Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೊಬೈಲ್ ಟವರ್ ವಿರುದ್ಧ ಗ್ರಾಮಸ್ಥರಿಂದ...

ಮೊಬೈಲ್ ಟವರ್ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ

ಮನವಿ ಸ್ವೀಕರಿಸಲು ನಿರಾಕರಿಸಿದ ಗ್ರಾ.ಪಂ. ಅಧ್ಯಕ್ಷೆಯ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ30 March 2017 5:26 PM IST
share
ಮೊಬೈಲ್ ಟವರ್ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ

ಮೂಡುಬಿದಿರೆ,ಮಾ.30 : ಹೌದಾಲ್ ಪರಿಸರದಲ್ಲಿ ನಿರ್ಮಿಸಲುದ್ದೇಶಿಸಿರುವ ಮೊಬೈಲ್ ಟವರ್‌ನ ವಿರುದ್ಧ ಸ್ಥಳೀಯ ಗ್ರಾಮಸ್ಥರು ಶಿರ್ತಾಡಿಯ ಗ್ರಾಮ ಪಂಚಾಯತ್ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಶಿರ್ತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೌದಾಲ್‌ನ ಅಂಗನವಾಡಿ ಬಳಿಯೇ ಇರುವ ಖಾಸಗಿ ಜಾಗವೊಂದರಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಏರ್‌ಟೆಲ್ ಕಂಪೆನಿಯವರು ಸಿದ್ಧತೆ ನಡೆಸಿದ್ದು, ಇದನ್ನರಿತ ಸ್ಥಳೀಯರು ಪಂಚಾಯತ್ ವಿರುದ್ಧ ಆಕ್ರೋಶಿತರಾಗಿದ್ದಾರೆ. ಗುರುವಾರ ಬೆಳಿಗ್ಗೆ 11 ಗಂಟೆಗೆ ಆರಂಭಗೊಂಡ ಪ್ರತಿಭಟನೆಯಲ್ಲಿ ಪಂಚಾಯತ್ ಅಧ್ಯಕ್ಷೆ ಹಾಗೂ ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಟವರ್ ಅನ್ನು ಜನವಸತಿ ಇಲ್ಲದೆಡೆ ಸ್ಥಾಪಿಸಿ ಎಂದು ಒತ್ತಾಯಿಸಿದರು.

 ಪ್ರತಿಭಟನಾಕಾರರಿಗೆ ಪಂಚಾಯತ್ ಆವರಣದೊಳಕ್ಕೆ ಪ್ರವೇಶಿಸದಂತೆ ಗೇಟು ಹಾಕಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಈ ಸಂದರ್ಭ ಮೈಕ್‌ನಲ್ಲಿ ಘೋಷಣೆಗಳನ್ನು ಕೂಗುವುದಕ್ಕೆ ಆರಂಭಿಸಿದ ಕೂಡಲೇ ಸ್ಥಳಕ್ಕೆ ಬಂದ ಪಂಚಾಯತ್ ಅಧ್ಯಕ್ಷ ಲತಾ ಹೆಗ್ಡೆ ಹತ್ತಿರದಲ್ಲಿಯೇ ಇರುವ ಖಾಸಗಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವುದರಿಂದ ಮೈಕ್ ಬಂದ್ ಮಾಡಲು ಸೂಚಿಸುವಂತೆ ಪೊಲೀಸರಿಗೆ ತಿಳಿಸಿದರು. ಇದರಿಂದ ಉದ್ರಿಕ್ತಗೊಂಡ ಪ್ರತಿಭಟನಾಕಾರರು ನಿಮಗೆ ಅನಧಿಕೃತವಾಗಿ ಲಂಚದ ಆಮಿಷಕ್ಕಾಗಿ ಅಂಗನವಾಡಿಯ ಬಳಿಯೇ ಮೊಬೈಲ್ ಟವರ್‌ಗೆ ಅನುಮತಿ ನೀಡಲಿಕ್ಕಾಗುತ್ತದೆ. ಆಗ ಇಲ್ಲದ ಮಕ್ಕಳ ಮೇಲಿನ ಮಮಕಾರ ಈಗೆಲ್ಲಿಂದ ಬಂತು?ಎಂದು ಪ್ರಶ್ನಿಸಿದರು. ಇದರಿಂದ ನಿರುತ್ತರರಾದ ಅಧ್ಯಕ್ಷೆ ತಕ್ಷಣವೇ ಸ್ಥಳ ಖಾಲಿ ಮಾಡಿ ಪಂಚಾಯತ್‌ನ ತಮ್ಮ ಕಚೇರಿ ಸೇರಿದರು.

 ನಂತರ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಹೋರಾಟಗಾರ, ದ.ಕ. ಜಿಲ್ಲಾ ರೈತ ಪ್ರಾಂತದ ಕಾರ್ಯದರ್ಶಿ ಯಾದವ ಶೆಟ್ಟಿ, ಸಣ್ಣ ಸಣ್ಣ ಮಕ್ಕಳು ಕಲಿಯುತ್ತಿರುವ ಅಂಗನವಾಡಿಯ ಬದಿಯಲ್ಲಿಯೇ ಮೊಬೈಲ್ ಟವರ್ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿರುವ ಗ್ರಾಮ ಪಂಚಾಯತ್ ಗ್ರಾಮಸ್ಥರ ವಿರೋಧ ಕಟ್ಟಿಕೊಂಡಿದೆ. ಕೂಡಲೇ ಅನುಮತಿಯನ್ನು ರದ್ದುಗೊಳಿಸಿ ಜನರ ಪ್ರಾಣ ಕಾಪಾಡಬೇಕಾಗಿದೆ. ಗ್ರಾ.ಪಂ. ಅಧ್ಯಕ್ಷೆ ಹಾಗೂ ಆಡಳಿತ ಮಂಡಳಿಯು ಈ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕುಎಂದರು.

  ನಂತರ ಮಾತನಾಡಿದ ಮಹಿಳಾ ಹೋರಾಟಗಾರ್ತಿ ರಮಣಿ, ಶಿರ್ತಾಡಿ ಗ್ರಾ.ಪಂ. ಅಧ್ಯಕ್ಷೆ ಓರ್ವ ಮಹಿಳೆಯಾಗಿದ್ದು ಟವರ್ ನಿರ್ಮಾಣ ಉದ್ದೇಶಿಸಿರುವ ಜಾಗದ ಹತ್ತಿರದ ನಿವಾಸಿಗಳಲ್ಲೂ ಕೂಡಾ ಅಧಿಕ ಸಂಖ್ಯೆಯಲ್ಲಿ ಮಹಿಳೆಯರಿದ್ದು ತಮ್ಮಂತೆಯೇ ಅವರು ಕೂಡಾ ಬದುಕುವ ಹಕ್ಕನ್ನು ಹೊಂದಿದ್ದಾರೆ. ಅವರ ಆರೋಗ್ಯವನ್ನು ಹಾಗೂ ಅಲ್ಲಿನ ಮಕ್ಕಳು ಹಾಗೂ ಹಿರಿಯರ ಆರೋಗ್ಯವನ್ನು ಲೆಕ್ಕಿಸದೇ ಇದೀಗ ಅಹಂಕಾರದ ವರ್ತನೆಯನ್ನು ತೋರಿಸುತ್ತಿರುವ ಅಧ್ಯಕ್ಷೆಯ ವರ್ತನೆಯನ್ನು ನಾವು ಖಂಡಿಸುತ್ತೇವೆ. ಒಂದೊಮ್ಮೆ ಒಂದು ವಾರದೊಳಗೆ ಟವರ್ ಅನುಮತಿಯನ್ನು ರದ್ದುಗೊಳಿಸದೇ ಇದ್ದಲ್ಲಿ ಪಂಚಾಯತ್ ಆವರಣದೊಳಗೆ ಅಮರನಾಂತ ಉಪವಾಸ ಸತ್ಯಾಗ್ರಹ ಕೂರುತ್ತೇವೆಎಂದರು.

ವಿಚಿತ್ರ ನಿಯಮದ ವಿರುದ್ಧವೂ ಆಕ್ರೋಶ : ಶಿರ್ತಾಡಿ ಗ್ರಾಮ ಪಂಚಾಯತ್‌ನಲ್ಲಿ ಒಂದು ವಿಚಿತ್ರ ನಿಯಮ ಜಾರಿಯಲ್ಲಿದೆ! ಅದೇನೆಂದರೆ ಯಾರಾದರೂ ಯಾವುದಾದರೂ ವಿಷಯದ ಮೇಲೆ ಪಂಚಾಯತ್ ವಿರುದ್ಧ ಪ್ರತಿಭಟನೆ ಮಾಡಲು ಉದ್ದೇಶಿಸಿದರೆ ಅದೇ ಪಂಚಾಯತ್‌ನಲ್ಲಿ ಅನುಮತಿ ಪಡೆಯಬೇಕು! ಇದನ್ನು ಅಲ್ಲಿನ ಗ್ರಾಮ ಪಂಚಾಯತ್ ಸಭೆಯಲ್ಲಿಯೇ ತೀರ್ಮಾನಿಸಿ ಜಾರಿಗೆ ತರಲಾಗಿದೆ. ಎಲ್ಲೂ ಇಲ್ಲದ ಈ ರೀತಿಯ ನಿಯಮದಿಂದಾಗಿ ಪಂಚಾಯತ್ ವಿರುದ್ಧ ಪ್ರತಿಭಟನೆ ಮಾಡಬೇಕಾದವರು ಅನುಮತಿ ಕೇಳಿದರೆ ಕೊಡುತ್ತಾರೆಂದು ಅಂದುಕೊಳ್ಳುವುದು ದುಬಾರಿಯಾಗುತ್ತದೆ! ಗುರುವಾರ ನಡೆದ ಪ್ರತಿಭಟನೆಯಲ್ಲಿ ಈ ಬಗ್ಗೆಯೂ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾಯಿತು. ಹೀಗಾಗಿ ಗುರುವಾರ ನಡೆದ ಗ್ರಾಮಸ್ಥರ ಪ್ರತಿಭಟನೆ ಪಂಚಾಯತ್‌ನಿಂದ ಅನುಮತಿ ಪಡೆಯದೇಯೆ ನಡೆಸಲಾಗಿದೆ. ಇದಕ್ಕೂ ಮುಂಚೆ ಈ ನಿರ್ಣಯದ ವಿರುದ್ಧ ಪಂಚಾಯತ್ ಆವರಣದೊಳಗೆ ಕಾರ್ಮಿಕ ಹೋರಾಟಗಾರ ಸುದತ್ತ ಜೈನ್ ಮೂರು ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದರು.

10 ಬಾರಿ ಅಧ್ಯಕ್ಷೆಯನ್ನು ಭೇಟಿಯಾದ ಎಎಸ್‌ಐ : ಪ್ರತಿಭಟನೆಯ ನಂತರ ಮನವಿ ನೀಡುವುದಕ್ಕಾಗಿ ಅಧ್ಯಕ್ಷೆಯನ್ನು ಸ್ಥಳಕ್ಕೆ ಕರೆಯುವಂತೆ ಪ್ರತಿಭಟನಾಕಾರರು ಎಎಸ್‌ಐ ಅವರಲ್ಲಿ ಕೇಳಿಕೊಂಡರು. ಅದಕ್ಕಾಗಿ ಗ್ರಾ.ಪಂ. ಕಚೇರಿಯೊಳಗೆ ಹೋದ ಎಎಸ್‌ಐ ಅಧ್ಯಕ್ಷೆಯನ್ನು ಸ್ಥಳಕ್ಕೆ ಬರುವಂತೆ ತಿಳಿಸಿದರು. ಆದರೆ ಅದಕ್ಕೊಪ್ಪದ ಅಧ್ಯಕ್ಷೆ ಲತಾ ಹೆಗ್ಡೆ ತನಗೆ ಮೀಟಿಂಗ್ ಇದೆ, ಅದು ಮುಗಿದ ಮೇಲೆ ಬರುವುದಾಗಿ ಎಎಸ್‌ಐ ಅವರನ್ನು ವಾಪಾಸು ಕಳುಹಿಸಿದರು.

 ಪ್ರತಿಭಟನಾಕಾರರ ಬಳಿ ಬಂದ ಎಎಸ್‌ಐ ಅವರನ್ನು ಸಮಾಧಾನಿಸಿ ಯಾರಾದರೂ ಇಬ್ಬರು ಒಳಗೆ ಬಂದು ಮನವಿ ನೀಡುವಂತೆ ಹೇಳಿದರು. ಆದರೆ ಅದಕ್ಕೊಪ್ಪದ ಪ್ರತಿಭಟನಾಕಾರರು ಚುನಾವಣೆಯ ಸಂದರ್ಭದಲ್ಲಿ ಓಟು ಬೇಡಿಕೊಂಡು ಮನೆಬಾಗಿಲಿಗೆ ಬರುವ ಅಧ್ಯಕ್ಷೆ ಇದೀಗ ಜನರ ಬಳಿಗೆ ಬರುವುದಕ್ಕೆ ಯಾಕೆ ನಿರ್ಲಕ್ಷ್ಯ ಮಾಡುತ್ತಿದ್ದಾರೆಂದು ಪಟ್ಟುಹಿಡಿದರು. ನಂತರ ಒಟ್ಟು 10ಕ್ಕಿಂತ ಹೆಚ್ಚುಬಾರಿ ಸಂಧಾನಕಾರರಾಗಿ ತೆರಳಿದ ಎಎಸ್‌ಐಯ ಒಂದೇ ಒಂದು ಮಾತಿಗೂ ಬೆಲೆ ಕೊಡದೇ ಸತಾಯಿಸಿದ ಅಧ್ಯಕ್ಷೆಯ ದರ್ಪದ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರಗಳನ್ನು ಕೂಗಿದರು. ಮಹಿಳೆಯರು ಮಕ್ಕಳಿದ್ದ ಈ ಪ್ರತಿಭಟನೆಯಲ್ಲಿ ಬಿಸಿಲಿನ ಝಳ ಲೆಕ್ಕಿಸದೇ ಅಲ್ಲೇ ನೆಲದಲ್ಲಿ ಕೂತುಕೊಂಡು ಪ್ರತಿಭಟನೆಯನ್ನು ಮುಂದುವರಿಸಿದರು. ಸಭೆ ಮುಗಿದ ಬಳಿಕ ಉಪಾಧ್ಯಕ್ಷ ರಾಜೇಶ್ ಸುವರ್ಣ ಅವರನ್ನು ಪ್ರತಿಭಟನಾಕಾರರ ಬಳಿಗೆ ಕಳುಹಿಸಿದ ಅಧ್ಯಕ್ಷೆ ತಾನು ಮನವಿ ಸ್ವೀಕರಿಸುವುದಿಲ್ಲವೆಂದು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X