Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಸಾರ್ವಜನಿಕ ಸೇವೆಗೆ...

ಬಂಟ್ವಾಳ: ಸಾರ್ವಜನಿಕ ಸೇವೆಗೆ ಸಿದ್ಧವಾಗುತ್ತಿರುವ ಮಿನಿ ವಿಧಾನಸೌಧ

ಇಮ್ತಿಯಾಝ್ ಶಾ ತುಂಬೆಇಮ್ತಿಯಾಝ್ ಶಾ ತುಂಬೆ2 April 2017 11:58 PM IST
share
ಬಂಟ್ವಾಳ: ಸಾರ್ವಜನಿಕ ಸೇವೆಗೆ ಸಿದ್ಧವಾಗುತ್ತಿರುವ ಮಿನಿ ವಿಧಾನಸೌಧ

 ಒಂದೇ ಕಟ್ಟಡದಲ್ಲಿ ತಾಲೂಕಿನ ಪ್ರಮುಖ ಕಚೇರಿಗಳು

ಇನ್ನೊಂದು ತಿಂಗಳೊಳಗೆ ಲೋಕಾರ್ಪಣೆ

3,225 ಚದರ ಮೀಟರ್ ವಿಸ್ತೀರ್ಣ 

ಬಂಟ್ವಾಳ, ಎ.2: ಬಿ.ಸಿ.ರೋಡ್ ಹಳೆ ತಾಲೂಕು ಕಚೇರಿಯನ್ನು ಕೆಡವಿ ಸುಸಜ್ಜಿತ, ಸುಂದರವಾಗಿ ನಿರ್ಮಾಣಗೊಂಡಿರುವ ಮಿನಿ ವಿಧಾನಸೌಧ ಕಟ್ಟಡದ ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು ಎಪ್ರಿಲ್ ಅಥವಾ ಮೇ ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ. ಬಿ.ಸಿ.ರೋಡ್‌ಗೆ ಹೊಸ ಮೆರುಗು ನೀಡುತ್ತಿರುವ ಮಿನಿ ವಿಧಾನಸೌಧ ಲೋಕಾರ್ಪಣೆ ಬಳಿಕ ತಾಲೂಕು ಕಚೇರಿ, ಸಬ್ ರಿಜಿಸ್ಟ್ರಾರ್, ಗ್ರಾಮಕರಣಿಕ, ಸರ್ವೇ ಇಲಾಖೆ, ನೆಮ್ಮದಿ ಕೇಂದ್ರ, ಭೂ ದಾಖಲೆ ನಿರ್ದೇಶಕರ ಕಚೇರಿ, ನಾಡಕಚೇರಿ, ತಹಶೀಲ್ದಾರ್ ಕಚೇರಿ ಸಹಿತ ತಾಲೂಕಿನ ಎಲ್ಲ ಪ್ರಮುಖ ಕಚೇರಿಗಳು ಇಲ್ಲಿ ಕಾರ್ಯ ನಿರ್ವಹಿಸಲಿವೆೆ. ಪ್ರಸ್ತುತ ಅಲ್ಲೊಂದು, ಇಲ್ಲೊಂದು ಬಿಡಿ ಬಿಡಿಯಾಗಿ ತಾಲೂಕು ಕಚೇರಿಯ ವಿವಿಧ ಶಾಖೆಗಳು ಚದುರಿರುವುದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನು ಮುಂದೆ ಒಂದೇ ಕಟ್ಟಡದಲ್ಲಿ ಎಲ್ಲ ಶಾಖೆಗಳು ಕಾರ್ಯ ನಿರ್ವಹಿಸಲಿರುವುದರಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲಕರವಾಗಲಿದೆ. ಬಂಟ್ವಾಳದ ಶಾಸಕ ಸಚಿವ ಬಿ.ರಮಾನಾಥ ರೈ ಅವರ ಮುತುವರ್ಜಿಯಿಂದ ನಿರ್ಮಾ ಣವಾಗುತ್ತಿರುವ ಈ ಮಿನಿ ವಿಧಾನಸೌಧ ಜಿಲ್ಲೆಯಲ್ಲಿ ನಿರ್ಮಾಣಗೊಂಡ ಮಿನಿ ವಿಧಾನ ಸೌಧಗಳ ಪೈಕಿ ಅತ್ಯಂತ ವಿನೂತನ ಮತ್ತು ಅತೀ ದೊಡ್ಡದಾಗಿದೆ ಎಂಬ ಹೆಗ್ಗಳಿಕೆ ಇದೆ. ಸುಮಾರು 33 ಸೆಂಟ್ಸ್ ವಿಸ್ತೀರ್ಣದಲ್ಲಿ ನಿರ್ಮಾಣವಾಗಿರುವ ಬಿ.ಸಿ.ರೋಡ್ ಮಿನಿ ವಿಧಾನಸೌಧ ನೆಲ, ಮೊದಲ, ಎರಡನೆ ಮಹಡಿಯನ್ನು ಹೊಂದಿದೆ. ಪ್ರತಿಯೊಂದು ಮಹಡಿ 1,075 ಚದರ ಮೀಟರ್‌ನಂತೆ ಒಟ್ಟು 3,225 ಚ.ಮೀ. ವಿಸ್ತೀರ್ಣ ಇದೆ. ಅಲ್ಲದೆ ಕಟ್ಟಡದ ಜಾಗದಲ್ಲೇ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತದೆ. ಮಂಗಳೂರಿನ ಸೀಡಿ ಕನ್‌ಸ್ಟ್ರಕ್ಷನ್ ಸಂಸ್ಥೆಯು ಇದರ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ. ಅಂದುಕೊಂಡದ್ದಕ್ಕಿಂತ ವೇಗವಾಗಿ ಕೆಲಸವೂ ನಡೆದಿದೆ. ಯಾವ ಮಹಡಿಯಲ್ಲಿ ಏನೇನಿದೆ?: ನೆಲ ಅಂತಸ್ತಿನಲ್ಲಿ ತಾಲೂಕು ಸಬ್ ಟ್ರೆಜರಿ ಕಚೇರಿ, ತಾಲೂಕು ಕಚೇರಿ, ಮೊದಲ ಅಂತಸ್ತಿನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ, ಭೂ ದಾಖಲೆ ನಿರ್ದೇಶಕರ ಕಚೇರಿ, ನಾಡ ಕಚೇರಿ, ತಾಲೂಕು ಕಚೇರಿ ಇದೆ. ಎರಡನೆ ಅಂತಸ್ತಿನಲ್ಲಿ ವಾಣಿಜ್ಯ ತೆರಿಗೆ ಕಚೇರಿ, ಭೂ ದಾಖಲೆ ಹಾಗೂ ತಾಲೂಕು ಕಚೇರಿಗೆ ಸಂಬಂಧಿಸಿದ ಇತರ ಕಚೇರಿಗಳು. ಅಲ್ಲದೆ 230ಚ.ಮೀ. ವಿಸ್ತೀರ್ಣದ ವಿಶಾಲ ರೆಕಾರ್ಡ್ ಕೊಠಡಿಯನ್ನು ಹೊಂದಿದೆ.

ಮಿನಿ ವಿಧಾನಸೌಧ ಲೋಕಾರ್ಪಣೆಗೆ ಸಿಎಂ

ಬಂಟ್ವಾಳ ತಾಲೂಕಿಗೊಂದು ಸುಂದರ, ಸುಸಜ್ಜಿತ ಮಿನಿ ವಿಧಾನಸೌಧ ನಿರ್ಮಾಣ ಬಂಟ್ವಾಳ ಶಾಸಕ ಸಚಿವ ಬಿ.ರಮಾನಾಥ ರೈ ಅವರ ಕನಸಿನ ಯೋಜನೆಯಾಗಿದೆ. ಯೋಜನೆ ಸಿದ್ಧಗೊಂಡು ಕಟ್ಟಡದ ಪ್ರತೀ ಹಂತದ ಕಾಮಗಾರಿಯನ್ನು ಪದೇ ಪದೇ ಖುದ್ದು ಪರಿಶೀಲಿಸುತ್ತಿದ್ದ ಸಚಿವರು ನಿರ್ಮಾಣದ ಅವಧಿಗಿಂತ ಒಂದು ವರ್ಷ ಮೊದಲೇ ಪೂರ್ಣಗೊಳ್ಳುವಂತೆ ಮಾಡಿದ್ದಾರೆ. ಮಿನಿ ವಿಧಾನಸೌಧ ಕಟ್ಟಡದ ಸ್ವಲ್ಪಕೆಲಸ ಬಾಕಿಯಿದೆ. ಕಾಮಗಾರಿ ಸಂಪೂರ್ಣ ಮುಗಿದ ಬಳಿಕ ಮುಖ್ಯಮಂತ್ರಿಯವರನ್ನು ಕರೆದು ಲೋಕಾರ್ಪಣೆ ಮಾಡಲಾಗುವುದು. ಉಪ ಚುನಾವಣೆ ಮುಗಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ಚರ್ಚಿಸಿ ಲೋಕಾರ್ಪಣೆಗೆ ದಿನಾಂಕ ನಿಗದಿಪಡಿಸಲಾಗುವುದು ಎಂದು ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

share
ಇಮ್ತಿಯಾಝ್ ಶಾ ತುಂಬೆ
ಇಮ್ತಿಯಾಝ್ ಶಾ ತುಂಬೆ
Next Story
X