Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿ 3-4 ವರ್ಷಗಳಿಗೆ ನೋಟುಗಳ ಭದ್ರತಾ...

ಪ್ರತಿ 3-4 ವರ್ಷಗಳಿಗೆ ನೋಟುಗಳ ಭದ್ರತಾ ಲಕ್ಷಣಗಳ ಬದಲಾವಣೆಗೆ ಸರಕಾರದ ಚಿಂತನೆ

ವಾರ್ತಾಭಾರತಿವಾರ್ತಾಭಾರತಿ2 April 2017 3:25 PM IST
share
ಪ್ರತಿ 3-4 ವರ್ಷಗಳಿಗೆ ನೋಟುಗಳ ಭದ್ರತಾ ಲಕ್ಷಣಗಳ ಬದಲಾವಣೆಗೆ ಸರಕಾರದ ಚಿಂತನೆ

ಹೊಸದಿಲ್ಲಿ,ಎ.2: ನಕಲಿ ನೋಟುಗಳ ಪಿಡುಗಿಗೆ ಕಡಿವಾಣ ಹಾಕಲು ಜಾಗತಿಕ ವಾಡಿಕೆಗನುಗುಣವಾಗಿ ಪ್ರತಿ 3-4 ವರ್ಷಗಳಿಗೊಮ್ಮೆ 500 ಮತ್ತು 2,000 ರೂ.ನೋಟುಗಳ ಭದ್ರತಾ ಲಕ್ಷಣಗಳಲ್ಲಿ ಬದಲಾವಣೆ ಮಾಡಲು ಸರಕಾರವು ಉದ್ದೇಶಿಸಿದೆ.

ನೋಟು ಅಮಾನ್ಯದ ಬಳಿಕ ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಭಾರೀ ಪ್ರಮಾಣದ ನಕಲಿ ನೋಟುಗಳು ವಶವಾಗಿರುವ ಹಿನ್ನಲೆಯಲ್ಲಿ ಈ ಕ್ರಮಕ್ಕೆ ಸರಕಾರವು ಮುಂದಾಗಿದೆ.

 ಗುರುವಾರ ನಡೆದ,ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ ಮೆಹರಿಷಿ ಅವರು ಸೇರಿದಂತೆ ವಿತ್ತ ಮತ್ತು ಗೃಹ ಸಚಿವಾಲಯಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದ ಉನ್ನತಮಟ್ಟದ ಸಭೆಯಲ್ಲಿ ಈ ಬಗ್ಗೆ ಎಳೆಎಳೆಯಾಗಿ ಚರ್ಚಿಸಲಾಗಿದೆ.

ಹೆಚ್ಚಿನ ಶ್ರೀಮಂತ ರಾಷ್ಟ್ರಗಳು ಪ್ರತಿ 3-4 ವರ್ಷಗಳಿಗೊಮ್ಮೆ ತಮ್ಮ ಕರೆನ್ಸಿ ನೋಟುಗಳ ಭದ್ರತಾ ಲಕ್ಷಣಗಳನ್ನು ಬದಲಿಸುತ್ತವೆ. ಭಾರತವೂ ಈ ನೀತಿಯನ್ನು ಅನುಸರಿಸುವುದು ತುಂಬ ಅಗತ್ಯವಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ಸಭೆಯಲ್ಲಿ ಪ್ರತಿಪಾದಿಸಿದ್ದಾರೆ.

ಭಾರತದಲ್ಲಿ ದೊಡ್ಡ ಮುಖಬೆಲೆಯ ನೋಟುಗಳ ಭದ್ರತಾ ಲಕ್ಷಣಗಳಲ್ಲಿ ಬದಲಾವಣೆಗಳನ್ನು ಮಾಡಿ ಹಲವು ವರ್ಷಗಳೇ ಸರಿದು ಹೋಗಿವೆ. 2000ರಲ್ಲಿ ಚಲಾವಣೆಗೆ ಬಂದಿದ್ದ 1,000 ರೂ.ನೋಟುಗಳ ಭದ್ರತಾ ಲಕ್ಷಣಗಳಲ್ಲಿ ನೋಟು ಅಮಾನ್ಯದವರೆಗೆ ಪ್ರಮುಖ ಬದಲಾವಣೆಯೇನೂ ಆಗಿರಲಿಲ್ಲ. 1987ರಲ್ಲಿ ಚಲಾವಣೆಗೆ ಬಂದಿದ್ದ ಹಳೆಯ 500 ರೂ.ನೋಟುಗಳ ಭದ್ರತಾ ಲಕ್ಷಣಗಳಲ್ಲಿ ಬದಲಾವಣೆಗಳನ್ನು ಮಾಡಿ ದಶಕವೇ ಕಳೆದಿತ್ತು.

ಈಗ ಹೊಸದಾಗಿ ಬಿಡುಗಡೆಯಾಗಿರುವ 5,00 ಮತ್ತು 2,000 ರೂ.ನೋಟುಗಳಲ್ಲಿ ಯಾವುದೇ ಹೆಚ್ಚುವರಿ ಭದ್ರತಾ ಲಕ್ಷಣಗಳಿಲ್ಲ, ಅವು ಹಳೆಯ 500 ಮತ್ತು 1,000 ರೂ.ನೋಟುಗಳಲ್ಲಿನ ಭದ್ರತಾ ಲಕ್ಷಣಗಳನ್ನೇ ಹೊಂದಿವೆ.

 ಇತ್ತೀಚಿಗೆ ವಶಪಡಿಸಿಕೊಳ್ಳಲಾಗಿರುವ ನಕಲಿ ನೋಟುಗಳ ಸೂಕ್ಷ್ಮ ಪರಿಶೀಲನೆಯಲ್ಲಿ 17 ಭದ್ರತಾ ಲಕ್ಷಣಗಳ ಪೈಕಿ ಕನಿಷ್ಠ 11ನ್ನು ಯಥಾವತ್ತಾಗಿ ನಕಲು ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X