Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಕದಿನ: ಸತತ ಸೋಲಿನಿಂದ ಹೊರಬಂದ ಶ್ರೀಲಂಕಾ

ಏಕದಿನ: ಸತತ ಸೋಲಿನಿಂದ ಹೊರಬಂದ ಶ್ರೀಲಂಕಾ

ಬಾಂಗ್ಲಾದೇಶ ವಿರುದ್ಧ ಸರಣಿ ಸಮಬಲ

ವಾರ್ತಾಭಾರತಿವಾರ್ತಾಭಾರತಿ1 April 2017 11:23 PM IST
share
ಏಕದಿನ: ಸತತ ಸೋಲಿನಿಂದ ಹೊರಬಂದ ಶ್ರೀಲಂಕಾ

ಕೊಲಂಬೊ, ಎ.1: ಆಲ್‌ರೌಂಡ್ ಪ್ರದರ್ಶನ ನೀಡಿದ ಆತಿಥೇಯ ಶ್ರೀಲಂಕಾ ತಂಡ ಬಾಂಗ್ಲಾದೇಶ ವಿರುದ್ಧದ ಮೂರನೆ ಏಕದಿನ ಪಂದ್ಯವನ್ನು 70 ರನ್‌ಗಳ ಅಂತರದಿಂದ ಗೆದ್ದುಕೊಂಡಿತು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದ್ದಲ್ಲದೆ ಸತತ ಏಳು ಪಂದ್ಯಗಳ ಸೋಲಿನಿಂದ ಹೊರಬಂದಿತು.

 ಸರಣಿಯ ಮೊದಲ ಪಂದ್ಯವನ್ನು ಬಾಂಗ್ಲಾದೇಶ 90 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. 2ನೆ ಪಂದ್ಯ ಮಳೆಗಾಹುತಿಯಾಗಿತ್ತು.

ಇಲ್ಲಿನ ಎಸ್‌ಎಸ್‌ಸಿ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಗೆಲುವಿಗೆ 281 ರನ್ ಕಠಿಣ ಗುರಿ ಪಡೆದಿದ್ದ ಬಾಂಗ್ಲಾದೇಶ ತಂಡ ಶ್ರೀಲಂಕಾದ ಹಿರಿಯ ವೇಗದ ಬೌಲರ್ ನುವಾನ್ ಕುಲಶೇಖರ(4-37), ಸುರಂಗ ಲಕ್ಮಲ್(2-38) ಹಾಗೂ ದಿಲ್‌ರುವಾನ್ ಪೆರೇರ(2-47) ದಾಳಿಗೆ ತತ್ತರಿಸಿ 44.3 ಓವರ್‌ಗಳಲ್ಲಿ 210 ರನ್‌ಗೆ ಆಲೌಟಾಗಿ ಸೋಲೊಪ್ಪಿಕೊಂಡಿತು.

ಬಾಂಗ್ಲಾದೇಶದ ಪರ ಶಾಕಿಬ್ ಅಲ್ ಹಸನ್(54) ಹಾಗೂ ಮೆಹದಿ ಹಸನ್ ಮಿರಾಝ್(51) ಒಂದಷ್ಟು ಪ್ರತಿರೋಧ ಒಡ್ಡಿದರು. ನಿರಂತರವಾಗಿ ವಿಕೆಟ್‌ಗಳನ್ನು ಕಳೆದುಕೊಂಡ ಬಾಂಗ್ಲಾ ಆರಂಭಿಕ ಆಘಾತದಿಂದ ಚೇತರಿಸಿಕೊಳ್ಳಲು ವಿಫಲವಾಯಿತು. ಬಾಂಗ್ಲಾ 11 ರನ್ ಗಳಿಸುವಷ್ಟರಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು.

ಆಗ 4ನೆ ವಿಕೆಟ್‌ಗೆ 77 ರನ್ ಜೊತೆಯಾಟ ನಡೆಸಿದ ಸೌಮ್ಯ ಸರ್ಕಾರ್(38)ಹಾಗೂ ಶಾಕಿಬ್(54 ರನ್, 62 ಎಸೆತ, 7 ಬೌಂಡರಿ) ತಂಡವನ್ನು ಆಧರಿಸಿದರು. ಇನಿಂಗ್ಸ್ ಅಂತ್ಯದಲ್ಲಿ ಮೆಹದಿ ಹಸನ್(51 ರನ್, 71 ಎಸೆತ, 6 ಬೌಂಡರಿ) ಅಬ್ಬರಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ವಿಫಲರಾದರು.

ಶ್ರೀಲಂಕಾ 280/9: ಇದಕ್ಕೆ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ ತಂಡ ಕುಶಾಲ್ ಮೆಂಡಿಸ್(54 ರನ್, 76 ಎಸೆತ, 4 ಬೌಂಡರಿ) ಹಾಗೂ ತಿಸಾರ ಪೆರೇರ(52 ರನ್, 40 ಎಸೆತ, 4 ಬೌಂಡರಿ, 1 ಸಿಕ್ಸರ್) ಸಿಡಿಸಿದ ಆಕರ್ಷಕ ಅರ್ಧಶತಕದ ಬಲದಿಂದ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 280 ರನ್ ಗಳಿಸಿತು.

ಗುಣತಿಲಕ(34) ಹಾಗೂ ನಾಯಕ ಉಪುಲ್ ತರಂಗ(35) ಮೊದಲ ವಿಕೆಟ್‌ನಲ್ಲಿ 76 ರನ್ ಜೊತೆಯಾಟ ನಡೆಸಿ ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸಿದ್ದರು. ಗುಣರತ್ನೆ(34), ದಿನೇಶ್ ಚಾಂಡಿಮಲ್(21)ಎರಡಂಕೆಯ ಸ್ಕೋರ್ ದಾಖಲಿಸಿದರು. ಬಾಂಗ್ಲಾದೇಶದ ಪರ ಮಶ್ರಾಫೆ ಮೊರ್ತಝಾ(3-65), ಮುಸ್ತಫಿಝರ್ರಹ್ಮಾನ್(2-55) ತಮ್ಮಾಳಗೆ 5 ವಿಕೆಟ್‌ಗಳನ್ನು ಹಂಚಿಕೊಂಡರು.

ಸಂಕ್ಷಿಪ್ತ ಸ್ಕೋರ್

ಶ್ರೀಲಂಕಾ: 50 ಓವರ್‌ಗಳಲ್ಲಿ 280/9

(ಕುಶಾಲ್ ಮೆಂಡಿಸ್ 54, ಪೆರೇರ 52, ತರಂಗ 35, ಗುಣತಿಲಕ 34, ಗುಣರತ್ನೆ 34, ಮೊರ್ತಝಾ 3-65, ಮುಸ್ತಫಿಝುರ್ರಹ್ಮಾನ್ 2-55)

ಬಾಂಗ್ಲಾದೇಶ: 44.3 ಓವರ್‌ಗಳಲ್ಲಿ 210 ರನ್‌ಗೆ ಆಲೌಟ್

(ಶಾಕಿಬ್ ಅಲ್ ಹಸನ್ 54, ಮೆಹೆದಿ ಹಸನ್ ಮಿರಾಝ್ 51, ಸೌಮ್ಯ ಸರ್ಕಾರ್ 38, ಕುಲಶೇಖರ 4-37, ಲಕ್ಮಲ್ 2-38, ಪೆರೇರ 2-47)

ಪಂದ್ಯಶ್ರೇಷ್ಠ: ತಿಸಾರ ಪೆರೇರ

ಸರಣಿಶ್ರೇಷ್ಠ: ಕುಶಾಲ್ ಮೆಂಡಿಸ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X