Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫೇಸ್‌ಬುಕ್‌ನಲ್ಲಿ ಸುಳ್ಳು ಆರೋಪ :...

ಫೇಸ್‌ಬುಕ್‌ನಲ್ಲಿ ಸುಳ್ಳು ಆರೋಪ : ಮಹಿಳೆಗೆ 3.2 ಕೋಟಿ ರೂ. ದಂಡ

ವಾರ್ತಾಭಾರತಿವಾರ್ತಾಭಾರತಿ1 April 2017 7:35 PM IST
share
ಫೇಸ್‌ಬುಕ್‌ನಲ್ಲಿ ಸುಳ್ಳು ಆರೋಪ : ಮಹಿಳೆಗೆ 3.2 ಕೋಟಿ ರೂ. ದಂಡ

ನ್ಯೂಯಾರ್ಕ್, ಎ. 1: ತನ್ನ ಮಾಜಿ ಗೆಳತಿಯೊಬ್ಬಳು ಆಕೆಯ ಮಗನನ್ನು ಕೊಂದಿದ್ದಾಳೆ ಎಂಬ ಸುಳ್ಳು ಮಾಹಿತಿಯನ್ನು ಫೇಸ್‌ಬುಕ್‌ನಲ್ಲಿ ಹಾಕಿರುವುದಕ್ಕಾಗಿ 5 ಲಕ್ಷ ಡಾಲರ್ (ಸುಮಾರು 3.2 ಕೋಟಿ ರೂಪಾಯಿ) ಪರಿಹಾರ ನೀಡುವಂತೆ ನಾರ್ತ್ ಕ್ಯಾರಲೈನ ರಾಜ್ಯದ ನ್ಯಾಯಾಧೀಶರೊಬ್ಬರು ಮಹಿಳೆಯೊಬ್ಬರಿಗೆ ಆದೇಶಿಸಿದ್ದಾರೆ.

ಆ್ಯಶ್‌ವಿಲ್‌ನ ಜ್ಯಾಕಲಿನ್ ಹ್ಯಾಮಂಡ್ ಎಂಬ ಮಹಿಳೆ ತನ್ನ ಮಾಜಿ ಗೆಳತಿ ಡ್ಯಾವೈನ್ ಡಯಲ್ ಎಂಬವರನ್ನು ಕುರಿತು 2015ರಲ್ಲಿ ‘‘ನಾನು ಮದ್ಯದ ಅಮಲಿನಲ್ಲಿ ನನ್ನದೇ ಮಗುವನ್ನು ಕೊಂದಿಲ್ಲ’’ ಎಂಬುದಾಗಿ ಫೇಸ್‌ಬುಕ್‌ನಲ್ಲಿ ಬರೆದಿದ್ದರು.

ಆದರೆ, ತನ್ನ ಮಗನ ಸಾವಿನಲ್ಲಿ ತನ್ನ ಪಾತ್ರವೇನೂ ಇಲ್ಲ ಎಂದು ಹೇಳಿರುವ ಡಯಲ್, ಮಾನನಷ್ಟ ಮತ್ತು ಉದ್ದೇಶಪೂರ್ವಕವಾಗಿ ಮಾನಸಿಕ ಕ್ಲೇಶ ಉಂಟು ಮಾಡಿರುವುದಕ್ಕಾಗಿ ಹ್ಯಾಮಂಡ್ ವಿರುದ್ಧ ಮೊಕದ್ದಮೆ ಹೂಡಿದ್ದರು.

ರೇಡಿಯೊ ನಿಲಯವೊಂದರಲ್ಲಿ ಜೊತೆಯಾಗಿ ಕೆಲಸ ಮಾಡುವ ಯತ್ನ ಕೈಗೂಡದ ಹಿನ್ನೆಲೆಯಲ್ಲಿ ಹ್ಯಾಮಂಡ್ ಮತ್ತು ಡಯಲ್ ನಡುವಿನ ಸ್ನೇಹ ಹಳಸಿತ್ತು.

‘‘ಸಾಮಾಜಿಕ ಮಾಧ್ಯಮಗಳಲ್ಲಿ ಸೋಸುವಿಕೆ ಇಲ್ಲದಿರುವುದರಿಂದ ನೀವು ಸುರಕ್ಷಿತ ಸ್ಥಾನದಲ್ಲಿ ನಿಂತು ನಿಮಗೆ ತೋಚಿದ್ದನ್ನೆಲ್ಲ ಹೇಳುವ ಹಾಗಿಲ್ಲ. ಹಿಂದೆಯೂ ಅವರು ಹಲವಾರು ಸುಳ್ಳು ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಆದರೆ, ಈ ಹೇಳಿಕೆಯಿಂದ ನನಗೆ ತುಂಬಾ ನೋವಾಗಿದೆ’’ ಎಂದು ಡಯಲ್ ನ್ಯಾಯಾಲಯದಲ್ಲಿ ಹೇಳಿದರು.

ಕಳೆದ ತಿಂಗಳು ತೀರ್ಪು ನೀಡಿದ ನ್ಯಾಯಾಲಯ, ವಾಸ್ತವಿಕ ಹಾನಿಗಾಗಿ 2.5 ಲಕ್ಷ ಡಾಲರ್ ಮತ್ತು ದಂಡ ರೂಪದಲ್ಲಿ 2.5 ಲಕ್ಷ ಡಾಲರ್, ಒಟ್ಟು 5 ಲಕ್ಷ ಡಾಲರ್ ಪರಿಹಾರ ನೀಡುವಂತೆ ಹ್ಯಾಮಂಡ್‌ಗೆ ಆದೇಶಿಸಿದೆ.

‘‘ನಿಮಗೆ ತೋಚಿದ್ದನ್ನು ಏನು ಬೇಕಾದರು ಬರೆಯಬಹುದು ಎಂಬ ಕಾರಣಕ್ಕಾಗಿ ನೀವು ಹಾಗೆ ಮಾಡಬಾರದು. ಇತರರ ನಡತೆ ಮತ್ತು ಪ್ರತಿಷ್ಠೆಗೆ ಹಾನಿ ಮಾಡುವ ಸುಳ್ಳು ಹೇಳಿಕೆಯೊಂದು ಯಾವಾಗ ಬೇಕಾದರೂ ನಿಮ್ಮನ್ನು ತೊಂದರೆಯಲ್ಲಿ ಸಿಕ್ಕಿಸಬಹುದು’’ ಎಂದು ನಾರ್ತ್ ಕ್ಯಾರಲೈನದ ವಕೀಲೆ ಮಿಸ್ ಓವನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X