸಿ ರಾಜ್ಯಾದ್ಯಂತ ಮಾಂಸ ಮಾರಾಟಗಾರರು ಮುಷ್ಕರ ಹೂಡಿದ್ದಾರೆ. ಅಷ್ಟಕ್ಕೂ ಉತ್ತರ ಪ್ರದೇಶದಲ್ಲೆಷ್ಟು ಕಸಾಯಿಖಾನೆಗಳಿವೆ? ಅವುಗಳು ಎಷ್ಟು ಕೋಟಿ ವ್ಯವಹಾರ ನಡೆಸುತ್ತಿವೆಯೆಂಬ ಸ್ವಾರಸ್ಯಕಾರಿ ಮಾಹಿತಿ ಇಲ್ಲಿದೆ.

ದೇಶದಾದ್ಯಂತ ಸರಕಾರದಿಂದ ಅನುಮೋದಿಸಲ್ಪಟ್ಟ 72 ಕಸಾಯಿಖಾನೆಗಳಲ್ಲಿ 38 ಉತ್ತರ ಪ್ರದೇಶದಲ್ಲಿವೆ. ಇವುಗಳಲ್ಲಿ ನಾಲ್ಕು ಸರಕಾರದಿಂದ ನಡೆಸುವ ಕಸಾಯಿಖಾನೆಗಳಾಗಿದ್ದು ಇವುಗಳಲ್ಲಿ ಆಗ್ರಾ ಮತ್ತು ಸಹರಣಪುರದಲ್ಲಿರುವ ಕಸಾಯಿಖಾನೆಗಳು ಮಾತ್ರ ಕಾರ್ಯಾಚರಿಸುತ್ತಿವೆ. ಅಲಿಘರ್ ನಗರದಲ್ಲಿರುವ ಹಿಂದ್ ಆಗ್ರೋ ಐಎಂಪಿಪಿ 1996ರಲ್ಲಿ ಸ್ಥಾಪಿಸಲ್ಪಟ್ಟ ಉದ್ಯಮವಾಗಿದೆ. ರಾಜ್ಯದಲ್ಲಿರುವ ಮಾಂಸ ಸಂಸ್ಕರಣಾ ಘಟಕಗಳು ನೇರವಾಗಿ ಹಾಗೂ ಪರೋಕ್ಷವಾಗಿ 25 ಲಕ್ಷ ಜನರಿಗೆ ಉದ್ಯೋಗ ಒದಗಿಸುತ್ತಿವೆ.
ಉತ್ತರ ಪ್ರದೇಶದಲ್ಲಿರುವ ಹೆಚ್ಚಿನ ಕಸಾಯಿಖಾನೆಗಳು ಹಾಗೂ ಮಾಂಸ ಸಂಸ್ಕರಣಾ ಘಟಕಗಳು ರಫ್ತು ಆಧರಿತವಾಗಿವೆ. ಭಾರತದ ಎಮ್ಮೆ ಮಾಂಸಕ್ಕೆ ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿನ ಬೇಡಿಕೆಯಿದೆ. ಕಾರಣ ಅವುಗಳ ಬೆಲೆ ಕಡಿಮೆ ಹಾಗೂ ಅವು ಹಲಾಲ್ ಮಾಂಸವಾಗಿದೆ. ಹೀಗಿರುವಾಗ ಸ್ಥಳೀಯ ಮಾಂಸದ ಪೂರೈಕೆಯನ್ನು ಹೆಚ್ಚಾಗಿ ಅಕ್ರಮ ಕಸಾಯಿಖಾನೆಗಳೇ ಪೂರೈಸುತ್ತಿವೆ.
ಈ ಕಸಾಯಿಖಾನೆಗಳಲ್ಲಿ ಸರಾಸರಿ ದಿನವೊಂದಕ್ಕೆ 300ರಿಂದ 3,000 ಪ್ರಾಣಿಗಳ ಹತ್ಯೆ ನಡೆಸಲಾಗುತ್ತದೆ. ಇವುಗಲ್ಲಿ ಎಮ್ಮೆ, ಆಡು ಹಾಗೂ ಕುರಿ ಸೇರಿವೆ. ಹೆಚ್ಚಿನವು ತಮ್ಮ ಮಾಲಕರಿಗೆ ಉಪಯೋಗಕ್ಕೆ ಬಾರದ ಪ್ರಾಣಿಗಳಾಗಿವೆ ಹಾಗೂ ವರ್ತಕರಿಂದ ಸಾಪ್ತಾಹಿಕ ಮಂಡಿ ಬಝಾರ್‌ಗಳಲ್ಲಿ ಖರೀದಿಸಲಾಗುತ್ತದೆ. ಎಮ್ಮೆಯೊಂದರ ಬೆಲೆ ಸರಿಸುಮಾರು ರೂ. 20,000 ಆಗಿದೆ. ಒಂದು ಐಎಂಪಿಪಿ ಘಟಕ ಸ್ಥಾಪಿಸಲು ಅಂದಾಜು ರೂ. 40 ಕೋಟಿಯಿಂದ ರೂ. 50 ಕೋಟಿಯ ಅಗತ್ಯವಿದೆ. ರಾಜ್ಯದ ಕಸಾಯಿಖಾನೆಗಳಿಗೆ 15 ವರ್ಷ ಹಾಗೂ ಮೇಲ್ಪಟ್ಟ ಎಮ್ಮೆಗಳನ್ನು ಕೊಲ್ಲುವ ಅಧಿಕಾರವಿದೆ.
ಮಾಂಸ ತಯಾರಿ ಹಾಗೂ ರಫ್ತು ಕ್ಷೇತ್ರದಲ್ಲಿ ದೇಶದಲ್ಲಿಯೇ ಮೊದಲ ಸ್ಥಾನ ಉತ್ತರ ಪ್ರದೇಶಕ್ಕಿದೆ. ರಾಜ್ಯದಲ್ಲಿ ಸುಮಾರು 150 ಕಸಾಯಿಖಾನೆಗಳು ಹಾಗೂ 50,000ಕ್ಕೂ ಅಧಿಕ ಮಾಂಸದಂಗಡಿಗಳು ಪರವಾನಿಗೆಯಿಲ್ಲದೆ ಕಾರ್ಯಾಚರಿಸುತ್ತಿವೆ. ದೇಶದ ಒಟ್ಟು ಮಾಂಸ ಉತ್ಪಾದನೆಯಲ್ಲಿ ಶೇ.19.1 ಪಾಲು ಉತ್ತರ ಪ್ರದೇಶದ್ದಾಗಿದೆ.
ವಾರ್ಷಿಕ ರೂ. 26,685 ಕೋಟಿ ಮೊತ್ತದ ಮಾಂಸ ರಾಜ್ಯದಿಂದ ರಫ್ತಾಗುತ್ತಿದೆ. ಮಾಂಸದ ಮೇಲಿನ ನಿಷೇಧದಿಂದಾಗಿ ರಾಜ್ಯದ ಬೊಕ್ಕಸಕ್ಕೆ ರೂ. 11,350 ಕೋಟಿ ನಷ್ಟವುಂಟಾಗುವ ಸಂಭವವಿದೆ. ಮುಂದಿನ ಐದು ವರ್ಷಗಳ ಕಾಲ ಸ್ಥಿತಿ ಹೀಗೆಯೇ ಮುಂದುವರಿದರೆ ನಷ್ಟ ರೂ. 56,000 ಕೋಟಿಗೆ ಏರಬಹುದು ಎಂದು ಹೇಳಲಾಗುತ್ತಿದೆ.
2015-16ರಲ್ಲಿ ಉತ್ತರ ಪ್ರದೇಶ 5,65,958.20 ಮೆಟ್ರಿಕ್ ಟನ್ನುಗಳಷ್ಟು ಎಮ್ಮೆ ಮಾಂಸ ರಫ್ತು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X