Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕಿಸ್ತಾನದಲ್ಲಿ ದರ್ಗಾದ ‘ಮಾನಸಿಕ...

ಪಾಕಿಸ್ತಾನದಲ್ಲಿ ದರ್ಗಾದ ‘ಮಾನಸಿಕ ಅಸ್ವಸ್ಥ’ ಮೇಲ್ವಿಚಾರಕನಿಂದ 20 ಜನರ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ2 April 2017 3:03 PM IST
share
ಪಾಕಿಸ್ತಾನದಲ್ಲಿ ದರ್ಗಾದ ‘ಮಾನಸಿಕ ಅಸ್ವಸ್ಥ’ ಮೇಲ್ವಿಚಾರಕನಿಂದ 20 ಜನರ ಹತ್ಯೆ

ಲಾಹೋರ,ಎ.2: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾದ ದರ್ಗಾವೊಂದರಲ್ಲಿ ನಿನ್ನೆ ಮಧ್ಯರಾತ್ರಿ ಮಾನಸಿಕ ಅಸ್ವಸ್ಥನೆನ್ನಲಾದ ಅದರ ಮೇಲ್ವಿಚಾರಕ ಮತ್ತು ಆತನ ಸಹಚರರು ಸೇರಿಕೊಂಡು ಒಂದೇ ಕುಟುಂಬದ ಆರು ಸದಸ್ಯರು ಸೇರಿದಂತೆ 20 ಜನರಿಗೆ ಚಿತ್ರಹಿಂಸೆ ನೀಡಿ ಕೊಂದುಹಾಕಿದ್ದಾರೆ.

ಲಾಹೋರಿನಿಂದ ಸುಮಾರು 200 ಕಿ.ಮೀ.ದೂರದ ಸರ್ಗೋಧಾ ಜಿಲ್ಲೆಯ ಗ್ರಾಮವೊಂದರಲ್ಲಿರುವ ಮುಹಮ್ಮದ್ ಅಲಿ ಗುಜ್ಜರ್ ದರ್ಗಾದಲ್ಲಿ ಈ ಭೀಕರ ಹತ್ಯಾಕಾಂಡ ನಡೆದಿದೆ ಎಂದು ಜಿಲ್ಲಾಧಿಕಾರಿ ಲಿಯಾಕತ್ ಅಲಿ ಚಾಥಾ ಅವರು ರವಿವಾರ ಬೆಳಿಗ್ಗೆ ತಿಳಿಸಿದರು.

ದರ್ಗಾದ ಮೇಲ್ವಿಚಾರಕ ಅಬ್ದುಲ್ ವಾಹೀದ್ ಮತ್ತು ಆತನ ಸಹಚರರು ಮೊದಲು ಬಲಿಪಶುಗಳಿಗೆ ಮಾದಕ ವಸ್ತು ನೀಡಿದ್ದರೆನ್ನಲಾಗಿದ್ದು, ಬಳಿಕ ಅವರನ್ನೆಲ್ಲ ವಿವಸ್ತ್ರಗೊಳಿಸಿ ಚೂರಿಯಿಂದ ಇರಿದು, ದೊಣ್ಣೆಯಿಂದ ಬಡಿದು ಹತ್ಯೆಗೈದಿದ್ದಾರೆ. ಕೊಲೆಯಾದವರಲ್ಲಿ ಮೂವರು ಮಹಿಳೆಯರೂ ಸೇರಿದ್ದಾರೆ ಎಂದು ಅವರು ಹೇಳಿದರು.

ಈ ಭೀಕರ ಕೃತ್ಯದ ಹಿಂದಿನ ಉದ್ದೇಶ ಈವರೆಗೆ ಗೊತ್ತಾಗಿಲ್ಲ,ಆದರೆ ಶಂಕಿತ ಆರೋಪಿಗಳು ಭಕ್ತರಿಗೆ ಧಾರ್ಮಿಕ ಪ್ರವಚನ ನೀಡಲು ಕಳೆದೆರಡು ವರ್ಷಗಳಿಂದ ಈ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದರು ಎಂದು ಪೊಲೀಸ್ ಅಧಿಕಾರಿ ಮಝರ್ ಶಾ ಹೇಳಿದರು.

ಮೇಲ್ವಿಚಾರಕರಾದ ವಾಹೀದ್ ಮತ್ತು ಯೂಸುಫ್ ಸೇರಿದಂತೆ ಐವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಲಾಗಿದೆ ಎಂದರು.

ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ತಾವು ಮಾಡಿದ ಪಾಪಗಳಿಂದ ಮುಕ್ತರಾಗಲು ಈ ದರ್ಗಾಕ್ಕೆ ಬರುವ ಜನರು ಅಲ್ಲಿಯ ಮೇಲ್ವಿಚಾರಕರಿಂದ ದೊಣ್ಣೆಯ ಪೆಟ್ಟುಗಳನ್ನು ತಿನ್ನುವುದು ಇಲ್ಲಿಯ ಸಂಪ್ರದಾಯವಾಗಿದೆ. ಇದರಿಂದ ತಾವು ಪಾಪಮುಕ್ತರಾಗುತ್ತೇವೆ ಎನ್ನುವುದು ಜನರ ನಂಬಿಕೆಯಾಗಿದೆ.

ಪ್ರಮುಖ ಶಂಕಿತ ಲಾಹೋರ ನಿವಾಸಿಯಾಗಿದ್ದು, ಪಾಕಿಸ್ತಾನ ಚುನಾವಣಾ ಆಯೋಗದ ಉದ್ಯೋಗಿಯಾಗಿದ್ದಾನೆ ಎಂದು ಚಾಥಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X