Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ನಗರಕ್ಕೆ 3 ತಿಂಗಳು ನೀರಿನ...

ಪುತ್ತೂರು ನಗರಕ್ಕೆ 3 ತಿಂಗಳು ನೀರಿನ ಸಮಸ್ಯೆಯಿಲ್ಲ: ಅಧ್ಯಕ್ಷೆ ಜಯಂತಿ ಬಲ್ನಾಡು

ವಾರ್ತಾಭಾರತಿವಾರ್ತಾಭಾರತಿ28 March 2017 10:00 PM IST
share
ಪುತ್ತೂರು ನಗರಕ್ಕೆ 3 ತಿಂಗಳು ನೀರಿನ ಸಮಸ್ಯೆಯಿಲ್ಲ: ಅಧ್ಯಕ್ಷೆ ಜಯಂತಿ ಬಲ್ನಾಡು

ಪುತ್ತೂರು, ಮಾ.28: ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ನೆಕ್ಕಿಲಾಡಿ ಕಿಂಡಿ ಅಣೆಕಟ್ಟಿನಲ್ಲಿ 3 ಮೀ. ಎತ್ತರ ನೀರು ತುಂಬಿಕೊಂಡಿದ್ದು, ಮುಂದಿನ ಮೂರು ತಿಂಗಳಿಗೆ ನಗರಕ್ಕೆ ಬೇಕಾಗುಷ್ಟು ನೀರು ಸಂಗ್ರಹದಲ್ಲಿದೆ. ಈ ಬಾರಿ ನಗರಕ್ಕೆ ನೀರಿನ ಸಮಸ್ಯೆಯಾಗದು ಎಂದು ಪುತ್ತೂರು ನಗರಸಭೆ ಅಧ್ಯಕ್ಷೆ ಜಯಂತಿ ಬಲ್ನಾಡು ಹೇಳಿದರು.

 ಅವರು ಮಂಗಳವಾರ ನೆಕ್ಕಿಲಾಡಿ ಕಿಂಡಿ ಅಣೆಕಟ್ಟು ಹಾಗೂ ರೇಚಕ ಯಂತ್ರ ಸ್ಥಾವರಕ್ಕೆ ನಗರಸಭಾ ಸದಸ್ಯರು ಮತ್ತು ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನದಿಯಲ್ಲಿ ಪ್ರಸ್ತುತ ಒಳಹರಿವು ಉತ್ತಮವಾಗಿದೆ. ಪುತ್ತೂರು ನಗರಸಭಾ ವ್ಯಾಪ್ತಿಗೆ ಶೇ.60ರಷ್ಟು ನೀರು ಪೂರೈಕೆ ಮಾಡುವ ನೆಕ್ಕಿಲಾಡಿ ಡ್ಯಾಂನಲ್ಲಿ 3 ಮೀಟರ್ ಎತ್ತರ ನೀರು ಶೇಖರಣೆಯಾಗಿದೆ. ಇದು ಕಡಿಮೆಯಾದರೆ ಡ್ಯಾಂಗೆ ನೀರು ತುಂಬಿಸುವ ಕೆಲಸ ಮಾಡಲಾಗುವುದು ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಿರು ನೀರು ಯೋಜನೆಯ 144 ಕೊಳವೆ ಬಾವಿಗಳು ಇವೆ. ಇವುಗಳ ಮೂಲಕ ಶೇ.40ರಷ್ಟು ಫಲಾನುಭವಿಗಳಿಗೆ ನೀರು ಒದಗಿಸಲಾಗುತ್ತಿದೆ. 22 ಹೊಸ ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಇವುಗಳಲ್ಲಿ 6 ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರು ವಿತರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಗರಸಭಾ ವ್ಯಾಪ್ತಿಯಲ್ಲಿ ಯಾವುದೇ ಸಂದರ್ಭ ನೀರಿನ ಕುರಿತು ಸಮಸ್ಯೆ ಉಂಟಾಗದಂತೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ. ಪ್ರತಿಯೊಬ್ಬ ಜನಪ್ರತಿನಿಧಿಯೂ ನೀರಿನ ಕುರಿತ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲಿದ್ದಾರೆ. ಕಳೆದ ಬಾರಿ ಮಂಗಳೂರು ನಗರದಲ್ಲಿ ನೀರಿನ ಸಮಸ್ಯೆ ಉಂಟಾದಾಗ ತುಂಬೆ ಡ್ಯಾಂಗೆ ನೆಕ್ಕಿಲಾಡಿ ಡ್ಯಾಂನಿಂದ ನೀರು ಹರಿಸಲಾಗಿತ್ತು. ಪರಿಸ್ಥಿತಿಯನ್ನು ನೋಡಿ ಈ ಅನುಮತಿ ನೀಡಲಾಗಿತ್ತು. ಈ ಬಾರಿ ನೀರು ಕೇಳಿದರೆ ಒಳಹರಿವು ಪ್ರಮಾಣ ಹಾಗೂ ಇಲ್ಲಿನ ಪರಿಸ್ಥಿತಿಯನ್ನು ವಿಮರ್ಶಿಸಿ ಕೊಡುವುದೋ, ಬೇಡವೋ ಎಂಬ ಕುರಿತು ನಿರ್ಧರಿಸಲಾಗುವುದು. ತೀರಾ ಕಷ್ಟಕರ ಪರಿಸ್ಥಿತಿಯಿದ್ದರೆ ನೀರು ಹರಿಸಲು ನಿರಾಕರಿಸಲಾಗುವುದು ಎಂದು ಅಧ್ಯಕ್ಷೆ ಜಯಂತಿ ಬಲ್ನಾಡು ಸ್ಪಷ್ಟ ಪಡಿಸಿದರು.

ಹಿರಿಯ ಸದಸ್ಯ ಎಚ್. ಮಹಮ್ಮದ್ ಆಲಿ ಮಾತನಾಡಿ ವಿದ್ಯುತ್ ಸಂಪರ್ಕ ಕೇಳಿದ ಸಂದರ್ಭ ಮೆಸ್ಕಾಂ ಅಧಿಕಾರಿಗಳು ಅಸಹಕಾರ ತೋರುತ್ತಿದ್ದಾರೆ. ಇದರಿಂದ ಕೆಲಸಕ್ಕೆ ಸ್ವಲ್ಪ ಮಟ್ಟಿನ ತೊಂದರೆಯಾಗಿದೆ. ಮೆಸ್ಕಾಂ ಅಧಿಕಾರಿಗಳು ಕುಡಿಯುವ ನೀರಿನ ವಿಚಾರಕ್ಕಾಗಿ ಸಹಕಾರ ನೀಡಬೇಕಾಗಿದೆ. ನಗರಸಭೆಯಲ್ಲಿ ದಿನದ 24 ಗಂಟೆಯೂ ಕೆಲಸ ಮಾಡಲು ಸಿದ್ಧರಿರುವ ವಹಿಸಿರುವ ಸಿಬ್ಬಂದಿಗಳಿದ್ದಾರೆ. ಅವರ ಉಸ್ತುವಾರಿಯಲ್ಲಿಯೇ ನೀರು ಸರಬರಾಜು ಕೆಲಸ ಯಾವುದೇ ಸಮಸ್ಯೆಗಳಿಲ್ಲದೆ ನಿರಂತರ ನಡೆಯುತ್ತಿದೆ. ಮೆಸ್ಕಾಂ ಸಹಕಾರ ನೀಡಿದರೆ ಎಲ್ಲಾ ಸಮಸ್ಯೆಗಳನ್ನು ಯಶಸ್ವಿಯಾಗಿ ನಿಭಾಯಿಸಲು ಸಾಧ್ಯ ಎಂದು ಹೇಳಿದರು.

ನಗರಸಭಾ ವ್ಯಾಪ್ತಿಯಲ್ಲಿ ಕೆಲವು ಎತ್ತರದ ಪ್ರದೇಶಗಳಿಗೆ ಹಾಗೂ ನೀರಿನ ಸಮಸ್ಯೆ ಇರುವಲ್ಲಿಗೆ ಒಂದೂವರೆ ತಿಂಗಳಿನಿಂದ ಟ್ಯಾಂಕರ್‌ಗಳಲ್ಲಿ ನೀರು ಪೂರೈಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ಹೆಬ್ಬಾರಬೈಲು, ಜಿಡೆಕಲ್ಲು, ಬಲ್ನಾಡುಪದವು, ತಾರಿಗುಡ್ಡೆ, ರೋಟರಿಪುರ, ಕೆಮ್ಮಾಯಿಪದವು, ಮಚ್ಚಿಮಲೆ, ಮರೀಲ್ ಕೂರ್ನಡ್ಕ, ದರ್ಬೆ ಹಳೆ ಡಿವೈಎಸ್ಪಿ ಕಚೇರಿ ಹಿಂದೆ, ಬನ್ನೂರು ಶಾಲೆ ಬಳಿ, ಗೋಳಿಕಟ್ಟೆ ಕುಲಾಲ್ ರಸ್ತೆ, ಬೆದ್ರಾಳ ನೆಕ್ಕರೆ ಪರಿಸರ ಸೇರಿದಂತೆ ಸುಮಾರು 20 ಕಡೆಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. 2-3 ಟ್ಯಾಂಕರ್‌ಗಳಲ್ಲಿ ನೀರು ಪೂರೈಕೆ ಮಾಡಲೂ ನಗರಸಭೆ ಸಿದ್ಧವಿದೆ ಎಂದು ಮಹಮ್ಮದ್ ಆಲಿ ಹೇಳಿದರು.

ಈ ಸಂದರ್ಭ ನಗರಸಭಾ ಸದಸ್ಯರಾದ ಶಕ್ತಿ ಸಿನ್ಹಾ, ಅನ್ವರ್ ಖಾಸಿಂ, ಮುಖೇಶ್ ಕೆಮ್ಮಿಂಜೆ, ನೀರಿನ ವಿಭಾಗ ಮೇಲ್ವಿಚಾರಕ ವಸಂತ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X