Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಎ.1ರಿಂದ 2ರವರೆಗೆ 'ಸ್ಮಾರ್ಟ್...

ಮಣಿಪಾಲ: ಎ.1ರಿಂದ 2ರವರೆಗೆ 'ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌'

ವಾರ್ತಾಭಾರತಿವಾರ್ತಾಭಾರತಿ31 March 2017 9:30 PM IST
share
ಮಣಿಪಾಲ: ಎ.1ರಿಂದ 2ರವರೆಗೆ  ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌

ಮಣಿಪಾಲ, ಮಾ.31: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ)ಯ ನೇತೃತ್ವದಲ್ಲಿ ದೇಶಾದ್ಯಂತ 26 ತಾಂತ್ರಿಕ ವಿದ್ಯಾಸಂಸ್ಥೆಗಳಲ್ಲಿ ಶನಿವಾರ ಮತ್ತು ರವಿವಾರ ಸತತ 36 ಗಂಟೆಗಳ ಕಾಲ ನಡೆಯುವ 'ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌' ಗೆ ಮಣಿಪಾಲದ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಸಹ ಆತಿಥೇಯವಾಗಿದೆ.

ವಿಶ್ವದಲ್ಲಿ ಈವರೆಗೆ ನಡೆದ ಅತ್ಯಂತ ದೊಡ್ಡ ಡಿಜಿಟಲ್ ಉತ್ಪನ್ನ ಅಭಿವೃದ್ಧಿ ಹ್ಯಾಕಥಾನ್ ಇದಾಗಿದ್ದು, 'ಡಿಜಿಟಲ್ ಇಂಡಿಯಾ' ಪರಿಕಲ್ಪನೆಗೆ ಪೂರಕವಾಗಿ ಇದನ್ನು ದೇಶಾದ್ಯಂತ ಆಯೋಜಿಸಲಾಗುತ್ತಿದೆ ಎಂದು ಎಂಐಟಿ ಹ್ಯಾಕಥಾನ್‌ನ ಸಂಯೋಜಕರಾಗಿರುವ ಡಿಪ್ಯುಟಿ ರಿಜಿಸ್ಟ್ರಾರ್ ಪ್ರೊ.ಡಾ.ಪ್ರೀತಮ್ ಕುಮಾರ್ ತಿಳಿಸಿದ್ದಾರೆ.

ದೇಶದ 26 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಏಕಕಾಲಕ್ಕೆ ನಡೆಯುವ ಹ್ಯಾಕಥಾನ್‌ನಲ್ಲಿ 10,000ಕ್ಕೂ ಅಧಿಕ ಯುವ ವಿದ್ಯಾರ್ಥಿಗಳು ನೇರವಾಗಿ ಪಾಲ್ಗೊಳ್ಳಲಿದ್ದು, ಇವರು ಡಿಜಿಟಲ್ ಇಂಡಿಯಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಿದ್ದಾರೆ.

ಇವರು ಇಸ್ರೋ, ರಕ್ಷಣಾ ಸಚಿವಾಲಯ ಸೇರಿದಂತೆ ಕೇಂದ್ರ ಸರಕಾರದ ವಿವಿಧ ಸಚಿವಾಲಯಗಳು ಮುಂದಿಟ್ಟಿರುವ 598 ಸಮಸ್ಯಾತ್ಮಕ ಹೇಳಿಕೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಪ್ರಯತ್ನಿಸಲಿದ್ದಾರೆ ಎಂದವರು ತಿಳಿಸಿದ್ದಾರೆ.

 598 ಸಮಸ್ಯೆಗಳಿಗೆ ದೇಶಾದ್ಯಂತದ 2100 ಕಾಲೇಜುಗಳ 7531 ತಂಡ ಗಳಿಂದ (ತಲಾ ಆರು ಮಂದಿ ವಿದ್ಯಾರ್ಥಿಗಳು ಹಾಗೂ ಇಬ್ಬರು ಮಾರ್ಗದರ್ಶಕರು) ಬಂದ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲಾಗಿತ್ತು. ಇವುಗಳಲ್ಲಿ ಎ.1 ಮತ್ತು 2ರ ಶನಿವಾರ ಮತ್ತು ರವಿವಾರ ನಡೆಯುವ ಗ್ರಾಂಡ್ ಫೈನಲ್‌ಗೆ ಒಟ್ಟು 1266 ತಂಡಗಳನ್ನು ಆಯ್ಕೆ ಮಾಡಲಾಗಿದೆ.

ಮಣಿಪಾಲದಲ್ಲಿ ಈ ಕಾರ್ಯಕ್ರಮವನ್ನು ಎಂಐಟಿಯ ವಜ್ರಮಹೋತ್ಸವ ಸಮಾರಂಭದ ಅಂಗವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಎ.1ರ ಶನಿವಾರ ಬೆಳಗ್ಗೆ 7:30ಕ್ಕೆ ಪ್ರಾರಂಭಗೊಳ್ಳುವ ಈ ಕಾರ್ಯಕ್ರಮ ಎ.2ರ ರಾತ್ರಿ 8:30ರವರೆಗೆ ಸತತವಾಗಿ, ವಿರಾಮವಿಲ್ಲದೇ ಮುಂದುವರಿಯಲಿದೆ. ದೇಶಾದ್ಯಂತ 26 ಕಾಲೇಜುಗಳಲ್ಲಿ ಇಂದು ಏಕಕಾಲದಲ್ಲಿ ನಡೆಯಲಿದೆ.

ಎಂಐಟಿಯಲ್ಲಿ ನಡೆಯುವ ಹ್ಯಾಕಥಾನ್‌ನಲ್ಲಿ 250 ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು, 100ಕ್ಕೂ ಹೆಚ್ಚು ಐಟಿ ವೃತ್ತಿಪರರು, ಯುಜಿಸಿ ಮೂಲಕ ಎಂಐಟಿಗೆ ಬಂದಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸಲಿದ್ದಾರೆ. ವಿದ್ಯಾರ್ಥಿಗಳು ಕಂಡುಹಿಡಿಯುವ ಪರಿಹಾರಗಳನ್ನು ಯುಜಿಸಿ ಅಧಿಕಾರಿಗಳು ಹಾಗೂ ಉಡುಪಿಯ ರೋಬೊಸಾಪ್ಟ್ ಟೆಕ್ನಾಲಜಿ ಲಿ.ನ ಐಟಿ ವೃತ್ತಿಪರರನ್ನೊಳಗೊಂಡ ತೀರ್ಪುಗಾರರ ತಂಡ ಮೌಲ್ಯಮಾಪನ ನಡೆಸಲಿದೆ.

ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಬೆಂಗಳೂರು ಯುಜಿಸಿಯ ಜಂಟಿ ಕಾರ್ಯದರ್ಶಿ ಡಾ.ಎನ್.ಗೋಪಕುಮಾರ್ ಪಾಲ್ಗೊಳ್ಳಲಿದ್ದಾರೆ. ಮಣಿಪಾಲ ವಿವಿಯ ರಿಜಿಸ್ಟ್ರಾರ್ ಡಾ.ನಾರಾಯಣ ಸಭಾಹಿತ್ ಅಧ್ಯಕ್ಷತೆ ವಹಿಸಲಿದ್ದಾರೆ. ಎಂಐಟಿಯ ನಿರ್ದೇಶಕ ಡಾ.ಜಿ.ಕೆ.ಪ್ರಭು ಉಪಸ್ಥಿತರಿರುವರು ಎಂದು ಎಂಐಟಿಯ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X