Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ವಾಸ್ತವ ಮತ್ತು ಕಲ್ಪನೆಗಳ ನಡುವೆ- ಡಾನ್...

ವಾಸ್ತವ ಮತ್ತು ಕಲ್ಪನೆಗಳ ನಡುವೆ- ಡಾನ್ ಕ್ವಿಕ್ಸಾಟನ ಸಾಹಸಗಳು

ಈ ಹೊತ್ತಿನ ಹೊತ್ತಿಗೆ

ಕಾರುಣ್ಯಾಕಾರುಣ್ಯಾ31 March 2017 11:59 PM IST
share
ವಾಸ್ತವ ಮತ್ತು ಕಲ್ಪನೆಗಳ ನಡುವೆ- ಡಾನ್ ಕ್ವಿಕ್ಸಾಟನ ಸಾಹಸಗಳು

 ‘ಡಾನ್ ಕ್ವಿಕ್ಸಾಟ್’ ಎನ್ನುವುದು ಮಿಗುವೆಲ್ ದಿ ಸರ್ವಾಂಟಿಸ್ ಸಾವೆದ್ರ ಎಂಬ ಸ್ಪಾನಿಶ್ ಲೇಖಕ ಬರೆದ ಹಾಸ್ಯ ಪ್ರಧಾನ ಕಾದಂಬರಿ. ಕೃತಿಯ ಕಥಾನಾಯಕನ ಹೆಸರೇ ಡಾನ್ ಕ್ವಿಕ್ಸಾಟ್. ರೋಚಕ ಕತೆಗಳನ್ನು ಓದಿ ಮಾನಸಿಕವಾಗಿ ಅದರ ಜೊತೆಗೆ ಬದುಕುತ್ತಾ, ತಾನು ಅದರಂತೆ ಆಗಲು ಹೋಗಿ, ಸಮಸ್ಯೆ, ತಮಾಷೆಯೊಳಗೆ ಸಿಲುಕಿಕೊಳ್ಳುವ ಕತೆ ಇದು. ಡಾನ್ ಕ್ವಿಕ್ಸಾಟ್ ಎನ್ನುವುದು ಒಂದು ಮಾನಸಿಕ ಅವಸ್ಥೆಯೂ ಹೌದು. ಅವನು ಹುಚ್ಚನಲ್ಲ. ಹಾಗೆಯೇ ದುಷ್ಟನೂ ಅಲ್ಲ. ಮುಗ್ಧ ಎಂದು ಕರೆಯಬಹುದು. ಅಂತೆಯೇ ವಾಸ್ತವದಿಂದ ಪಲಾಯನಗೊಂಡು, ಭ್ರಮೆಗಳ ಜೊತೆಗೆ ಬದುಕುವ ಅವನ ಸ್ಥಿತಿ ಕೆಲವೊಮ್ಮೆ ಅದು ಬೇರೆ ಬೇರೆ ಆಯಾಮಗಳಲ್ಲಿ ನಾವು ಅರ್ಥ ಮಾಡಿಕೊಳ್ಳಲು ಸಾಧ್ಯವಿದೆ ಅಥವಾ ಒಂದು ತಮಾಷೆಯ ಕತೆಯಾಗಿ ಇದನ್ನು ಸರಾಗವಾಗಿಯೂ ಓದಬಹುದು. ಎನ್. ಎಲ್. ಕ್ಯಾರಿಂಗ್ಟರ್ ಈ ಸ್ಪಾನಿಶ್ ಸಾಹಸವನ್ನು ಇಂಗ್ಲಿಷ್‌ಗೆ ಅನುವಾದ ಮಾಡಿದ್ದು ಅದನ್ನು ಖ್ಯಾತ ಕವಿ, ಲೇಖಕ ಕೆ.ವಿ. ತಿರುಮಲೇಶ್ ಅವರು ಕನ್ನಡಕ್ಕಿಳಿಸಿದ್ದಾರೆ. ‘ಡಾನ್ ಕ್ವಿಕ್ಸಾಟನ ಸಾಹಸಗಳು’ ಎಂಬ ಹೆಸರಿನಲ್ಲಿ ಇದು ಪುಸ್ತಕ ರೂಪ ಪಡೆದಿದೆ. ಇದು ಮಕ್ಕಳ ಪಾಲಿಗೂ ಯುವಕರ ಪಾಲಿಗೂ ಖುಷಿ ಕೊಡುವ ಸಾಹಸಗಾಥೆ. ಒಂದು ರೀತಿಯಲ್ಲಿ ರೋಚಕ ಬದುಕಿನ ಅಣಕ. ಮಧ್ಯಕಾಲೀನ ವೀರ ಸರದಾರರ ಸಾಹಸ ಕಥೆಗಳನ್ನು ಓದಿ ಅದರಿಂದ ಹೊರಬರಲಾಗದೆ ಅವರಂತೆ ಬದುಕುವುದಕ್ಕೆ ಹಟ ತೊಟ್ಟ ಕ್ವಿಕ್ಸಾಟ್, ನಮ್ಮ ನಡುವಿನ ನೂರಾರು ಮನಸ್ಸುಗಳನ್ನು ಪ್ರತಿನಿಧಿಸುವ ವೀರ. ಲೇಖಕರೇ ಹೇಳುವಂತೆ, ಮಧ್ಯಕಾಲೀನ ವಿದೇಶಿ ಕತೆಯಾದ ಕಾರಣ ಕೆಲವು ಸಂಗತಿಗಳು ಅಪರಿಚಿತ ಎನಿಸಬಹುದು. ಅವುಗಳನ್ನು ವಿವರಿಸಿ ಹೇಳುವುದಕ್ಕಿಂತ ಸಂದರ್ಭಾನುಸಾರ ಅರ್ಥಮಾಡಿಕೊಳ್ಳುವುದೇ ಕಥೆಯ ಒಳಗೆ ಪ್ರವೇಶಿಸಲು ಹೆಚ್ಚು ಅನುಕೂಲವಾಗುತ್ತದೆ. ಕೆ. ವಿ. ತಿರುಮಲೇಶ್ ಅವರು ಆ ಕತೆಯ ಕಾಲವನ್ನು ಸಾಧ್ಯವಾದಷ್ಟು ಮಟ್ಟಿಗೆ ತಮ್ಮ ಕನ್ನಡ ಭಾಷೆಯೊಳಗೆ ಹಿಡಿದಿಡಲು ಮತ್ತು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ಓದುಗರ ತಲೆಮಾರುಗಳು ಬದಲಾದಂತೆ ಲೋಕ ಸಾಹಿತ್ಯದ ವಿಶಿಷ್ಟ ಕೃತಿಗಳನ್ನು ಬೇರೆ ಬೇರೆ ಬಗೆಯಲ್ಲಿ ಮರು ನಿರೂಪಿಸುವ ಹೊಣೆಗಾರಿಕೆಯಿಂದ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಈ ಕೃತಿಯನ್ನು ಮಗದೊಮ್ಮೆ ಕವಿಯೊಬ್ಬರ ಕೈಯಲ್ಲಿ ಬರೆಸಿದೆ. 110 ಪುಟಗಳನ್ನು ಹೊಂದಿರುವ ಈ ಕೃತಿಯ ಮುಖಬೆಲೆ 60 ರೂಪಾಯಿ. ಆಸಕ್ತರು 23183311 ಅಥವಾ 23183312 ಬೆಂಗಳೂರು ದೂರವಾಣಿಯನ್ನು ಸಂಪರ್ಕಿಸಬಹುದು.

share
ಕಾರುಣ್ಯಾ
ಕಾರುಣ್ಯಾ
Next Story
X