Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಂದಡ್ಕ ಹೊಳೆಗೆ ಸೇರುತ್ತಿದೆ ಚರಂಡಿ ನೀರು

ಕಂದಡ್ಕ ಹೊಳೆಗೆ ಸೇರುತ್ತಿದೆ ಚರಂಡಿ ನೀರು

ಸುಳ್ಯದ ಜೀವನದಿ ಪಯಸ್ವಿನಿಯೂ ಕಲುಷಿತಗೊಳ್ಳುತ್ತಿದೆ

ಗಿರೀಶ್ ಅಡ್ಪಂಗಾಯಗಿರೀಶ್ ಅಡ್ಪಂಗಾಯ28 March 2017 12:11 AM IST
share
ಕಂದಡ್ಕ ಹೊಳೆಗೆ ಸೇರುತ್ತಿದೆ ಚರಂಡಿ ನೀರು

ಸುಳ್ಯ, ಮಾ.27: ಸುಳ್ಯ ನಗರದ ವಿವಿಧ ಚರಂಡಿಗಳಲ್ಲಿನ ತ್ಯಾಜ್ಯ ನೀರು ನಗರ ಸಮೀಪದಲ್ಲಿ ಹರಿಯುತ್ತಿರುವ ಕಂದಡ್ಕ ಹೊಳೆಗೆ ಸೇರುತ್ತಿದೆ. ಇದರಿಂದ ಹೊಳೆ ಸಂಪೂರ್ಣ ಮಲಿನಗೊಂಡಿದೆ. ಈ ಹೊಳೆ ನೀರು ಸೇರುವ ಸುಳ್ಯದ ಜೀವನದಿ ಕೂಡಾ ಇದರಿಂದ ಮಲಿನಗೊಳ್ಳುತ್ತಿದೆ. ಸುಳ್ಯದ ಜೀವ ನದಿ ಪಯಸ್ವಿನಿಗೆ ಸೇರುತ್ತಿದೆ. ಲಕ್ಷಾಂತರ ಮಂದಿಯ ಕುಡಿಯುವ ನೀರಿನ ಮೂಲವಾದ ಪಯಸ್ವಿನಿ ಮಲಿನಗೊಳ್ಳುತ್ತಿರುವುದು ಸಾರ್ವಜನಿಕರನ್ನು ಆತಂಕ ಕ್ಕೀಡು ಮಾಡಿದೆ.

ಸುಳ್ಯ ನಗರ ವ್ಯಾಪ್ತಿಯಲ್ಲಿ ಹರಿದು ಪಯಸ್ವಿನಿ ಸೇರುತ್ತಿರುವ ಕಂದಡ್ಕ ಹೊಳೆ ಹಳೆಗೇಟು ಬಳಿಯ ಬ್ರಹ್ಮರಗಯ ಎಂಬಲ್ಲಿ ಸಂಪೂರ್ಣ ಹರಿವು ನಿಲ್ಲಿಸಿದ್ದು ಬತ್ತಿ ಬರಡಾಗಿದೆ. ಆದರೆ ಅದಕ್ಕಿಂತ ಕೆಳಗಿನ ಭಾಗದಲ್ಲಿ ಕಾನತ್ತಿಲ ಎಂಬಲ್ಲಿ ಚರಂಡಿಯಲ್ಲಿ ಭಾರೀ ಪ್ರಮಾಣದಲ್ಲಿ ಹರಿದು ಬರುವ ಕೊಳಚೆ ನೀರು ನೇರವಾಗಿ ಹೊಳೆಯನ್ನು ಸೇರುತ್ತಿದೆ. ಇದರಿಂದ ಹೊಳೆಯು ಭಾರೀ ಪ್ರಮಾಣದ ಪ್ಲಾಸ್ಟಿಕ್, ಬಾಟಲಿ, ಪ್ಲೇಟ್ ಮತ್ತಿತರ ತ್ಯಾಜ್ಯಗಳು ಸೇರಿ ಕೊಚ್ಚೆ ನೀರಾಗಿ ಹರಿಯುತ್ತಿದೆ.

ಹೊಳೆಯ ನೀರು ಸಂಪೂರ್ಣ ಕಪ್ಪು ಬಣ್ಣಕ್ಕೆ ತಿರುಗಿದ್ದು ಅಲ್ಲಲ್ಲಿ ಹೊಂಡಗಳಲ್ಲಿ ಕೊಳಚೆ ನೀರು ಮತ್ತು ತ್ಯಾಜ್ಯಗಳು ಶೇಖರಣೆಗೊಂಡು ದುರ್ನಾತ ಬೀರುತ್ತಿದೆ. ಇಡೀ ಹೊಳೆಯೇ ಚರಂಡಿಯಂತಾಗಿದೆ. ಸುಳ್ಯ ನಗರದಲ್ಲಿ ಕೊಳಚೆ ನೀರಿಗಾಗಿ ಒಳಚರಂಡಿ ವ್ಯವಸ್ಥೆ ಇದೆ. ಆದರೆ ಇದರ ಸಂಪರ್ಕ ಪಡೆಯದೆ ಕೊಳಚೆ ನೀರನ್ನು ಮಳೆ ನೀರು ಹರಿಯುವ ಚರಂಡಿಗಳಿಗೆ ಬಿಡಲಾಗುತ್ತಿದೆ. ಕಂದಡ್ಕ ಹೊಳೆ ಕೊಳಚೆಯಾಗಲು ಇದೇ ಕಾರಣ ಎನ್ನುತ್ತಾರೆ ಈ ಭಾಗದ ನಪಂ ಸದಸ್ಯ ಹಾಗೂ ನಪಂ ಮಾಜಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ.

ಸಾಮಾನ್ಯವಾಗಿ ಮಳೆಗಾಲದಲ್ಲಿ ಮಳೆನೀರು ತುಂಬಿ ಹರಿಯುವ ಚರಂಡಿಗಳು ಬೇಸಿಗೆಯಲ್ಲಿ ಬರಡಾಗಿರುತ್ತವೆ. ಆದರೆ ಸುಳ್ಯ ನಗರದ ಹಲವು ಚರಂಡಿಗಳಲ್ಲಿ ಕೊಳಚೆ ನೀರು ಕಡು ಬೇಸಿಗೆಯಲ್ಲೂ ತುಂಬಿ ಹರಿಯುತ್ತಿದೆ. ಇದು ಸಾಲದು ಎಂಬಂತೆ ಮಣ್ಣನ್ನು ತುಂಬಿ ಕಂದಡ್ಕ ಹೊಳೆಯ ಒಡಲನ್ನು ಅತಿಕ್ರಮಣ ಮಾಡಲಾಗಿದೆ. ನದಿಯ ಸಹಜ ಹರಿವಿಗೆ ತಡೆ ಒಡ್ಡುವ ಪ್ರಕ್ರಿಯೆಯೂ ಕಂದಡ್ಕ ಹೊಳೆಯಲ್ಲಿ ವ್ಯಾಪಕವಾಗಿ ಕಂಡು ಬಂದಿದೆ. ಹೊಳೆಯ ಬದಿಯ ತಡೆಗೋಡೆಯನ್ನು ದಾಟಿ ಕೆಳಗೆ ಮಣ್ಣು ತುಂಬಲಾಗುತ್ತಿದೆ.

ಅಲ್ಲಲ್ಲಿ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದರಿಂದ ಹೊಳೆ ಸಂಪೂರ್ಣ ತ್ಯಾಜ್ಯಯುಕ್ತವಾಗಿದೆ. ಕಂದಡ್ಕ ಹೊಳೆ ಕೊಳಚೆ ಗುಂಡಿಯಾಗಿ ಪರಿವರ್ತಿತವಾಗಿದ್ದು, ಈ ನೀರು ನೇರವಾಗಿ ಪಯಸ್ವಿನಿ ನದಿಯನ್ನು ಸೇರುತ್ತಿದೆ. ಇದರಿಂದ ನದಿ ನೀರು ಮಲಿನಗೊಳ್ಳುತ್ತಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಈ ಪ್ರದೇಶದಲ್ಲಿ ಸಾಧಾರಣವಾಗಿ ಪ್ರತೀವರ್ಷ ಜಾಂಡಿಸ್, ಚಿಕುನ್ ಗುನ್ಯಾ, ಇಲಿಜ್ವರ, ಡೆಂಗ್ ಸೇರಿ ದಂತೆ ಹತ್ತಾರು ಸಾಂಕ್ರಾಮಿಕ ರೋಗಗಳ ಹಾವಳಿ ಸಾಮಾನ್ಯವಾಗಿರುತ್ತದೆ. ನದಿಗೆ ತ್ಯಾಜ್ಯಯುಕ್ತ ನೀರು ಸೇರಿ ಮಲಿನಗೊಳ್ಳುತ್ತಿರುವುದು ಇದಕ್ಕೆ ಕಾರಣವಿರಬಹುದು ಎಂಬ ಆತಂಕ ಕೇಳಿಬರುತ್ತಿದೆ.

ಕೊಳಚೆ ನೀರು ಸೇರಿ ಹೊಳೆ ಮಲಿನಗೊಳ್ಳುವುದನ್ನು ತಡೆಗಟ್ಟಲು ಮತ್ತು ಮಣ್ಣು ತುಂಬಿ ಹೊಳೆಯನ್ನು ಆಕ್ರಮಿಸುವುದರ ವಿರುದ್ಧ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಠಿಣ ಕ್ರಮ ಜರಗಿಸಬೇಕು ಎಂದು ಪ್ರಕಾಶ್ ಹೆಗ್ಡೆ ಒತ್ತಾಯಿಸಿದ್ದಾರೆ.

share
ಗಿರೀಶ್ ಅಡ್ಪಂಗಾಯ
ಗಿರೀಶ್ ಅಡ್ಪಂಗಾಯ
Next Story
X