Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊಲೀಸ್ ಬಲೆಗೆ ಬಿದ್ದ ಕುಖ್ಯಾತ ಕಳ್ಳರು :...

ಪೊಲೀಸ್ ಬಲೆಗೆ ಬಿದ್ದ ಕುಖ್ಯಾತ ಕಳ್ಳರು : 21 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೈಕ್ ವಶ

ವಾರ್ತಾಭಾರತಿವಾರ್ತಾಭಾರತಿ30 March 2017 6:47 PM IST
share
ಪೊಲೀಸ್ ಬಲೆಗೆ ಬಿದ್ದ ಕುಖ್ಯಾತ ಕಳ್ಳರು : 21 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೈಕ್ ವಶ

ಹಾಸನ,ಮಾ.30: ಮನೆ ಕಳ್ಳತನ, ಮಹಿಳೆಯರ ಸರಗಳ್ಳತನ ಹಾಗೂ ಬೈಕ್ ಕದಿಯುತ್ತಿದ್ದ 5 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಿಂದ 21,56,412 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ತಿಳಿಸಿದ್ದಾರೆ.

ನಗರದ ಬಡಾವಣೆ ಪೊಲೀಸ್ ಠಾಣೆ ಆವರಣದಲ್ಲಿರುವ ನಗರ ವೃತ್ತ ಠಾಣೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದಲ್ಲಿ ಇತ್ತೀಚಿಗೆ ಒಂಟಿ ಮಹಿಳೆಯರನ್ನು ಗುರುತಿಸಿ ಮೋಟರ್ ಬೈಕಿನಲ್ಲಿ ಹಿಂಬಾಲಿಸಿ ಚಿನ್ನದ ಸರವನ್ನು ಕಳ್ಳತನ ಮಾಡುತ್ತಿದ್ದ ಬಗ್ಗೆ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತಿತ್ತು. ಸಾರ್ವಜನಿಕರಲ್ಲಿ ಭಯದ ವಾತವರಣವನ್ನು ನಿರ್ಮಾಣವಾಗಿದ್ದು, ಈ ಪ್ರಕರಣವನ್ನು ಬೇಧಿಸಲು ಪೊಲೀಸ್ ಅಧಿಕ್ಷಕರು ವಿ.ಎಂ. ಜ್ಯೋತಿ ಮತ್ತು ಉಪವಿಭಾಗದ ಡಿವೈಎಸ್ಪಿ ಕೆ.ಬಿ. ಜಯರಾಂ ನೇತೃತ್ವದಲ್ಲಿ ನಗರ ವೃತ್ತ ಸಿಪಿಐ ವೈ. ಸತ್ಯನಾರಾಯಣ್ ಹಾಗೂ ಬಡಾವಣೆ ಪೊಲೀಸ್ ಪಿಎಸ್‌ಐ ಪ್ರಮೋದ್ ಕುಮಾರ್ ಇವರೊಂದಿಗೆ ಪೋಲಿಸ್ ಸಿಬ್ಬಂದಿಯ ಒಂದು ತಂಡ ರಚಿಸಲಾಗಿತ್ತು.

ನಗರದ ರಿಂಗ್ ರಸ್ತೆ ಬಳಿ ಪೆಟ್ರೋಲ್ ಬಂಕ್ ಹತ್ತಿರ ಗೌರಿಕೊಪ್ಪಲು ಮಾರ್ಗವಾಗಿ ಹೋಗುತ್ತಿದ್ದ ಆರೋಪಿ ವಿಜಯಕುಮಾರ್‌ನನ್ನು ಹಿಡಿದು ವಿಚಾರಣೆ ನಡೆಸಿದಾಗ ಕಳ್ಳತನ ಮಾಡುತ್ತಿದ್ದ ಗುಂಪಿನ ಬಗ್ಗೆ ಮಾಹಿತಿ ಲಭ್ಯವಾಯಿತು.

 ತಾಲೂಕಿನ ರಾಜಘಟ್ಟದ ನಿವಾಸಿ ಕೂಲಿ ಕೆಲಸ ಮಾಡುವ ವಿಜಯಕುಮಾರ್ (31), ತುಮಕೂರು ಜಿಲ್ಲೆಯ ತುರುವೆಕೆರೆ ವಿನೋಭ ನಗರದ ಕೂಲಿ ಕೆಲಸ ಮಾಡುವ ವೆಂಕಟೇಶ್ (26), ಮತ್ತೋರ್ವ ವಿನೋಭ ನಗರದ ಮರಗೆಲಸ ಮಾಡುವ ಸಂತೋಷ್ (30), ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ.ಕೆ. ಹೊಸೂರು ಗ್ರಾಮದ ನಿವಾಸಿ ಮಂಜ(32) ಎಂಬುವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ 14 ಲಕ್ಷ 57 ಸಾವಿರದ 912 ರೂ ಬೆಲೆಯ 530 ಗ್ರಾಂ ತೂಕದ ಚಿನಾಭರಣಗಳು, 3 ಲಕ್ಷದ 48 ಸಾವಿರ 500 ರೂ ಮೌಲ್ಯದ 8.5. ಕೆ.ಜಿ. ಬೆಳ್ಳಿ ಆಭರಣಗಳು, 40 ಸಾವಿರ ರೂ ಮೌಲ್ಯದ ಒಂದು ಟಿವಿ, 80 ಸಾವಿರ ರೂ ಮೌಲ್ಯದ 3 ಲ್ಯಾಪ್‌ಟಾಪ್, 1 ಲಕ್ಷದ 20 ಸಾವಿರ ರೂ ಮೌಲ್ಯದ 3 ಮೋಟರ್ ಬೈಕುಗಳು ಸೇರಿ ಒಟ್ಟು 21,56,412 ಲಕ್ಷ ಮೌಲ್ಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದರು.

ಹಾಸನ ನಗರ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ನಗರದ ಸ್ಲಂ ಬೋರ್ಡ್‌ನ ವಿಶ್ವನಾಥ ನಗರ ನಿವಾಸಿ ಟೈಲರ್ ಕೆಲಸ ಮಾಡುವ ಉದಯಕುಮಾರ್ (28) ಎಂಬುವನನ್ನು ಕೂಡ ಪೊಲೀಸ್ ಬಲೆಗೆ ಸಿಕ್ಕಿ ಬಿದ್ದಿದ್ದಾನೆ.

ಈ ವೇಳೆ ಆರೋಪಿಯಿಂದ 6 ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ವಿವರ ನೀಡಿದರು.

ಇದೆ ವೇಳೆ ನಗರ ವೃತ್ತ ಸಿಪಿಐ ವೈ. ಸತ್ಯನಾರಾಯಣ್ ಹಾಗೂ ಬಡಾವಣೆ ಪೊಲೀಸ್ ಪಿಎಸ್‌ಐ ಪ್ರಮೋದ್ ಕುಮಾರ್, ನಗರ ಠಾಣೆ ಸುರೇಶ್ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X