Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂಧರ ಏಷ್ಯನ್ ಚೆಸ್: ಕರ್ನಾಟಕದ ಕಿಶನ್...

ಅಂಧರ ಏಷ್ಯನ್ ಚೆಸ್: ಕರ್ನಾಟಕದ ಕಿಶನ್ ಗಂಗೊಳ್ಳಿ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ31 March 2017 8:32 PM IST
share
ಅಂಧರ ಏಷ್ಯನ್ ಚೆಸ್: ಕರ್ನಾಟಕದ ಕಿಶನ್ ಗಂಗೊಳ್ಳಿ ಚಾಂಪಿಯನ್

ಮಣಿಪಾಲ, ಮಾ.31: ನಿರೀಕ್ಷೆಯಂತೆ ಸತತ ನಾಲ್ಕು ಬಾರಿಯ ಅಂಧರ ರಾಷ್ಟ್ರೀಯ 'ಎ' ಚೆಸ್ ಚಾಂಪಿಯನ್ ಕರ್ನಾಟಕದ ಕಿಶನ್ ಗಂಗೊಳ್ಳಿ ಅವರು ಮಣಿಪಾಲದಲ್ಲಿ ಇಂದು ಮುಕ್ತಾಯಗೊಂಡ ಅಂಧರ ಐಬಿಸಿಎ ಏಷ್ಯನ್ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ ಅಗ್ರಸ್ಥಾನವನ್ನು ಅಲಂಕರಿಸುವ ಮೂಲಕ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡಿದ್ದಾರೆ.

ಶುಕ್ರವಾರ ನಡೆದ ಮಹಾರಾಷ್ಟ್ರದ ಆರ್ಯನ್ ಬಿ.ಜೋಶಿ ವಿರುದ್ಧದ ಎಂಟನೇ ಹಾಗೂ ಅಂತಿಮ ಸುತ್ತಿನ ಪಂದ್ಯವನ್ನು ಸಮಬಲದಲ್ಲಿ ಮುಕ್ತಾಯ ಗೊಳಿಸಿದ ಕಿಶನ್ ಗಂಗೊಳ್ಳಿ, ಗರಿಷ್ಠ ಎಂಟರಲ್ಲಿ 7 ಅಂಕಗಳನ್ನು ಸಂಗ್ರಹಿಸುವ ಮೂಲಕ ಅಗ್ರಸ್ಥಾನ ಪಡೆದು ಚಿನ್ನದ ಪದಕದೊಂದಿಗೆ 50,000ರೂ. ನಗದು ಹಾಗೂ ಮಿರುಗುವ ಟ್ರೋಫಿಯನ್ನು ಕೈಗೆತ್ತಿಕೊಂಡರು.

ನಿನ್ನೆ ತಮ್ಮೆಳಗಿನ ಪಂದ್ಯವನ್ನು ಡ್ರಾಗೊಳಿಸುವ ಮೂಲಕ ಎರಡನೇ ಸ್ಥಾನವನ್ನು ಹಂಚಿಕೊಂಡಿದ್ದ ಗುಜರಾತ್‌ನ ಮಕ್ವಾನ್ ಅಶ್ವಿನ್ ಕೆ. ಹಾಗೂ ಒರಿಸ್ಸಾದ ಸೌಂದರ್ಯ ಕುಮಾರ್ ಪ್ರಧಾನ್ ಅವರು ಇಂದು ಕ್ರಮವಾಗಿ ಕೃಷ್ಣ ಉಡುಪ ಹಾಗೂ ಸ್ವಪ್ನೀಲ್ ಶಾ ವಿರುದ್ಧದ ಅಂತಿಮ ಸುತ್ತಿನ ಪಂದ್ಯದಲ್ಲೂ ಡ್ರಾ ಸಾಧಿಸುವ ಮೂಲಕ ತಲಾ 6 ಅಂಕಗಳನ್ನು ಗಳಿಸಿ ಸಮಬಲದಲ್ಲಿ ಹೋರಾಟ ಮುಕ್ತಾಯಗೊಳಿಸಿದರು.

ಇವರಲ್ಲಿ ಅಶ್ವಿನ್ ಕೆ. ಅವರು ಉತ್ತಮ ಬಿಎಚ್ ಅಂಕದೊಂದಿಗೆ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ, 40,000ರೂ. ನಗದು ಹಾಗೂ ಟ್ರೋಫಿ ಜಯಿಸಿದರೆ, ಸೌಂದರ್ಯ ಕುಮಾರ್ ಅವರು ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕ, 30,000ರೂ. ನಗದು ಹಾಗೂ ಟ್ರೋಫಿಯನ್ನು ಗೆದ್ದುಕೊಂಡರು.
 ಮುಂಬಯಿಯ ಆರ್ಯನ್ ಬಿ.ಜೋಶಿ ಅವರು ಐದು ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದು 20,000ರೂ.ನಗದು ಸ್ವೀಕರಿಸಿದರು. ಅಷ್ಟೇ ಅಂಕ ಗಳಿಸಿದರೂ ಐದನೇ ಸ್ಥಾನ ಪಡೆದ ಗುಜರಾತ್‌ನ ಸ್ವಪ್ನೀಲ್ ಶಾ ಅವರು 10,000ರೂ. ನಗದು ಬಹುಮಾನ ಸ್ವೀಕರಿಸಿದರು. ಶಿವಮೊಗ್ಗದ ಕೃಷ್ಣ ಉಡುಪ ಅವರು ಆರನೇ ಸ್ಥಾನ ಪಡೆದರು.

ಟೂರ್ನಿಯಲ್ಲಿ ಅತ್ಯಧಿಕ ಫಿಡೆ ರೇಟಿಂಗ್ (2010) ಪಡೆದ ಆಟಗಾರನೆನಿಸಿ ಆತ್ಮವಿಶ್ವಾಸದಿಂದಲೇ ಆಟ ಪ್ರಾರಂಭಿಸಿದ್ದ ಬಾಂಗ್ಲಾ ದೇಶದ ಹುಸೈನ್ ಎಜಾಝ್ ಅವರು ಕೊನೆಯ ನಾಲ್ಕು ಸುತ್ತಿನ ಪಂದ್ಯಗಳಲ್ಲಿ ನಿರಾಶಾದಾಯಕ ಫಲಿತಾಂಶ ಪಡೆದು ಐದು ಅಂಕಗಳೊಂದಿಗೆ ಏಳನೇಯವರಾಗಿ ಪಂದ್ಯವನ್ನು ಕೊನೆಗೊಳಿಸಿದರು.

ಅಂತಾರಾಷ್ಟ್ರೀಯ ಬ್ರೈಲಿ ಚೆಸ್ ಅಸೋಸಿಯೇಷನ್ ವತಿಯಿಂದ ಮಣಿಪಾಲ ವಿವಿ ಆಶ್ರಯದಲ್ಲಿ ಮಣಿಪಾಲ ಕೆಎಂಸಿಯ ಡಾ.ಟಿಎಂಎ ಪೈ ಹಾಲ್‌ನಲ್ಲಿ ಕಳೆದ ಹತ್ತುದಿನಗಳ ಕಾಲ ನಡೆದ ಈ ಟೂರ್ನಿ ಇಂದು ಕೊನೆಗೊಂಡಿತು.

ಕೊನೆಯಲ್ಲಿ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಣಿಪಾಲ ವಿವಿಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಅವರು ವಿಜೇತರಿಗೆ ಬಹುಮಾನ ವಿತರಿಸಿದರು. ಎಂಐಟಿಯ ನಿರ್ದೇಶಕ ಡಾ.ಜಿ.ಕೆ.ಪ್ರಭು, ಕೆಎಂಸಿಯ ಡೀನ್ ಡಾ.ಪೂರ್ಣಿಮಾ ಬಾಳಿಗಾ, ಅದಾನಿ ಯುಪಿಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಐಬಿಸಿಎ ಉಪಾಧ್ಯಕ್ಷ ಡಾ.ಚಾರುದತ್ತ ಜಾಧವ್, ಖಜಾಂಚಿ ಸರ್ಗಿಯೊ ಹರಿನಂದನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

 ಯುನೈಟೆಡ್ ಕರ್ನಾಟಕ ಚೆಸ್ ಅಸೋಸಿಯೇಷನ್‌ನ ಉಪಾಧ್ಯಕ್ಷ ಹಾಗೂ ಕೆಎಂಸಿಯ ವೈದ್ಯ ಡಾ.ಕೆ.ರಾಜಗೋಪಾಲ್ ಶೆಣೈ ಅತಿಥಿಗಳನ್ನು ಸ್ವಾಗತಿಸಿದರೆ, ಮಣಿಪಾಲ ವಿವಿ ಕ್ರೀಡಾ ಕೌನ್ಸಿಲ್‌ನ ಕಾರ್ಯದರ್ಶಿ ಡಾ.ವಿನೋದ ಸಿ.ನಾಯಕ್ ವಂದಿಸಿದರು. ಸುಗಂಧಿನಿ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X