Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಸಂಸ್ಥೆಯ ಪರಮಾಣು ನಿಶ್ಶಸ್ತ್ರೀಕರಣ...

ವಿಶ್ವಸಂಸ್ಥೆಯ ಪರಮಾಣು ನಿಶ್ಶಸ್ತ್ರೀಕರಣ ಸಮ್ಮೇಳನದಿಂದ ಭಾರತ ದೂರ

ಜಿನೇವ ನಿಶ್ಶಸ್ತ್ರೀಕರಣ ಸಮ್ಮೇಳನಕ್ಕೆ ಭಾರತ ಒಲವು

ವಾರ್ತಾಭಾರತಿವಾರ್ತಾಭಾರತಿ28 March 2017 9:15 PM IST
share
ವಿಶ್ವಸಂಸ್ಥೆಯ ಪರಮಾಣು ನಿಶ್ಶಸ್ತ್ರೀಕರಣ ಸಮ್ಮೇಳನದಿಂದ ಭಾರತ ದೂರ

ವಿಶ್ವಸಂಸ್ಥೆ, ಮಾ. 28: ಪರಮಾಣು ಶಸ್ತ್ರಗಳ ಜಾಗತಿಕ ನಿಷೇಧದ ಬಗ್ಗೆ ಚರ್ಚಿಸುವುದಕ್ಕಾಗಿ 20 ವರ್ಷಗಳಿಗೂ ಅಧಿಕ ಅವಧಿಯಲ್ಲಿ ನಡೆಯುತ್ತಿರುವ ಪ್ರಥಮ ವಿಶ್ವಸಂಸ್ಥೆ ಸಮ್ಮೇಳನದಲ್ಲಿ ಭಾರತ ಭಾಗವಹಿಸುವುದಿಲ್ಲ.

ಪ್ರಮುಖ ಪರಮಾಣು ಶಕ್ತ ದೇಶಗಳ ವಿರೋಧದ ನಡುವೆಯೇ ಸಮ್ಮೇಳನ ಸೋಮವಾರ ಆರಂಭಗೊಂಡಿದೆ.

ಪರಮಾಣು ಅಸ್ತ್ರಗಳನ್ನು ನಿಷೇಧಿಸುವ ಮತ್ತು ಹಂತ ಹಂತವಾಗಿ ಸಂಪೂರ್ಣವಾಗಿ ನಿರ್ಮೂಲಗೊಳಿಸುವ ಹಾಗೂ ಪಾಲಿಸುವುದು ಕಡ್ಡಾಯವಾಗಿರುವ ಒಪ್ಪಂದವೊಂದರ ಬಗ್ಗೆ ಚರ್ಚಿಸಲು ಸಮ್ಮೇಳನವೊಂದನ್ನು ಏರ್ಪಡಿಸಬೇಕೆಂಬ ನಿರ್ಣಯವನ್ನು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ 120ಕ್ಕೂ ಅಧಿಕ ದೇಶಗಳು ಅಂಗೀಕರಿಸಿದ್ದವು.

ಬ್ರಿಟನ್, ಫ್ರಾನ್ಸ್, ಇಸ್ರೇಲ್, ರಶ್ಯ ಮತ್ತು ಅಮೆರಿಕಗಳು ನಿರ್ಣಯದ ವಿರುದ್ಧವಾಗಿ ಮತ ಚಲಾಯಿಸಿದರೆ, ಭಾರತ, ಚೀನಾ ಮತ್ತು ಪಾಕಿಸ್ತಾನಗಳು ಮತದಾನದಿಂದ ದೂರವುಳಿದಿದ್ದವು.

ಜಾಗತಿಕ ಸಮುದಾಯ ಬಯಸುವ ಸಮಗ್ರ ಪರಮಾಣು ನಿಶ್ಶಸ್ತ್ರೀಕರಣವನ್ನು ಈ ಸಮ್ಮೇಳನ ಸಾಧಿಸುವ ಬಗ್ಗೆ ತನಗೆ ಮನದಟ್ಟಾಗಿಲ್ಲ ಎಂಬುದಾಗಿ ಭಾರತ ಅಕ್ಟೋಬರ್‌ನಲ್ಲಿ ತನ್ನ ಅನುಪಸ್ಥಿತಿಗೆ ಕಾರಣವನ್ನು ನೀಡಿತ್ತು.

ಜಿನೇವದಲ್ಲಿರುವ ನಿಶ್ಶಸ್ತ್ರೀಕರಣ ಸಮ್ಮೇಳನವೊಂದೇ ಬಹುಪಕ್ಷೀಯ ನಿಶ್ಶಸ್ತ್ರೀಕರಣ ಮಾತುಕತೆ ವೇದಿಕೆಯಾಗಿದೆ ಎಂದು ಭಾರತ ಅಭಿಪ್ರಾಯಪಟ್ಟಿದೆ.
ನಿಶ್ಶಸ್ತ್ರೀಕರಣ ಸಮ್ಮೇಳನದಲ್ಲಿ ಪರಮಾಣು ನಿಶ್ಶಸ್ತ್ರೀಕರಣದ ಬಗ್ಗೆ ಚರ್ಚೆ ಆರಂಭಗೊಳ್ಳುವುದನ್ನು ತಾನು ಬೆಂಬಲಿಸುವುದಾಗಿ ಭಾರತ ಹೇಳಿದೆ. ಈ ಚರ್ಚೆಯು ನಿಷೇಧ ಮತ್ತು ನಿರ್ಮೂಲನದ ಜೊತೆಗೆ ಪರಿಶೀಲನೆಯನ್ನೂ ಒಳಗೊಂಡಿದೆ.

ಜಾಗತಿಕ ಪರಮಾಣು ಶಸ್ತ್ರಗಳ ನಿಶ್ಶಸ್ತ್ರೀಕರಣದ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಪರಿಶೀಲನೆ ಮಹತ್ವದ್ದಾಗಿದೆ ಎಂದು ಭಾರತ ಹೇಳಿತ್ತು. ಹಾಲಿ ಪ್ರಕ್ರಿಯೆಯಲ್ಲಿ ಪರಿಶೀಲನೆಯ ಅಂಶವಿಲ್ಲ ಎಂಬುದಾಗಿ ಭಾರತ ಅಭಿಪ್ರಾಯಪಟ್ಟಿದೆ.

ನಿರ್ಣಯ ಅಂಗೀಕಾರದ ಸಮಯದಲ್ಲಿ ಭಾರತ ತಳೆದ ನಿಲುವಿಗೆ ಅನುಗುಣವಾಗಿ, ಹಾಲಿ ಸಮ್ಮೇಳನದಲ್ಲಿ ಭಾಗವಹಿಸದಿರಲು ಭಾರತ ನಿರ್ಧರಿಸಿದೆ. ಪ್ರಸಕ್ತ ಸಮ್ಮೇಳನ ಮಾರ್ಚ್ 31ರವರೆಗೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X