Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಣಿಯೂರು ಬಿಜೆಪಿ ಸಾಧನ ಸಮಾವೇಶ

ಕಾಣಿಯೂರು ಬಿಜೆಪಿ ಸಾಧನ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ30 March 2017 6:13 PM IST
share
ಕಾಣಿಯೂರು ಬಿಜೆಪಿ ಸಾಧನ ಸಮಾವೇಶ

ಕಡಬ, ಮಾ.30.ಕಾಂಗ್ರೆಸ್ ಮುಕ್ತ ಕರ್ನಾಟಕ್ಕೆ ಬಿಜೆಪಿ ಕಾರ್ಯಕರ್ತರು ಪಣತೊಟ್ಟಿದ್ದು, ತಳಮಟ್ಟದಿಂದಲೇ ಬಿಜೆಪಿಯ ಜನಪರ ಯೋಜನೆ, ಸಾಧನೆ ಬಗ್ಗೆ ಪ್ರಚಾರಪಡಿಸಲಾಗುತ್ತಿದೆ. ಕಾಣಿಯೂರಿನಂತಹ ಗ್ರಾಮಿಣ ಭಾಗದಲ್ಲಿ ಸ್ಥಳಿಯ ಕಾಂಗ್ರೆಸ್ ನಾಯಕರುಗಳು ಬಿಜೆಪಿ ಜನಪ್ರತಿನಿಧಿಗಳನ್ನು ಅವಮಾನಿಸುವ ಮಾತುಗಳನ್ನು ಬಹಿರಂಗವಾಗಿ ಹೇಳುತ್ತಿರುವುದು ಕಾಂಗ್ರೆಸ್ಸಿಗರ ಕೀಳು ಮಟ್ಟದ ರಾಜಕೀಯವನ್ನು ಎತ್ತಿ ತೋರಿಸುತ್ತದೆ ಎಂದು ಬಿಜೆಪಿ ಮುಂದಾಳು ಅರುಣ್ ಕುಮಾರ್ ಪುತ್ತಿಲ ಹೇಳಿದರು.

  ಅವರು ಕಾಣಿಯೂರು ಗ್ರಾಮದ ನಾಣಿಲದಲ್ಲಿ ನಡೆದ ಬಿಜೆಪಿ ಸಾಧನ ಸಮಾವೇಶದಲ್ಲಿ ಮಾತನಾಡಿದರು. ಕಾರ್ಯಕ್ರಮವೊಂದರಲ್ಲಿ ಸ್ಥಳಿಯ ಕಾಂಗ್ರೆಸ್ಸಿಗರೋರ್ವರು ರಾಷ್ಟ್ರ ರಾಜಕಾರಣದಲ್ಲಿ ಜನಮನ್ನಣೆ ಗಳಿಸಿರುವ ನಾಯಕಿ ಶೋಭಾ ಕರಂದ್ಲಾಜೆ ಹಾಗೂ ಸ್ಥಳಿಯ ಬಿಜೆಪಿ ಜನಪ್ರತಿನಿಧಿಗಳನ್ನು ಕೀಳು ಮಟ್ಟದ ಪದಗಳಿಂದ ನಿಂದಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಈ ಭಾಗದಲ್ಲಿ ಕಳೆದ ಕೆಲವು ಸ್ಥಳಿಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಈ ಹತಾಶೆಯಲ್ಲಿ ಬಿಜೆಪಿಗರನ್ನು ನಿಂದಿಸುತ್ತಿದ್ದಾರೆ. ಮುಂದೆಯೂ ಈ ಭಾಗದಲ್ಲಿ ಬಿಜೆಪಿಯ ವಿಜಯದ ನಾಗಲೋಟ ಮುಂದುವರಿಯಲಿದೆ. ಕಾಂಗ್ರೆಸ್ಸಿಗರ ಕೀಳು ಮಟ್ಟದ ರಾಜಕೀಯವೇ ಬಿಜೆಪಿ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.

   ಬಿಜೆಪಿ ಸುಳ್ಯ ಮಂಡಲ ಸಮಿತಿ ಸದಸ್ಯ ಗಣೇಶ್ ಉದನಡ್ಕ ಮಾತನಾಡಿ, ಈ ಭಾಗದಲ್ಲಿ ಬಿಜೆಪಿ ಆಡಳಿತದಿಂದ ಹಲವಾರು ಅಭಿವೃದ್ದಿ ಕಾರ್ಯಗಳು ನಡೆದಿದೆ. ಆದರೂ ಈ ಭಾಗದ ಕಾಂಗ್ರೆಸ್ಸಿನ ಹಿರಿಯರೊಬ್ಬರು ಅಜ್ಞಾನದಿಂದ ಸಂಸದೆ ಶೊಭಾ ಕರಂದ್ಲಾಜೆ ಊರಿಗೆ ಅನುದಾನ ನೀಡಿಲ್ಲ, ಸ್ಥಳಿಯಾಡಳಿತ ಅಭಿವೃದ್ದಿ ಕಾರ್ಯ ಮಾಡುತ್ತಿಲ್ಲವೆಂದು ಹೇಳುತಿದ್ದಾರೆ. ಬೈತಡ್ಕ-ಗುಜ್ಜರ್ಮೆ ರಸ್ತೆ ಅಭಿವೃದ್ದಿಪಡಿಸಲು ಕಾಂಗ್ರೆಸ್ ಸರಕಾರವಿದ್ದರೂ, ಕಾಂಗ್ರೆಸ್ ನಾಯಕರಿಗೆ ಯಾಕೆ ಆಗಿಲ್ಲ ಎಂದು ಪ್ರಶ್ನಿಸಿದ ಅವರು ಕಾಂಗ್ರೆಸ್ಸಿಗರ ಟೀಕೆಗಳನ್ನು ಕಾರ್ಯಕರ್ತರು ಮನಗಾಣದೆ ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ಚಿಂತನೆ ನಡೆಸಬೇಕು ಎಂದರು.

 ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ರಾಜೇಶ್ವರಿ ಕೆ, ಸದಸ್ಯೆ ಲಲಿತಾ ಈಶ್ವರ, ಕಾಣಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೀತಮ್ಮ ಖಂಡಿಗ, ಸವಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ಬಿ.ಕೆ., ಬಿಜೆಪಿ ಬೆಳಂದೂರು ಶಕ್ತಿ ಕೇಂದ್ರ ಅಧ್ಯಕ್ಷ ಧರ್ಮೇಂದ್ರ ಕಟ್ಟತ್ತಾರು, ಮಂಡಲ ಸಮಿತಿ ಸದಸ್ಯ ದಿನೇಶ್ ಮೆದು, ಬಿಜೆಪಿ ಮುಖಂಡರಾದ ಲಕ್ಷ್ಣಣ ಕರಂದ್ಲಾಜೆ, ಸೀತಾರಾಮ ಖಂಡಿಗ, ಧನಂಜಯ ಕೇನಾಜೆ, ಪರಮೇಶ್ವರ ಗೌಡ ಮಿಯೋಲ್ಪೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪದ್ಮನಾಭ ಅಂಬುಲ ಸ್ವಾಗತಿಸಿ, ತಿಮ್ಮಪ್ಪ ಪೂಜಾರಿ ಎಣ್ಮೂರು ವಂದಿಸಿದರು. ಶಿವರಾಮ ರೈ ಪಿಜಕ್ಕಳ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X