Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಡಿಯಾ ಓಪನ್ : ಕ್ವಾರ್ಟರ್ ಫೈನಲ್‌ನಲ್ಲಿ...

ಇಂಡಿಯಾ ಓಪನ್ : ಕ್ವಾರ್ಟರ್ ಫೈನಲ್‌ನಲ್ಲಿ ಸಿಂಧು-ಸೈನಾ ಸೆಣಸಾಟ

ವಾರ್ತಾಭಾರತಿವಾರ್ತಾಭಾರತಿ30 March 2017 11:39 PM IST
share
ಇಂಡಿಯಾ ಓಪನ್ : ಕ್ವಾರ್ಟರ್ ಫೈನಲ್‌ನಲ್ಲಿ ಸಿಂಧು-ಸೈನಾ ಸೆಣಸಾಟ

ಹೊಸದಿಲ್ಲಿ, ಮಾ.30: ಭಾರತದ ಇಬ್ಬರು ಸ್ಟಾರ್ ಆಟಗಾರ್ತಿಯರಾದ ಪಿ.ವಿ. ಸಿಂಧು ಹಾಗೂ ಸೈನಾ ನೆಹ್ವಾಲ್ ಇಂಡಿಯಾ ಓಪನ್ ಸೂಪರ್ ಸರಣಿಯ ಮಹಿಳೆಯರ ಸಿಂಗಲ್ಸ್ ಕ್ವಾರ್ಟರ್ ಫೈನಲ್‌ನಲ್ಲಿ ಮುಖಾಮುಖಿಯಾಗಲಿದ್ದಾರೆ.

ಇಲ್ಲಿ ಗುರುವಾರ ನಡೆದ 2ನೆ ಸುತ್ತಿನ ಪಂದ್ಯದಲ್ಲಿ ಸೈನಾ ಅವರು ಥಾಯ್ಲೆಂಡ್‌ನ ಪಾರ್ನ್‌ಪಾವೀ ಚೊಚುವಾಂಗ್‌ರನ್ನು 21-14, 21-12 ನೇರ ಗೇಮ್‌ಗಳಿಂದ ಸುಲಭವಾಗಿ ಮಣಿಸಿದರು. ಮತ್ತೊಂದು ಪಂದ್ಯದಲ್ಲಿ ಸಿಂಧು ಅವರು 19ರ ಹರೆಯದ ಜಪಾನ್ ಆಟಗಾರ್ತಿ ಸಯೆನಾ ಕವಾಕಮಿ ಅವರನ್ನು 21-16, 23-21 ಗೇಮ್‌ಗಳ ಅಂತರದಿಂದ ಮಣಿಸಿದರು.

ಇದೀಗ ಎರಡನೆ ಬಾರಿ ಸೈನಾ ಹಾಗೂ ಸಿಂಧು ಅಂತಾರಾಷ್ಟ್ರೀಯ ಮಟ್ಟದ ಟೂರ್ನಿಯಲ್ಲಿ ಪರಸ್ಪರ ಎದುರಾಳಿಗಳಾಗುತ್ತಿದ್ದಾರೆ. 2014ರ ಸೈಯದ್ ಮೋದಿ ಜಿಪಿ ಟೂರ್ನಿಯಲ್ಲಿ ಈ ಇಬ್ಬರು ಮುಖಾಮುಖಿಯಾಗಿದ್ದು, ಆ ಪಂದ್ಯದಲ್ಲಿ ಸೈನಾ ನೇರ ಗೇಮ್‌ಗಳ ಅಂತರದಿಂದ ಜಯ ಸಾಧಿಸಿದ್ದರು.

ರಾಷ್ಟ್ರೀಯ ಚಾಂಪಿಯನ್ ರಿತುಪರ್ಣ ದಾಸ್ ಹಾಲಿ ಒಲಿಂಪಿಕ್ಸ್ ಚಾಂಪಿಯನ್ ಕ್ಯಾರೊಲಿನ್ ಮರಿನ್ ವಿರುದ್ಧ 13-21,11-21 ಅಂತರದಿಂದ ಸೋತರು. ಮರಿನ್ ಮುಂದಿನ ಸುತ್ತಿನಲ್ಲಿ ಜಪಾನ್‌ನ ಮಿನಟಸು ಮಿಟಾನಿ ಅವರನ್ನು ಎದುರಿಸಲಿದ್ದಾರೆ.

ಸಮೀರ್ ಕ್ವಾರ್ಟರ್ ಫೈನಲ್‌ಗೆ, ಶ್ರೀಕಾಂತ್, ಸೌರಬ್‌ಗೆ ಸೋಲು

ಹೊಸದಿಲ್ಲಿ, ಮಾ.30: ಇಂಡಿಯಾ ಓಪನ್ ಸೂಪರ್ ಸರಣಿಯ ಪುರುಷರ ಸಿಂಗಲ್ಸ್‌ನಲ್ಲಿ ಸಮೀರ್ ವರ್ಮ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿದ್ದಾರೆ. ಆದರೆ, ಸಾಯಿ ಪ್ರಣೀತ್, ಕೆ.ಶ್ರೀಕಾಂತ್ ಹಾಗೂ ಸೌರಭ್ ವರ್ಮ ಸೋತು ಟೂರ್ನಿಯಿಂದ ಹೊರ ನಡೆದಿದ್ದಾರೆ.

ಸಮೀರ್ ಹಾಂಕಾಂಗ್‌ನ ಹ್ಯೂ ಯೂನ್‌ರನ್ನು 21-17, 21-15 ಗೇಮ್‌ಗಳ ಅಂತರದಿಂದ ಜಯ ಸಾಧಿಸಿ ಕ್ವಾರ್ಟರ್ ಫೈನಲ್ ತಲುಪಿದರು. ಪುರುಷರ ಸಿಂಗಲ್ಸ್ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಸಾಯಿ ಪ್ರಣೀತ್ ಅವರು ಚೋ ಟಿಯೆನ್ ಚೆನ್ ವಿರುದ್ಧ 14-21, 16-21 ಸೆಟ್‌ಗಳ ಅಂತರದಿಂದ ಸೋತಿದ್ದಾರೆ.

ಮತ್ತೊಂದೆಡೆ, ಮಾಜಿ ಚಾಂಪಿಯನ್ ಕೆ.ಶ್ರೀಕಾಂತ್ ವಿಶ್ವದ ನಂ.4ನೆ ಆಟಗಾರ ವಿಕ್ಟರ್ ಅಕ್ಸೆಲ್‌ಸೆನ್‌ರ ವೇಗ ಹಾಗೂ ಶಕ್ತಿಗೆ ನಿರುತ್ತರವಾದರು. ಕೇವಲ 25 ನಿಮಿಷಗಳಲ್ಲಿ ಕೊನೆಗೊಂಡ ಪಂದ್ಯದಲ್ಲಿ ಶ್ರೀಕಾಂತ್21-7, 21-12 ಗೇಮ್‌ಗಳ ಅಂತರದಿಂದ ಸೋತಿದ್ದಾರೆ.

ಸೌರಬ್ ವರ್ಮ ಕಾ ಲಾಂಗ್ ಆ್ಯಂಗುಸ್ ವಿರುದ್ಧ 19-21, 21-14 ಹಾಗೂ 20-22 ಸೆಟ್‌ಗಳ ಅಂತರದಿಂದ ಸೋತಿದ್ದಾರೆ. ವರ್ಮ ಎರಡನೆ ಸೆಟ್‌ನ್ನು 21-14 ರಿಂದ ಗೆದ್ದುಕೊಂಡು ಪಂದ್ಯವನ್ನು ಸಮಬಲಗೊಳಿಸಿದರು. ಮೂರನೆ ಹಾಗೂ ಅಂತಿಮ ಗೇಮ್‌ನಲ್ಲಿ ವರ್ಮ ಕಠಿಣ ಹೋರಾಟ ನೀಡಿದರೂ ಗೆಲುವು ಒಲಿಯಲಿಲ್ಲ.

ಎರಡನೆ ಸುತ್ತಿನಲ್ಲಿ ನಿರ್ಗಮಿಸಿದ ಜೆರ್ರಿ ಚೋಪ್ರಾ-ಸಿಕ್ಕಿ ರೆಡ್ಡಿ

ಹೊಸದಿಲ್ಲಿ, ಮಾ.30: ಈ ವರ್ಷದ ಇಂಡಿಯಾ ಓಪನ್ ಸೂಪರ್ ಸರಣಿಯಲ್ಲಿ ಡಬಲ್ಸ್ ವಿಭಾಗದಲ್ಲಿ ಭಾರತದ ಸವಾಲು ಅಂತ್ಯವಾಗಿದೆ.

 ಶುೃತಿ-ಅನುಷ್ಕಾ ಪಾರಿಖ್ ಹಾಗೂ ಪ್ರಣವ್ ಜೆರ್ರಿ ಚೋಪ್ರಾ-ಸಿಕ್ಕಿ ರೆಡ್ಡಿ ಕ್ರಮವಾಗಿ ಮಹಿಳೆಯರ ಡಬಲ್ಸ್ ಹಾಗೂ ಮಿಶ್ರ ಡಬಲ್ಸ್ ವಿಭಾಗದಲ್ಲಿ ಸೋತು ಟೂರ್ನಿಯಿಂದ ನಿರ್ಗಮಿಸಿದ್ದಾರೆ.

3,25,000 ಯುಎಸ್ ಡಾಲರ್ ಬಹುಮಾನ ಮೊತ್ತದ ಟೂರ್ನಿಯ ಮೂರನೆ ದಿನವಾದ ಗುರುವಾರ ಭಾರತ ನಿರಾಶಾದಾಯಕ ಪ್ರದರ್ಶನ ನೀಡಿತು.

ಮಹಿಳೆಯರ ಡಬಲ್ಸ್‌ನಲ್ಲಿ ಶುೃತಿ-ಅನುಷ್ಕಾ ಪಾರಿಖ್ ಜಪಾನ್‌ನ ನಾಯೊಕೊ ಫುಕುಮನ್-ಕುರುಮಿ ಯೊನಾವೊ ವಿರುದ್ಧ 5-21, 10-21 ಗೇಮ್‌ಗಳ ಅಂತರದಿಂದ ಶರಣಾದರು.

ಪ್ರಣವ್ ಜೆ. ಚೋಪ್ರಾ-ನಿಕ್ಕಿ ರೆಡ್ಡಿ ಜೋಡಿ ರಶ್ಯದ ಎವ್‌ಜಿನಿ ಡ್ರೆಮಿನ್-ಎವ್‌ಜೆನಿಯ ಡಿಮೊವಾ ವಿರುದ್ಧದ ಪೈಪೋಟಿಯಿಂದ ಕೂಡಿದ್ದ ಪಂದ್ಯದಲ್ಲಿ 18-21, 18-21 ಗೇಮ್‌ಗಳ ಅಂತರದಿಂದ ಸೋತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X