Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೈವಾಡ ನಡೆದರೆ ಕೆಲಸವನ್ನೇ ನಿಲ್ಲಿಸುವ...

ಕೈವಾಡ ನಡೆದರೆ ಕೆಲಸವನ್ನೇ ನಿಲ್ಲಿಸುವ ನೂತನ ಇವಿಎಂ

ವಾರ್ತಾಭಾರತಿವಾರ್ತಾಭಾರತಿ2 April 2017 1:35 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೈವಾಡ ನಡೆದರೆ ಕೆಲಸವನ್ನೇ ನಿಲ್ಲಿಸುವ ನೂತನ ಇವಿಎಂ

ಹೊಸದಿಲ್ಲಿ,ಎ.2: ಯಂತ್ರದಲ್ಲಿ ಹಸ್ತಕ್ಷೇಪ ನಡೆಸಲು ಪ್ರಯತ್ನಿಸಿದರೆ ತಕ್ಷಣವೇ ನಿಷ್ಕ್ರಿಯಗೊಳ್ಳುವ ಮುಂದಿನ ಪೀಳಿಗೆಯ ವಿದ್ಯುನ್ಮಾನ ಮತದಾನ ಯಂತ್ರ (ಇವಿಎಂ) ಗಳನ್ನು ಖರೀದಿಸಲು ಚುನಾವಣಾ ಆಯೋಗವು ಸಜ್ಜಾಗಿದೆ. ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿ ಇವಿಎಂಗಳಲ್ಲಿ ಕೈವಾಡ ನಡೆಸಲಾಗಿತ್ತು ಎಂಬ ಕೆಲವು ರಾಜಕೀಯ ಪಕ್ಷಗಳ ಆರೋಪಗಳ ನಡುವೆಯೇ ಆಯೋಗವು ಈ ಹೆಜ್ಜೆಯನ್ನಿರಿಸಿದೆ.

‘ಎಂ 3’ಮಾದರಿಯ ಇವಿಎಂಗಳು ಯಂತ್ರಗಳಲ್ಲಿ ಸಾಚಾತನ ದೃಢೀಕರಣಕ್ಕೆ ಸ್ವಯಂ ದೋಷನಿರ್ಣಯ ವ್ಯವಸ್ಥೆಯನ್ನೂ ಅಳವಡಿಸಲಾಗಿದೆ. ಸರಕಾರಿ ಸ್ವಾಮ್ಯದ ಉದ್ಯಮ ಗಳಾದ ಇಸಿಐಎಲ್ ಮತ್ತು ಬಿಇಎಲ್ ಈ ನೂತನ ಯಂತ್ರಗಳನ್ನು ಪೂರೈಸಲಿವೆ.

2019ರ ಲೋಕಸಭಾ ಚುನಾವಣೆಗೆ ಒಂದು ವರ್ಷ ಮೊದಲೇ ನೂತನ ಯಂತ್ರಗಳು ಕಾರ್ಯಾರಂಭಗೊಳ್ಳುವ ಸಾಧ್ಯತೆಗಳಿವೆ ಮತ್ತು ಇವುಗಳ ಖರೀದಿಗಾಗಿ ಸಾಗಣೆ ವೆಚ್ಚ ಹಾಗೂ ತೆರಿಗೆಗಳನ್ನು ಹೊರತುಪಡಿಸಿ ಸುಮಾರು 1,940 ಕೋ.ರೂ.ಗಳ ಅಗತ್ಯವಿದೆ ಎಂದು ಕಾನೂನು ಸಚಿವಾಲಯವು ತಿಳಿಸಿದೆ.

2006ಕ್ಕೆ ಮೊದಲು ಖರೀದಿಸಲಾಗಿದ್ದ 9,30,430 ಇವಿಎಂಗಳು ತಮ್ಮ 15 ವರ್ಷಗಳ ಜೀವಿತಾವಧಿಯ ಅಂತ್ಯವನ್ನು ಸಮೀಪಿಸುತ್ತಿರುವುದರಿಂದ ಅವುಗಳನ್ನು ಬದಲಿಸಲು ಚುನಾವಣಾ ಆಯೋಗವು ನಿರ್ಧರಿಸಿದೆ.

 2019ರ ಲೋಕಸಭಾ ಚುನಾವಣೆಗೆ ಮುನ್ನ ಹಳೆಯ ಯಂತ್ರಗಳನ್ನು ಹಂತಹಂತವಾಗಿ ತೆಗೆದು ಹಾಕುವಂತಾಗಲು ನೂತನ ಇವಿಎಂಗಳ ಖರೀದಿಗಾಗಿ ಚುನಾವಣಾ ಆಯೋಗಕ್ಕೆ ಹೊಸದಾಗಿ 1,009 ಕೋ.ರೂ.ಬಿಡುಗಡೆ ಮಾಡಲು ಕೇಂದ್ರ ಸಂಪುಟವು ಕಳೆದ ವರ್ಷದ ಡಿ.7ರಂದು ಸಮ್ಮತಿ ನೀಡಿತ್ತು.

ಕಳೆದ ವರ್ಷದ ಜುಲೈನಲ್ಲಿ 2016-17ನೇ ಸಾಲಿನಲ್ಲಿ ಮೊದಲ ಕಂತಿನಲ್ಲಿ 9,200 ಕೋ.ರೂ.ವೆಚ್ಚದಲ್ಲಿ ಸುಮಾರು 14 ಲಕ್ಷ ಹೊಸ ಇವಿಎಂ ಯಂತ್ರಗಳನ್ನು ಖರೀದಿಸುವ ಆಯೋಗದ ಇಂತಹುದೇ ಪ್ರಸ್ತಾವಕ್ಕೆ ಕೇಂದ್ರ ಸಂಪುಟವು ಒಪ್ಪಿಗೆ ನೀಡಿತ್ತು.

ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಆಯೋಗವು ಹೊಸ ಇವಿಎಂಗಳನ್ನು ಖರೀದಿಸಿಲ್ಲ ಎಂದು ಸಹಾಯಕ ಕಾನೂನು ಸಚಿವ ಪಿ.ಪಿ.ಚೌಧರಿ ಅವರು ಶುಕ್ರವಾರ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X