Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಂತ ಹಣದಲ್ಲಿ ಕೆರೆ ಅಭಿವೃದ್ಧಿ..! ;...

ಸ್ವಂತ ಹಣದಲ್ಲಿ ಕೆರೆ ಅಭಿವೃದ್ಧಿ..! ; ಇದು ಉತ್ತರ ಕರ್ನಾಟಕದ ಹಳ್ಳಿಯ ಕಥೆ...!

ಫಾರೂಕ್ ಮಕಾನದಾರಫಾರೂಕ್ ಮಕಾನದಾರ31 March 2017 11:15 PM IST
share
ಸ್ವಂತ ಹಣದಲ್ಲಿ ಕೆರೆ ಅಭಿವೃದ್ಧಿ..! ; ಇದು ಉತ್ತರ ಕರ್ನಾಟಕದ ಹಳ್ಳಿಯ ಕಥೆ...!

ಇದು ಈ ಜನರ ಜೀವಜಲದ ಜೀವಗಂಗೆಯ ಸ್ಥಳ. ಆದೆರೆ ಸತತ ಬರದಿಂದ ಆ ಕೆರೆ ನೀರಿಗಾಗಿ ಬಾಯಿ ತೆರೆದಿತ್ತು. ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಸ್ವತ: ಈ ಗ್ರಾಮದ ಜನರೆ ಕೆರೆ ಹೂಳು ತೆಗೆಯಲು ಮುಂದಾಗಿದ್ದಾರೆ. ಗ್ರಾಮ ಪಂಚಾಯತಿಯಲ್ಲಿ ಇದಕ್ಕಾಗಿ ಲಕ್ಷಾಂತರ ಹಣವಿದ್ದರು, ಆ ಹಣ ಗ್ರಾಮದ ಅಭಿವೃದ್ಧಿಗೆ ಬಳಸಿಕೊಂಡು ತಮ್ಮ ಸ್ವಂತ ಹಣದಲ್ಲಿ ಕೆರೆ ಹೂಳು ತೆಗಿತಿರೋದು ಈ ಗ್ರಾಮಸ್ಥರ ಕಾರ್ಯ ಶ್ಲಾಘನೀಯ.

ಹೌದು ಇದು ಗದಗ ಜಿಲ್ಲೆ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಕಂಡು ಬರುವ ಗ್ರಾಮಸ್ಥರ ಕಳಕಳಿ. ಜಕ್ಕಲಿ ಗ್ರಾಮದ ಅಬ್ಬಿಗೇರಿ ರಸ್ತೆಯಲ್ಲಿರುವ 4 ಎಕರೆ ಪ್ರದೇಶದ ಕೆರೆ ಹೂಳು ತೆಗೆಯುವ ಮೂಲಕ ಅಂತರ್ಜಲ ಹೆಚ್ಚಳಕ್ಕೆ ಖುದ್ದು ಗ್ರಾಮಸ್ಥರೆ ಪಣತೊಟ್ಟು ನಿಂತಿದ್ದಾರೆ. ಎಂಥಹ ಬೇಸಿಗೆಯಲ್ಲೂ ಸಹ ಈ ಕೆರೆ ಬತ್ತಿದ ಘಟನೆ ಈ ತನಕ ನಡೆದಿರಲಿಲ್ಲ. ಗ್ರಾಮದ ಸುಮಾರು 10 ಸಾವಿರ ಜನರಿಗೆ ಈ ಕೆರೆ ಜೀವಾಳವಾಗಿತ್ತು. ಆದರೆ ಸತತ ನಾಲ್ಕು ವರ್ಷಗಳ ಬರದ ಛಾಯೆಯಿಂದ ಈ ವರ್ಷ ಕೆರೆ ಸಂಪೂರ್ಣವಾಗಿ ಬತ್ತಿ ಹೋಗಿದೆ. ಅಷ್ಟೆ ಅಲ್ಲ, ಕೆರೆ ಸಂಪೂರ್ಣವಾಗಿ ಹೂಳಿನಿಂದ ತುಂಬಿಕೊಂಡಿದೆ. 

ಇದನ್ನರಿತ ಜಕ್ಕಲಿ ಗ್ರಾಮ ಪಂಚಾಯತಿಯ ಆಡಳಿತ ಮಂಡಳಿಯವರು ಗ್ರಾಮದ ಕೆರೆ ಅಭಿವೃದ್ಧಿಗಾಗಿ 10 ಲಕ್ಷ ಹಣ ತೆಗೆದಿಡಲಾಗಿತ್ತು. ಆದರೆ ಗ್ರಾಮಸ್ಥರೆಲ್ಲರೂ ಒಮ್ಮತದ ನಿರ್ಣಯ ತೆಗೆದುಕೊಂಡು, ಕೆರೆಗೆ ಅಂತಲೇ  ಕಾಯ್ದಿಟ್ಟ 10 ಲಕ್ಷ ಹಣ ಕೆರೆ ಹೂಳೆತ್ತಲು ಬಲಕಸಿಕೊಳ್ಳುವುದಕ್ಕೆ ವಿರೋಧ ವ್ಯಕ್ತ ಪಡಿಸಿ, ಆ ಹಣ ಗ್ರಾಮದ ಅಭಿವೃದ್ಧಿಗೆ ಬಳಸಿಕೊಳ್ಳಲು ನಿರ್ಣಯಿಸಿದ್ದರು.

ಸ್ವತ: ತಾವೇ ಹಣ ಖರ್ಚು ಮಾಡಿ ಇದೀಗ ಕೆರೆ ಹೂಳು ತೆಗಿತಿರೋದು ಮಾತ್ರ ಸುತ್ತಲಿನ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೆರೆ ಹೂಳೆತ್ತಲು ಸರ್ಕಾರ ಅನುದಾನ ನೀಡಿದರು ಆ ಅನುದಾನ ಬೇರೆ ಅಭಿವೃದ್ಧಿ ಕಾರ್ಯಕ್ಕೆ ಬಳಸಿಕೊಳ್ಳಲು ತೀರ್ಮಾನಿಸಿದ ಈ ಗ್ರಾಮದ ಜನರ  ಗುಣ ನಿಜಕ್ಕೂ ಮೆಚ್ಚುವಂತಹದ್ದು

ಕೆರೆಯಲ್ಲಿ ಘರ್ಜಿಸುತ್ತಿವೆ ಜೆಸಿಬಿ, ಟ್ರ್ಯಾಕ್ಟರ್..!

ತಮ್ಮ ಸ್ವಂತ ಶ್ರಮದ ಲಕ್ಷ ಲಕ್ಷ ಹಣ ಖರ್ಚು ಮಾಡಿ ಗ್ರಾಮಸ್ಥರಿಂದಲೇ ಕೆರೆ ಅಭಿವೃದ್ಧಿ ಕಾರ್ಯ ಮಾಡುತ್ತಿರುವ ಜಕ್ಕಲಿ ಗ್ರಾಮಸ್ಥರ ಮುತವರ್ಜಿಗೆ ಎರಡು ಜೆಸಿಬಿಗಳು ಕೆರೆಯಲ್ಲಿ ಸತತ ಕಾರ್ಯ ನಿರ್ವಹಿಸುತ್ತಿವೆ. 30ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಹಾಗೂ  ನಿತ್ಯ ನೂರಾರು ಟಿಪ್ಪರ್ ಗಳು ಕೆರೆಯ ಹೂಳು ತೆಗೆಯುವ ಕಾರ್ಯದಲ್ಲಿ ತೊಡಗಿಕೊಂಡಿವೆ. ಹೂಳು ತೆಗೆದ ಒಂದು ಟ್ರಿಪ್ ಮಣ್ಣಿಗೆ ಜೆಸಿಬಿಗೆ 100  ರೂಪಾಯಿ ಹಣವನ್ನು ರೈತರು ನೀಡಿ, ಮತ್ತೆ ಅದೇ ಮಣ್ಣನ್ನು ತಮ್ಮ ಹೊಲಕ್ಕೆ ಹಾಕಿಸಿಕೊಳ್ಳುತ್ತಿದ್ದಾರೆ. 

share
ಫಾರೂಕ್ ಮಕಾನದಾರ
ಫಾರೂಕ್ ಮಕಾನದಾರ
Next Story
X