Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಪಿಐನಲ್ಲಿ ದೋಷ: ಬ್ಯಾಂಕ್ ಆಫ್...

ಯುಪಿಐನಲ್ಲಿ ದೋಷ: ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 25 ಕೋ. ರೂ. ವಂಚನೆ ಬೆಳಕಿಗೆ

ವಾರ್ತಾಭಾರತಿವಾರ್ತಾಭಾರತಿ31 March 2017 6:32 PM IST
share
ಯುಪಿಐನಲ್ಲಿ ದೋಷ: ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 25 ಕೋ. ರೂ. ವಂಚನೆ ಬೆಳಕಿಗೆ

ಮುಂಬೈ, ಮಾ.31: ಇತ್ತೀಚಿನ ವರ್ಷಗಳಲ್ಲಿ ದಾಖಲಾದ ಭಾರೀ ಆರ್ಥಿಕ ವಂಚನೆ ಎನ್ನಲಾದ ಪ್ರಕರಣವೊಂದರಲ್ಲಿ ಯುಪಿಐ ವ್ಯವಸ್ಥೆಯಲ್ಲಿ ಅಳವಡಿಸಲಾದ ಸಾಫ್ಟ್‌ವೇರ್‌ನಲ್ಲಿ ಇದ್ದ ‘ಬಗ್’ (ಕಂಪ್ಯೂಟರ್‌ನಿಂದ ಮಾಹಿತಿ ಕದಿಯುವ ತಂತ್ರಾಂಶ) ನಿಂದ ಬ್ಯಾಂಕ್ ಆಫ್ ಮಹಾರಾಷ್ಟ್ರದ(ಬಿಒಎಮ್) ಖಾತೆಯಿಂದ 25 ಕೋಟಿ ರೂ.ನಷ್ಟು ಮೊತ್ತದ ಹಣ ವರ್ಗಾವಣೆಯಾಗಿದೆ.

ಈ ಹಣವು ಇತರ 19 ಬ್ಯಾಂಕ್‌ಗಳ ಖಾತೆಗೆ ವರ್ಗಾವಣೆಯಾಗಿದ್ದು ಇದನ್ನು ವಸೂಲು ಮಾಡಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ)ದ ಆಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಪಿ.ಹೋಟ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸ್ಥಳೀಯ ಮೂಲದ ಇನ್‌ಫ್ರಾಸಾಫ್ಟ್ ಟೆಕ್ ಎಂಬ ಸಂಸ್ಥೆಯಿಂದ ಏಕೀಕೃತ ಪಾವತಿ ಅಂತರ್‌ಸಂಪರ್ಕ ಸಾಧನವೊಂದನ್ನು (ಯುಪಿಐ) ಬ್ಯಾಂಕ್ ಆಫ್ ಮಹಾರಾಷ್ಟ್ರ ಪಡೆದುಕೊಂಡು ತನ್ನ ಕಂಪ್ಯೂಟರ್ ವ್ಯವಸ್ಥೆಗೆ ಅಳವಡಿಸಿತ್ತು. ಈ ವ್ಯವಸ್ಥೆಯಲ್ಲಿದ್ದ ‘ಬಗ್’ನ ಕಾರಣ ಗ್ರಾಹಕರ ಖಾತೆಯಲ್ಲಿ ಸಾಕಷ್ಟು ಹಣ ಇಲ್ಲದಿದ್ದರೂ ಅವರ ಖಾತೆಯಿಂದ ಇತರ ಬ್ಯಾಂಕ್‌ನ ಗ್ರಾಹಕರ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ.

 ಕೋರ್ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ (ಸಿಬಿಎಸ್‌ಸಿ) ಬ್ಯಾಂಕ್‌ನ ವ್ಯವಹಾರವೊಂದನ್ನು ತಿರಸ್ಕರಿಸಿದರೂ,ಬ್ಯಾಂಕಿನಲ್ಲಿರುವ ಯುಪಿಐ ‘ವ್ಯವಹಾರ ಯಶಸ್ವಿ’ ಎಂಬ ಸಂದೇಶವನ್ನು ಎನ್‌ಪಿಸಿಐಗೆ ಕಳುಹಿಸುತ್ತದೆ. ಸಿಬಿಎಸ್‌ಸಿ ‘ಬೇಡ’ ಎಂದು ಸಂದೇಶ ಕಳುಹಿಸಿದರೂ, ಬ್ಯಾಂಕಿನ ಯುಪಿಐ ಮಾಹಿತಿಯ ಆಧಾರದಲ್ಲಿ ನಾವು ವ್ಯವಹಾರವನ್ನು ಮುಗಿಸುತ್ತೇವೆ ಎಂದು ಹೋಟ ತಿಳಿಸಿದ್ದಾರೆ.

ಫೆ.22ರಂದು ಈ ವಂಚನೆಯ ಬಗ್ಗೆ ಮೊದಲು ಮಾಹಿತಿ ದೊರೆಯಿತು ಎಂದೂ ಅವರು ತಿಳಿಸಿದ್ದಾರೆ. ಔರಂಗಾಬಾದ್‌ನ ಸುಮಾರು 50-60 ಮಂದಿ ಈ ‘ಅವ್ಯವಸ್ಥೆ’ಯ ಮಾಹಿತಿ ಪಡೆದು ಸಾಕಷ್ಟು ಮೊತ್ತವನ್ನು ತಮ್ಮ ಖಾತೆಗೆ ಜಮೆ ಮಾಡಿಸಿದ್ದಾರೆ. ಇವರು 19 ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿದವರು. ಈ ಖಾತೆಗಳಿಂದ ಹಣ ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ .

ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಇತರ ಮೂರು ಬ್ಯಾಂಕ್‌ಗಳೂ ಇದೇ ಸಂಸ್ಥೆಯಿಂದ ಕಂಪ್ಯೂಟರ್ ಸಾಫ್ಟ್‌ವೇರ್ ಖರೀದಿಸಿದ್ದು ಆ ಬ್ಯಾಂಕ್‌ಗಳಲ್ಲಿ ಯಾವುದೇ ಅವ್ಯವಸ್ಥೆ ಕಂಡು ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.

ಕಳೆದ ವಾರ ಮಹಾರಾಷ್ಟ್ರದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿ ಕೆಲವರನ್ನು ಬಂಧಿಸಿದ ಬಳಿಕ ಪ್ರಕರಣದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇನ್ನು ಮುಂದೆ ಯುಪಿಐಗೆ ಸೇರ್ಪಡೆಗೊಳ್ಳ ಬಯಸುವ ಯಾವುದೇ ಬ್ಯಾಂಕ್ ತಮ್ಮ ಕಂಪ್ಯೂಟರ್ ಅಪ್ಲಿಕೇಷನ್‌ಗಳನ್ನು ಆಡಿಟರ್‌ಗಳಿಂದ ಪರಿಶೋಧನೆಗೆ ಒಳಪಡಿಸಿದ ಬಳಿಕವೇ ಸೇರ್ಪಡೆಗೊಳಿಸಲಾಗುವುದು. ಇದುವರೆಗೆ 44 ಬ್ಯಾಂಕ್‌ಗಳು ಯುಪಿಐಗೆ ಸೇರ್ಪಡೆಗೊಂಡಿವೆ.

45ನೇ ಬ್ಯಾಂಕ್ ಸೇರ್ಪಡೆಗೆ ಅರ್ಜಿ ಸಲ್ಲಿಸುವಾಗ ಸಾಕಷ್ಟು ಮುಂಜಾಗ್ರತೆ ವಹಿಸಬೇಕು ಎಂಬ ಪಾಠ ಕಲಿತಿದ್ದೇವೆ ಎಂದು ಹೋಟ ತಿಳಿಸಿದ್ದಾರೆ. ಆರ್ಥಿಕ ಕ್ಷೇತ್ರಕ್ಕೆ ಪ್ರತ್ಯೇಕ ಸಿಇಆರ್‌ಟಿ-ಇನ್(ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಂ) ರಚಿಸಲು ಸಿದ್ದತೆ ನಡೆಯುತ್ತಿದೆ ಎಂದವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X