Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ: ಅಕ್ರಮ ವಾಸಿಗಳಿಗೆ 90 ದಿನಗಳ...

ಸೌದಿ: ಅಕ್ರಮ ವಾಸಿಗಳಿಗೆ 90 ದಿನಗಳ ಕ್ಷಮಾದಾನ ಅವಧಿ ಆರಂಭ

ಭಾರತೀಯ ರಾಯಭಾರ ಕಚೇರಿಯಲ್ಲಿ ಉದ್ದದ ಸಾಲು

ವಾರ್ತಾಭಾರತಿವಾರ್ತಾಭಾರತಿ31 March 2017 8:48 PM IST
share
ಸೌದಿ: ಅಕ್ರಮ ವಾಸಿಗಳಿಗೆ 90 ದಿನಗಳ ಕ್ಷಮಾದಾನ ಅವಧಿ ಆರಂಭ

ರಿಯಾದ್, ಮಾ. 31: ಸೌದಿ ಅರೇಬಿಯದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಿದೇಶೀಯರು ಯಾವುದೇ ದಂಡ ಪಾವತಿಸದೆ ದೇಶದಿಂದ ಹೊರ ಹೋಗಲು ಅವಕಾಶ ನೀಡುವ 90 ದಿನಗಳ ಕ್ಷಮಾದಾನ ಆರಂಭಗೊಂಡಿದ್ದು, ನೂರಾರು ಭಾರತೀಯ ವಲಸಿಗರು ಬುಧವಾರ ಮತ್ತು ಗುರುವಾರ ಇಲ್ಲಿನ ಭಾರತೀಯ ರಾಯಭಾರ ಕಚೇರಿಯ ಮುಂದೆ ಸಾಲುಗಟ್ಟಿದರು.

ಮೂರು ತಿಂಗಳ ಕ್ಷಮಾದಾನ ಅವಧಿಯಲ್ಲಿ ಭಾರತೀಯ ರಾಯಭಾರ ಕಚೇರಿಯು ಭಾರತೀಯ ರಾಷ್ಟ್ರೀಯರಿಗೆ ಸಹಾಯ ಮಾಡುವುದು ಎಂದು ರಾಯಭಾರ ಕಚೇರಿಯಲ್ಲಿರುವ ಸಮುದಾಯ ಕಲ್ಯಾಣ ಇಲಾಖೆಯ ಪ್ರಥಮ ಕಾರ್ಯದರ್ಶಿ ಅನಿಲ್ ನೌತಿಯಾಲ್ ಗುರುವಾರ ‘ಅರಬ್ ನ್ಯೂಸ್’ ಪತ್ರಿಕೆಗೆ ತಿಳಿಸಿದರು.

‘‘ಬುಧವಾರ 820 ಮಂದಿ ರಾಯಭಾರ ಕಚೇರಿಯಲ್ಲಿ ಸಾಲು ನಿಂತಿದ್ದರು. ಆ ಪೈಕಿ 615 ಮಂದಿ ತುರ್ತು ಪ್ರಮಾಣಪತ್ರ ಅಥವಾ ಔಟ್‌ಪಾಸ್‌ಗೆ ಅರ್ಜಿ ಸಲ್ಲಿಸಿದರು’’ ಎಂದರು. ‘‘ಗುರುವಾರವೂ ಸಾಲು ಉದ್ದವಾಗಿತ್ತು’’ ಎಂದರು.

ಆತಂಕ ರಹಿತ ಸೇವೆ ನೀಡುವುದಕ್ಕಾಗಿ ಭಾರತೀಯ ರಾಯಭಾರಿ ಅಹ್ಮದ್ ಜಾವೇದ್ ಪ್ರಕ್ರಿಯೆಯ ಮೇಲುಸ್ತುವಾರಿ ವಹಿಸಿದರು ಹಾಗೂ ಅರ್ಜಿದಾರರು, ಅಧಿಕಾರಿಗಳು ಮತ್ತು ಅವರ ನಡುವೆ ಸಮನ್ವಯ ಸಾಧಿಸುತ್ತಿರುವ ಸ್ವಯಂಸೇವಕರೊಂದಿಗೆ ಮಾತನಾಡಿದರು ಎಂದು ನೌತಿಯಾಲ್ ತಿಳಿಸಿದರು.

ಸೌದಿ ಅರೇಬಿಯದಲ್ಲಿ ಅವಧಿ ಮೀರಿ ವಾಸಿಸುತ್ತಿರುವ ಎಲ್ಲ ಭಾರತೀಯರು 2017ರ ಈ ಕ್ಷಮಾದಾನದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ರಾಯಭಾರಿ ಮನವಿ ಮಾಡಿದರು. ಈ ಸೌಲಭ್ಯವು ರಿಯಾದ್ ಮತ್ತು ಜಿದ್ದಾಗಳ ಜೊತೆಗೆ ದೇಶಾದ್ಯಂತದ ಇತರ 21 ಸ್ಥಳಗಳಲ್ಲೂ ಲಭ್ಯವಿದೆ ಎಂದರು.

ದಮ್ಮಾಮ್, ಜುಬೈಲ್, ಹೈಲ್, ಬುರೈದ, ವಾಡಿ ಅಲ್ ಡ್ವಾಸರ್, ಅಲ್-ಖಫ್ಜಿ, ಅಲ್ ಜೌಫ್, ಹಫಿರ್ ಅಲ್ ಬತಿನ್, ಅರರ್ ಮತ್ತು ಹೊಫುಫ್‌ಗಳಲ್ಲಿಯೂ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಬಹುದಾಗಿದೆ.

24/7 ನಿಯಂತ್ರಣ ಕೊಠಡಿ

ರಾಯಭಾರ ಕಚೇರಿಯು 24/7 ನಿಯಂತ್ರಣ ಕೊಠಡಿಯೊಂದನ್ನು ಸ್ಥಾಪಿಸಿದೆ. 8002471234 (ಉಚಿತ) ಮತ್ತು +966114884697 ಈ ಫೋನ್ ಸಂಖ್ಯೆಗಳ ಮೂಲಕ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದಾಗಿದೆ.

ಔಟ್‌ಪಾಸ್ ಮತ್ತು ಎಕ್ಸಿಟ್ ವೀಸಾಗಳನ್ನು ಉಚಿತವಾಗಿ ನೀಡಲಾಗುವುದು. ರಾಯಭಾರ ಕಚೇರಿ ಮತ್ತು ಕಾನ್ಸುಲೇಟ್ ಪ್ರಯಾಣ ದಾಖಲೆಗಳನ್ನು ಒದಗಿಸುತ್ತವೆ.

ಸೌದಿ ಅಧಿಕಾರಿಗಳು ಎಕ್ಸಿಟ್ ವೀಸಾದ ಏರ್ಪಾಡು ಮಾಡುತ್ತಾರೆ. ವಿಮಾನ ಟಿಕೆಟನ್ನು ಅರ್ಜಿದಾರನೇ ಖರೀದಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X