Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಸಿಲ ಧಗೆಗೆ ಶಿವಮೊಗ್ಗ ತತ್ತರ!

ಬಿಸಿಲ ಧಗೆಗೆ ಶಿವಮೊಗ್ಗ ತತ್ತರ!

40 ಡಿಗ್ರಿ ಸೆ. ದಾಟಿದ ತಾಪಮಾನ

ಬಿ ರೇಣುಕೇಶ್ಬಿ ರೇಣುಕೇಶ್2 April 2017 11:00 PM IST
share
ಬಿಸಿಲ ಧಗೆಗೆ ಶಿವಮೊಗ್ಗ ತತ್ತರ!

ಶಿವಮೊಗ್ಗ, ಎ.2: ಶಿವಮೊಗ್ಗ ನಗರದಲ್ಲಿ ತಾಪಮಾನದ ಪ್ರಮಾಣ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ದಾಖಲಾಗುತ್ತಿರುವ ಗರಿಷ್ಠ ಉಷ್ಣಾಂಶದ ಪ್ರಮಾಣ 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ಬಿಸಿಲ ಧಗೆಗೆ ನಾಗರಿಕರು ಅಕ್ಷರಶಃ ತತ್ತರಿಸಿ ಹೋಗುತ್ತಿದ್ದು, ಏದುಸಿರು ಬಿಡುವಂತಾಗಿದೆ. ಮಲೆನಾಡು ನಗರದಲ್ಲಿ ಬೇಸಿಗೆಯ ವಾತಾವರಣವು ಬಯಲು ಸೀಮೆಯ ಅನುಭವವನ್ನುಂಟು ಮಾಡುವಂತಿದೆ. ನಗರದಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶದ ಪ್ರಮಾಣ 41 ಡಿಗ್ರಿ ಸೆಲ್ಸಿಯಸ್ ಆಗಿದೆ.

ಕಳೆದ ಏಳೆಂಟು ವರ್ಷಗಳಲ್ಲಿ ದಾಖಲಾದ ಅತ್ಯಧಿಕ ಉಷ್ಣಾಂಶ ಇದಾಗಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಸದ್ಯದ ಸ್ಥಿತಿ ಗಮನಿಸಿದರೆ ಎಪ್ರಿಲ್, ಮೇ ತಿಂಗಳುಗಳಲ್ಲಿ ತಾಪಮಾನದ ಪ್ರಮಾಣದಲ್ಲಿ ಮತ್ತಷ್ಟು ಅಧಿಕವಾಗುವ ಸಾಧ್ಯತೆಯಿದ್ದು, ಇದು ನಾಗರಿಕರ ನಿದ್ದೆಗೆಡಿಸುವಂತೆ ಮಾಡಿದೆ. ಬೇಸಿಗೆಯ ಅವಧಿಯಲ್ಲಿಯೂ ತಣ್ಣನೆಯ ವಾತಾವರಣಕ್ಕೆ ಹೆಸರುವಾಸಿಯಾಗಿದ್ದ ನಗರದಲ್ಲೀಗ ಎಲ್ಲೆಲ್ಲೂ ಬಿಸಿಗಾಳಿ ಬೀಸುತ್ತಿರುವು ಕಂಡುಬರುತ್ತಿದೆ. ನಾಗರಿಕರು ತಣ್ಣನೆಯ ಸ್ಥಳಗಳನ್ನರಿಸಿ ಹೋಗುವಂತಾಗಿದೆ.

ಮಧ್ಯಾಹ್ನದ ವೇಳೆಯಲ್ಲಂತೂ ನಗರದ ಡಾಂಬರು ರಸ್ತೆಗಳಲ್ಲಿ ಬರಿಗಾಲಲ್ಲಿ ಕಾಲಿಡಲು ಆಗದ ಮಟ್ಟಕ್ಕೆ ರಸ್ತೆಗಳು ಬಿಸಿಲಿಗೆ ಕಾದಿರುತ್ತವೆ. ಅಕ್ಷರಶಃ ಕಾದ ಕಾವಲಿನಂತಾಗಿ ಪರಿಣಮಿಸುತ್ತಿವೆ. ‘ಇತ್ತೀಚಿನ ವರ್ಷಗಳಲ್ಲಿ ಈ ರೀತಿಯ ಬಿಸಿಲನ್ನು ತಾವು ನೋಡಿರಲಿಲ್ಲ. ಮನೆ ಬಿಟ್ಟು ಹೊರಗಡೆ ಬರಲು ಆಗದ ಮಟ್ಟಕ್ಕೆ ಬಿಸಿಲು ಬೀಳುತ್ತಿದೆ. ಬೆಳಗ್ಗೆ 8-9 ಗಂಟೆಗೆ ನೆತ್ತಿ ಸುಡುವ ರೀತಿಯಲ್ಲಿ ಬಿಸಿಲು ಬೀಳುತ್ತಿದೆ.

ಮಧ್ಯಾಹ್ನದ ವೇಳೆಯಂತೂ ನಗರದ ಪ್ರಮುಖ ರಸ್ತೆಗಳಲ್ಲಿ ಜನ-ವಾಹನ ಸಂಚಾರ ದಟ್ಟಣೆ ಕಡಿಮೆಯಿರುವುದು ಕಂಡುಬರುತ್ತಿದೆ. ಫ್ಯಾನ್, ಎಸಿ, ಏರ್ ಕೂಲರ್ ಇಲ್ಲದೆ ಮನೆ, ಕಚೇರಿಯೊಳಗಿರಲು ಅಸಾಧ್ಯವಾಗಿದೆ’ ಎಂದು ವಿನೋಬಾನಗರದ ನಿವಾಸಿ ಮಂಜುನಾಥ್ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ವ್ಯವಹಾರವಿಲ್ಲ: ಮಧ್ಯಾಹ್ನದ ವೇಳೆ ಕಂಡುಬರುವ ತೀವ್ರ ಬಿಸಿಲಿನ ಕಾರಣದಿಂದ ಮುಕ್ಕಾಲು ಪಾಲು ನಾಗರಿಕರು ಮನೆ ಬಿಟ್ಟು ಹೊರಗೆ ಬರುತ್ತಿಲ್ಲ. ಇದರಿಂದ ಈ ವೇಳೆ ನಗರದ ಪ್ರಮುಖ ರಸ್ತೆಗಳಲ್ಲಿ ವ್ಯಾಪಾರ-ವಹಿವಾಟು ಕಡಿಮೆ ಇರುವುದು ಕಂಡುಬರುತ್ತಿದೆ. ಗ್ರಾಹಕರ ಸಂಖ್ಯೆ ಕಡಿಮೆ ಇರುವುದರಿಂದ ಕೆಲ ವರ್ತಕರು ಮಧ್ಯಾಹ್ನದ ವೇಳೆ ತಮ್ಮ ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿರುವುದು ಕೂಡ ಕಂಡುಬರುತ್ತಿದೆ.

ಮರಗಳ ಮಾರಣಹೋಮ
‘ಕಳೆದೊಂದು ದಶಕದ ಅವಧಿಯಲ್ಲಿ ಅಭಿವೃದ್ಧಿಯ ನೆಪದಲ್ಲಿ ನಗರದಲ್ಲಿ ಸಾವಿರಾರು ಮರಗಳ ಮಾರಣ ಹೋಮ ನಡೆಸಲಾಗಿದೆ. ಭಾರೀ ಪ್ರಮಾಣದ ಕೆರೆ-ಕಟ್ಟೆಗಳು ಕಣ್ಮರೆಯಾಗಿವೆ. ಪರಿಸರ ಸಂರಕ್ಷಣೆಗೆ ಆಡಳಿತಗಾರರು ಕಾಳಜಿ ವಹಿಸುತ್ತಿಲ್ಲ. ಇದೆಲ್ಲದರ ಪರಿಣಾಮದಿಂದ ನಗರದ ಪರಿಸರದಲ್ಲಿ ಭಾರೀ ಪ್ರಮಾಣದ ವೈಪರೀತ್ಯ ಕಂಡುಬರುತ್ತಿದೆ. ತಾಪಮಾನ ಹೆಚ್ಚಳಕ್ಕೆ ಕಾರಣವಾಗಿದೆ’ ಎಂದು ಪರಿಸರ ಪ್ರೇಮಿಗಳು ಹೇಳುತ್ತಾರೆ.

ತಂಪು ಪಾನೀಯಕ್ಕೆ ಸಖತ್ ಡಿಮ್ಯಾಂಡ್
ಒಂದೆಡೆ ಬಿಸಿಲ ಬೇಗೆ ಏರುತ್ತಿದ್ದಂತೆ ಮತ್ತೊಂದೆಡೆ ತಂಪು ಪಾನೀಯ, ಹಣ್ಣುಗಳಿಗೆ ಸಖತ್ ಡಿಮ್ಯಾಂಡ್ ಕಂಡುಬಂದಿದೆ. ತಂಪು ಪಾನೀಯ-ಐಸ್ ಕ್ರೀಂ ಮಾರಾಟ ಸ್ಥಳಗಳು ಜನರಿಂದ ತುಂಬಿ ತುಳುಕುತ್ತಿವೆ. ಕಲ್ಲಂಗಡಿ, ಖರಬೂಜದಂತಹ ಹಣ್ಣುಗಳಿಗೆ ನಾಗರಿಕ ವಲಯದಲ್ಲಿ ಭಾರೀ ಬೇಡಿಕೆ ಕಂಡುಬರುತ್ತಿದೆ.

share
ಬಿ ರೇಣುಕೇಶ್
ಬಿ ರೇಣುಕೇಶ್
Next Story
X