Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಾಂಧಿಗಿರಿಯ ಮೂಲಕ ತನ್ನ ಪ್ರೇಮವನ್ನು...

ಗಾಂಧಿಗಿರಿಯ ಮೂಲಕ ತನ್ನ ಪ್ರೇಮವನ್ನು ಮರಳಿ ಗೆದ್ದ ಬಿಹಾರದ ಯುವತಿ

ವಾರ್ತಾಭಾರತಿವಾರ್ತಾಭಾರತಿ1 April 2017 8:30 PM IST
share
ಗಾಂಧಿಗಿರಿಯ ಮೂಲಕ ತನ್ನ ಪ್ರೇಮವನ್ನು ಮರಳಿ ಗೆದ್ದ ಬಿಹಾರದ ಯುವತಿ

ರೋಹ್ತಾಸ್,ಎ.1: ತನ್ನ ಪ್ರೇಮಿಯಿಂದ ಪರಿತ್ಯಕ್ತಳಾಗಿ, ವರದಕ್ಷಿಣೆಯ ಗರ ಬಡಿದಿದ್ದ ಆತನ ಕುಟುಂಬದಿಂದಲೂ ತಿರಸ್ಕೃತಳಾಗಿದ್ದ ರೋಹ್ತಾಸ್ ಜಿಲ್ಲೆಯ ಶಿವಸಾಗರ್ ಬ್ಲಾಕ್‌ನ ಸಿಕ್ರೌರ್ ಗ್ರಾಮದ ದಲಿತ ಯುವತಿ ನೀತು ಪಾಸ್ವಾನ್(18) ತನ್ನ ಪ್ರಿಯಕರನ ಹೃದಯ ಪರಿವರ್ತನೆಗಾಗಿ ಗಾಂಧಿಗಿರಿಯ ಮೊರೆ ಹೋಗಿ,ಅದರಲ್ಲಿ ಯಶಸ್ವಿಯೂ ಆಗಿದ್ದಾಳೆ.

  10ನೇ ತರಗತಿಯ ವಿದ್ಯಾರ್ಥಿನಿ ನೀತು ಮತ್ತು ನೆರೆಯ ಕೊಂಕಿ ಗ್ರಾಮದ ನಿವಾಸಿ ಧನಂಜಯ ಪಾಸ್ವಾನ್ ಮಧ್ಯೆ ಕಳೆದೊಂದು ವರ್ಷದಿಂದಲೂ ಪ್ರೇಮ ಸಂಬಂಧವಿತ್ತು ಮತ್ತು ಇದು ಎರಡೂ ಕುಟುಂಬಗಳಿಗೆ ತಿಳಿದಿತ್ತು. ಕಳೆದ ಮದುವೆ ಹಂಗಾಮಿನಲ್ಲಿ ಮದುವೆಯ ದಿನಾಂಕವನ್ನು ಅಂತಿಮಗೊಳಿಸಲು ನೀತುಳ ತಂದೆ ಧನಂಜಯನ ತಂದೆಯನ್ನು ಭೇಟಿಯಾಗಿದ್ದು, ಆತ ಐದು ಲಕ್ಷ ರೂ ವರದಕ್ಷಿಣೆಗೆ ಬೇಡಿಕೆ ಮಂಡಿಸಿದ್ದ. ತಂದೆಯ ತಾಳಕ್ಕೆ ಕುಣಿಯುತ್ತಿದ್ದ ಧನಂಜಯ ನೀತುಳನ್ನು ಮದುವೆಯಾಗಲು ನಿರಾಕರಿಸಿದ್ದ. ಆತನ ಮನವೊಲಿಸಲು ಎಲ್ಲ ಪ್ರಯತ್ನಗಳು ವಿಫಲಗೊಂಡ ಬಳಿಕ ನೀತುಳ ತಂದೆ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದರು. ಆದರೆ ಇದನ್ನು ನೀತು ಬಲವಾಗಿ ವಿರೋಧಿಸಿದ್ದಳು.

ಮಂಗಳವಾರ ಬೆಳಿಗ್ಗೆ ಮದುಮಗಳ ವೇಷಭೂಷಣ ಧರಿಸಿದ್ದ ನೀತು ಗ್ರ್ರಾಮಸ್ಥರೊಂದಿಗೆ ಕೊಂಕಿ ಗ್ರಾಮಕ್ಕೆ ತೆರಳಿ ಪ್ರಿಯಕರನ ಮನೆಯ ಮುಂದೆ ಧರಣಿ ಕುಳಿತಿದ್ದಳು. ತೊದಂರೆಯನ್ನು ಗ್ರಹಿಸಿದ ಧನಂಜಯನ ಕುಟುಂಬದವರು ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದರು.

ಆದರೆ ಕೊಂಕಿ ಗ್ರ್ರಾಮಸ್ಥರೂ ನೀತುಳ ಬೆಂಬಲಕ್ಕೆ ನಿಂತಾಗ ಅವರೆಲ್ಲ ಶುಕ್ರವಾರ ವಾಪಸ್ ಆಗಿ ಆಕೆಯ ಕ್ಷಮೆ ಯಾಚಿಸಿದ್ದರು. ಅಲ್ಲಿಗೆ ಅವಳ ಗಾಂಧಿಗಿರಿ ಗೆದ್ದಿತ್ತು ಮತ್ತು ಅದೇ ದಿನ ಸಂಜೆ ಎರಡೂ ಗ್ರಾಮಗಳ ನಿವಾಸಿಗಳ ಸಂಭ್ರಮ-ಸಡಗರದ ನಡುವೆ ನೀತು ಮತ್ತು ಧನಂಜಯ ಮದುವೆ ನೆರವೇರಿತು.

ಆದರೆ ಸಮಸ್ಯೆಯನ್ನು ಬಗೆಹರಿಸಲು ಸ್ಥಳೀಯ ಪೊಲಿಸರು ಮತ್ತು ಪೌರಾಡಳಿತ ಯಾವುದೇ ಪ್ರಯತ್ನ ಮಾಡಲಿಲ್ಲ ಎಂಬ ಅಸಮಾಧಾನ ಗ್ರಾಮಸ್ಥರಲ್ಲಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಬದ್ದಿ ಠಾಣಾಧಿಕಾರಿ ದೀಪಕ್ ಝಾ ಅವರು, ಈ ವಿವಾದದಿಂದ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯಾಗಿರಲಿಲ್ಲ. ಅಲ್ಲದೆ ಇಂತಹ ವಿವಾದಗಳು ನ್ಯಾಯಾಲಯಗಳಲ್ಲಿ ಬಗೆಹರಿಯುವುದೂ ಇಲ್ಲ. ನ್ಯಾಯವನ್ನು ಪಡೆಯಲು ತನ್ನದೇ ದಾರಿಯಲ್ಲಿ ಸಾಗಿದ ನೀತುಳ ಧೈರ್ಯವನ್ನು ತಾನು ಮೆಚ್ಚಿದ್ದೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X