Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂಡೋಸಲ್ಫಾನ್ ಸಂತ್ರಸ್ಥರ ಬಗ್ಗೆ ಕೇಂದ್ರ...

ಎಂಡೋಸಲ್ಫಾನ್ ಸಂತ್ರಸ್ಥರ ಬಗ್ಗೆ ಕೇಂದ್ರ ಸರಕಾರಕ್ಕೆ ಕಾಳಜಿ ಇಲ್ಲ : ಪಿಣರಾಯಿ ವಿಜಯನ್

ವಾರ್ತಾಭಾರತಿವಾರ್ತಾಭಾರತಿ30 March 2017 8:51 PM IST
share
ಎಂಡೋಸಲ್ಫಾನ್ ಸಂತ್ರಸ್ಥರ ಬಗ್ಗೆ ಕೇಂದ್ರ ಸರಕಾರಕ್ಕೆ ಕಾಳಜಿ ಇಲ್ಲ : ಪಿಣರಾಯಿ ವಿಜಯನ್

ಕಾಸರಗೋಡು,ಮಾ.30 : ಎಂಡೋಸಲ್ಫಾನ್ ಸಂತ್ರಸ್ಥರ ಬಗ್ಗೆ ಕೇಂದ್ರ ಸರಕಾರಕ್ಕೆ ಕಾಳಜಿ ಇಲ್ಲ. ಸಂತ್ರಸ್ಥರ ಪುನರ್ವಸತಿ ಗಾಗಿ 450 ಕೋಟಿ ರೂ ಸಹಾಯಧನ ಒದಗಿಸುವಂತೆ ಮನವಿ ಸಲ್ಲಿಸಿದರೂ  ಇದಕ್ಕೆ  ಸ್ಪಂದಿಸಿಲ್ಲ. ಕೇಂದ್ರ ಸರಕಾರ ಕೂಡಲೇ ಸಹಾಯಧನಕ್ಕೆ ಅಂಗೀಕಾರ ನೀಡಬೇಕು  ಎಂದು   ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್  ಹೇಳಿದರು. 

 ಎಂಡೊಸಲ್ಫಾನ್ ಸಂತ್ರಸ್ಥರಿಗೆ  ರಾಷ್ಟ್ರೀಯ ಮಾನವ ಹಕ್ಕು  ಆಯೋಗದ  ಶಿಫಾರಸಿನಂತೆ  ವಿತರಿಸಲಾಗುವ  ವಿಶೇಷ ಧನಸಹಾಯವನ್ನು  

ಗುರುವಾರ  ಕಾಸರಗೋಡು ಜಿಲ್ಲಾಧಿಕಾರಿ  ಕಚೇರಿ ಪರಿಸರದಲ್ಲಿ  ನಡೆದ  ಸಮಾರಂಭದಲ್ಲಿ  ವಿತರಿಸಿ  ಮಾತನಾಡುತ್ತಿದ್ದರು .

ಎಲ್ಲಾ ಎಂಡೋ ಸಂತ್ರಸ್ಥ  ಕುಟುಂಬಗಳನ್ನು  ಬಿಪಿಎಲ್ ಪಟ್ಟಿಗೆ  ಸೇರ್ಪಡೆಗೊಳಿಸಲಾಗುವುದು. ಶೀಘ್ರ  ಇವರಿಗೆ  ಪಡಿತರ ಚೀಟಿ ವಿತರಿಸಲಾಗುವುದು. ಸರಕಾರ ಎಂಡೋಸಲ್ಫಾನ್ ಸಂತ್ರಸ್ಥ ಪರವಾಗಿದೆ. ಯಾವುದೇ ರೀತಿಯ ರಾಜಿಗೆ ಸರಕಾರ ಸಿದ್ದ ಇಲ್ಲ. ಎಂಡೋಸಲ್ಫಾಅನ್  ಕೀಟನಾಶಕ ಕಂಪೆನಿ ಹಲವು ರೀತಿಯಲ್ಲಿ ಒತ್ತಡ ಹೇರುತ್ತಲೇ  ಇದೆ. ಸರಕಾರ  ಇದಕ್ಕೆ ತಲೆಬಾಗದು ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು .

ಎಂಡೋ  ಸಂತ್ರಸ್ಥ ರಿಗಾಗಿ ಏಪ್ರಿಲ್ ಮೊದಲ ವಾರದಲ್ಲಿ ವೈದ್ಯಕೀಯ ಶಿಬಿರ  ನಡೆಸಲಾಗುವುದು. 3549 ಸಂತ್ರಸ್ತರಿಗಾಗಿ 56. 76 ಕೋಟಿ ರೂ . ಅಂತಿಮವಾಗಿ ಮಂಜೂರುಗೊಳಿಸಲಾಗಿದೆ.

ಸಂತ್ರಸ್ಥ ಯಾದಿಯಲ್ಲಿ ಸೇರ್ಪಡೆಗೊಳ್ಳದ ಸಂತ್ರಸ್ಥ  192 ಮಂದಿಗೆ  ಒಂದು ಲಕ್ಷ ರೂ . ಮುಖ್ಯಮಂತ್ರಿ ಸಂತ್ರಸ್ಥ ಪರಿಹಾರ ನಿಧಿಯಿಂದ ನೀಡಲಾಗಿದೆ .  ಓಣಂ ಹಬ್ಬಕ್ಕೆ  ತಲಾ ಒಂದು ಸಾವಿರ ರೂ . ಪ್ರೋತ್ಸಾಹ ಧನ ನೀಡಲಾಗಿದೆ. ಜೊತೆಗೆ ಮಾಶಾಸನ ಸಂಪೂರ್ಣ ಒದಗಿಸಲಾಗಿದೆ. ಆಶ್ವಾಸ ಕಿರಣ ಯೋಜನಾ ಚಿಕಿತ್ಸಾ  ಸಹಾಯ ಜಾರಿಯಲ್ಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಎಂಡೋ  ಸಂತ್ರಸ್ತರ ಬ್ಯಾoಕ್ ಸಾಲ ಮರುಪಾವತಿ ಕಾಲಾವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. ರಾಜ್ಯ ಸರಕಾರ ಸಂತ್ರಸ್ತರನ್ನು ಗುರುತಿಸಿ ಸಹಾಯಧನ ವಿತರಿಸುತ್ತಿದೆ. ಮೊದಲ ಮತ್ತು ಎರಡನೇ ಹಂತದ ವಿತರಣೆ ಈ ಹಿಂದೆ ನಡೆದಿದೆ. ಕೊನೆಯ ಹಂತದ ವಿತರಣೆ  ಕೂಡಾ ಪೂರ್ಣಗೊಂಡಿದೆ. ಏಪ್ರಿಲ್ 10 ರೊಳಗೆ  ನಷ್ಟ ಪರಿಹಾರ ಒದಗಿಸುವಂತೆ   ಸುಪ್ರೀಂ ಕೋರ್ಟ್  ಜನವರಿ 10 ರಂದು ತೀರ್ಪು ನೀಡಿತ್ತು.

 ಸುಪ್ರೀಂ ಕೋರ್ಟ್ ತೀರ್ಪು ಸಂತ್ರಸ್ಥರಲ್ಲಿ ಬೆಳಕು ಮೂಡಿಸಿದೆ.  ಎಲ್ಲಾ ಸಂತ್ರಸ್ಥರಿಗೂ ಸಹಾಯದಧನ ನೀಡಲು ಸರಕಾರ ಕಟಿಬದ್ಧವಾಗಿದೆ ಎಂದು ಪಿಣರಾಯಿ ವಿಜಯನ್  ಹೇಳಿದರು.

ರಾಜ್ಯ ಕಂದಾಯ ಸಚಿವ ಇ. ಚಂದ್ರಶೇಖರನ್ ಅಧ್ಯಕ್ಷತೆ ವಹಿಸಿದ್ದರು .

ರಾಜ್ಯ ಕೃಷಿ ಸಚಿವ ವಿ . ಎಸ್  ಸುನಿಲ್ ಕುಮಾರ್ , ಸಂಸದ ಪಿ . ಕರುಣಾಕರನ್,  ಶಾಸಕರಾದ ಎನ್. ಎ ನೆಲ್ಲಿಕುನ್ನು , ಕೆ  ಕುಞರಾಮನ್, ಎಂ . ರಾಜಗೋಪಾಲ್ , ಜಿಲ್ಲಾ ಪಂಚಾಯತ್ ಅಧ್ಯಕ್ಷ  ಎ. ಜಿ . ಸಿ ಬಷೀರ್, ನಗರಸಭಾ ಅಧ್ಯಕ್ಷೆ ಬೀಫಾತಿಮ್ಮ ಇಬ್ರಾಹಿಂ ,    ಮಾಜಿ ಸಚಿವ ಚೆರ್ಕಳಂ ಅಬ್ದುಲ್ಲಾ,  ಮಾಜಿ ಶಾಸಕ ಸಿ . ಎಚ್ ಕುಞoಬು , ಕೆ .ಪಿ ಸತೀಷ್ಚಂದ್ರನ್, ಜಿಲ್ಲಾಧಿಕಾರಿ ಕೆ . ಜೀವನ್ ಬಾಬು, ವಿವಿಧ ರಾಜಕೀಯ ಪಕ್ಷದ ಮುಖಂಡರು , ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X