ಉಡುಪಿ: ಮನೆಗೆ ನುಗ್ಗಿ ನಗ ನಗದು ಕಳವು

ಉಡುಪಿ, ಎ.1: ಕುಕ್ಕಿಕಟ್ಟೆ ಸಮೀಪದ ಇಂದಿರಾನಗರದ ಮನೆಯೊಂದಕ್ಕೆ ಇಂದು ಬೆಳಗಿನ ಜಾವ ನುಗ್ಗಿದ ಕಳ್ಳರು ಲಕ್ಷಾಂತರ ರೂ. ವೌಲ್ಯದ ನಗ ನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಇಂದಿರಾನಗರದ ಸತೀಶ್ ದೇವಾಡಿಗ ಎಂಬವರು ಇಂದು ಬೆಳಗ್ಗೆ ನಾಲ್ಕು ಗಂಟೆ ಸುಮಾರಿಗೆ ಕುಟುಂಬ ಸಮೇತ ಸುಬ್ರಹ್ಮಣ್ಯಕ್ಕೆ ಹೋಗಿದ್ದ ವೇಳೆ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಬೆಡ್ರೂಮಿನ ಕಪಾಟಿನಲ್ಲಿದ್ದ ಎಂಟು ಪವನ್ ಚಿನ್ನಾಭರಣ ಹಾಗೂ ಐದು ಸಾವಿರ ರೂ. ನಗದು ಕಳವು ಮಾಡಿದ್ದಾರೆ.
ಕಳವಾದ ಸೊತ್ತುಗಳ ಒಟ್ಟು ಮೌಲ್ಯ 2.5ಲಕ್ಷ ರೂ. ಎಂದು ಅಂದಾಜಿಸ ಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.
Next Story





