Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಸ್ತೆಗಳಲ್ಲಿ ಸೈಕಲ್ ನಿಷೇಧ ಇಲ್ಲ:...

ರಸ್ತೆಗಳಲ್ಲಿ ಸೈಕಲ್ ನಿಷೇಧ ಇಲ್ಲ: ಗಡ್ಕರಿ

ಮಂಗಳೂರಿನ ರಹೀಮ್ ಟೀಕೆ ಪ್ರಾರಂಭಿಸಿದ್ದರು ಸಹಿ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ31 March 2017 4:45 PM IST
share
ರಸ್ತೆಗಳಲ್ಲಿ ಸೈಕಲ್ ನಿಷೇಧ ಇಲ್ಲ: ಗಡ್ಕರಿ

ಮುಂಬೈ, ಎ.1: ರಸ್ತೆಗಳಲ್ಲಿ ಸೈಕಲ್‌ಗಳ ಸಂಚಾರವನ್ನು ನಿಷೇಧಿಸುವ ಯಾವುದೇ ಕ್ರಮದ ಸಾಧ್ಯತೆಯನ್ನು ತಳ್ಳಿಹಾಕಿರುವ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಬದಲಿಗೆ ವಾಯುಮಾಲಿನ್ಯವನ್ನು ತಡೆಯಲು ಸೈಕ್ಲಿಂಗ್ ಚಟುವಟಿಕೆಯನ್ನು ಉತ್ತೇಜಿಸಲು ಸರಕಾರವು ಬಯಸುತ್ತಿದೆ ಎಂದು ಹೇಳಿದ್ದಾರೆ.

ಗುರುವಾರ ಸಂಜೆ ಇಲ್ಲಿ ಸುದ್ದಿಗಾರರೊಡನೆ ಮಾತನಾಡುತ್ತಿದ್ದ ಸಚಿವರು ಪ್ರಮುಖ ರಸ್ತೆಗಳಲ್ಲಿ ಕಿರಿಕಿರಿಯನ್ನುಂಟು ಮಾಡುತ್ತಿರುವ ಮೋಟರೇತರ ಸಾರಿಗೆಗಳನ್ನು ನಿಷೇಧಿಸಲು ಸಂಸದೀಯ ಸಮಿತಿಯೊಂದು ಚಿಂತನೆ ನಡೆಸುತ್ತಿದೆ ಎಂಬ ವರದಿಗೆ ಪ್ರತಿಕ್ರಿಯಿಸಿ, ''ಅಂತಹುದೇನಿಲ್ಲ. ನಾವು ಸೈಕ್ಲಿಂಗ್‌ನ್ನು ಉತ್ತೇಜಿಸಲು ಬಯಸುತ್ತಿದ್ದೇವೆ ಎಂದು ನಾನು ಸಾರಿಗೆ ಸಚಿವನಾಗಿ ನಿಮಗೆ ತಿಳಿಸಬಲ್ಲೆ'' ಎಂದರು.

ಸೈಕಲ್ ಸವಾರಿಯು ಹೆಚ್ಚುತ್ತಿರುವ ವಾಯುಮಾಲಿನ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಾರಿಗೆಯ ಅತ್ಯುತ್ತಮ ವಿಧಾನವೆಂದು ಬಣ್ಣಿಸಿದ ಗಡ್ಕರಿ, ನಿರ್ಮಾಣಗೊಳ್ಳುತ್ತಿರುವ ದಿಲ್ಲಿ-ಮೀರತ್ ಎಕ್ಸಪ್ರೆಸ್ ಹೆದ್ದಾರಿಯಲ್ಲಿ ಸೈಕಲ್‌ಗಳಿಗಾಗಿಯೇ ಪ್ರತ್ಯೇಕ ಲೇನ್‌ಗಳ ವ್ಯವಸ್ಥೆ, ತನ್ನ ಲೋಕಸಭಾ ಕ್ಷೇತ್ರ ನಾಗ್ಪುರ ಸೇರಿದಂತ ಹಲವಾರು ನಗರಗಳಲ್ಲಿ ವಿಶೇಷ ಸೈಕಲ್ ಮಾರ್ಗಗಳು ಸೇರಿದಂತೆ ಮೂಲಸೌಕರ್ಯ ನಿರ್ಮಾಣಕ್ಕಾಗಿ ಪ್ರಯತ್ನಗಳನ್ನು ವಿವರಿಸಿದರು.

ಮೋಟಾರು ವಾಹನಗಳ(ತಿದ್ದುಪಡಿ) ಮಸೂದೆ-2016 ಅನ್ನು ಪರಿಶೀಲಿಸುತ್ತಿರುವ ಸಂಸದೀಯ ಸ್ಥಾಯಿ ಸಮಿತಿಯು ಇತ್ತೀಚಿಗೆ ಸಂಸತ್ತಿನಲ್ಲಿ ಮಂಡಿಸಿರುವ ವರದಿಯು, ಮಹಾನಗರಗಳಲ್ಲಿ ಪಾದಚಾರಿಗಳು ಮತ್ತು ಮೋಟರೇತರ ವಾಹನಗಳು ಮುಖ್ಯರಸ್ತೆಗಳು ಮತ್ತು ಹೆದ್ದಾರಿಗಳನ್ನು ಬಳಸುವುದನ್ನು ನಿರ್ಬಂಧಿಸುವಂತೆ ಶಿಫಾರಸು ಮಾಡಿದೆ.

ಇದರಿಂದ ಕೆರಳಿರುವ 7,500ಕ್ಕೂ ಅಧಿಕ ಸೈಕಲ್‌ಪ್ರಿಯರು, ಇದು ಜನವಿರೋಧಿ, ಬಡವರ ವಿರೋಧಿಯಾಗಿರುವ ಜೊತೆಗೆ ತಾರತಮ್ಯದಿಂದ ಕೂಡಿರುವ ದರಿಂದ ಸಮಿತಿಯ ಶಿಫಾರಸನ್ನು ತಿರಸ್ಕರಿಸಬೇಕೆಂದು ಆಗ್ರಹಿಸಿ ಆನ್‌ಲೈನ್ ಅರ್ಜಿಗೆ ಸಹಿ ಹಾಕಿದ್ದಾರೆ.

ಮಹಾನಗರಗಳಲ್ಲಿ ಸೈಕಲ್ ಸಂಚಾರವನ್ನು ನಿಷೇಧಿಸುವ ಕುರಿತಂತೆ ಮೋಟಾರು ವಾಹನಗಳ(ತಿದ್ದುಪಡಿ) ಮಸೂದೆ-2016 ಅನ್ನು ಪರಿಶೀಲಿಸುತ್ತಿರುವ ಸಂಸದೀಯ ಸ್ಥಾಯಿ ಸಮಿತಿಯು ಸಂಸತ್‌ನಲ್ಲಿ ಮಂಡಿಸಿರುವ ಶಿಫಾರಸನ್ನು ವಿರೋಧಿಸಿ ಮಂಗಳೂರಿನ ಉದ್ಯಮಿ ಹಾಗೂ ಲೇಖಕ ಅಬ್ದುಲ್ ರಹೀಂ ಟೀಕೆ change.org ವೆಬ್‌ಸೈಟ್ ಮೂಲಕ ಆನ್‌ಲೈನ್ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದರು. ಈ ಅಭಿಯಾನದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, 7,704 ಸೈಕಲ್ ಪ್ರಿಯರು ಆನ್‌ಲೈನ್ ಸಹಿ ಮೂಲಕ ಸಂಸದೀಯ ಸ್ಥಾಯಿ ಸಮಿತಿಯ ಈ ಶಿಫಾರಸನ್ನು ತಿರಸ್ಕರಿಸುವಂತೆ ಆಗ್ರಹಿಸಿದ್ದರು.

ಇದಕ್ಕೆ ಪೂರಕ ಎಂಬಂತೆ ರಸ್ತೆಗಳಲ್ಲಿ ಸೈಕಲ್ ಸಂಚಾರ ನಿರ್ಬಂಧಿಸುವ ಯಾವುದೇ ಕ್ರಮ ಇಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇದೀಗ ಸ್ಪಷ್ಟಪಡಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X