ಗುರುವಾಯನಕೆರೆ: ರಸ್ತೆ ಅಪಘಾತಕ್ಕೆ ಮೇಲಂತಬೆಟ್ಟು ನಿವಾಸಿ ಬಲಿ

ಬೆಳ್ತಂಗಡಿ, ಮಾ.31: ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಗುರುವಾಯನಕೆರೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಇಲ್ಲಿನ ಮೇಲಂತಬೆಟ್ಟು ನಿವಾಸಿ ಚಂದ್ರಹಾಸ ಎಂದು ಗುರುತಿಸಲಾಗಿದೆ.
ಗೇರುಕಟ್ಟೆಯಲ್ಲಿ ಅಂಗಡಿ ಹೊಂದಿರುವ ಚಂದ್ರಹಾಸ ಅವರು ಮನೆಯಿಂದ ಅಂಗಡಿಗೆ ತೆರಳುತ್ತಿದ್ದ ವೇಳೆ ಗುರುವಾಯನಕೆರೆ ಸಮೀಪ ಪಣೆಜಾಲು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ತಲೆಗೆ ಗಂಭೀರ ಗಾಯಗೊಂಡ ಚಂದ್ರಹಾಸ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





