Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಲದ ಬಡ್ಡಿ ದರ ಇಳಿಸಿ, ಇತರ ಶುಲ್ಕ...

ಸಾಲದ ಬಡ್ಡಿ ದರ ಇಳಿಸಿ, ಇತರ ಶುಲ್ಕ ಹೆಚ್ಚಿಸಿದ ಎಸ್‌ಬಿಐ

ವಾರ್ತಾಭಾರತಿವಾರ್ತಾಭಾರತಿ3 April 2017 8:32 PM IST
share
ಸಾಲದ ಬಡ್ಡಿ ದರ ಇಳಿಸಿ, ಇತರ ಶುಲ್ಕ ಹೆಚ್ಚಿಸಿದ ಎಸ್‌ಬಿಐ

ಹೊಸದಿಲ್ಲಿ, ಎ.3: ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಸಾಲದ ಮೇಲಿನ ಬಡ್ಡಿ ದರವನ್ನು ಇಳಿಸಿದೆ. ಆದರೆ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಮೊತ್ತ ಇರಿಸಿಕೊಂಡಿರದ ಗ್ರಾಹಕರ ಮೇಲೆ ವಿಧಿಸಲಾಗುವ ದಂಡ ಶುಲ್ಕ , ಚೆಕ್ ಬುಕ್, ಲಾಕರ್ ಸೌಲಭ್ಯ ಇತ್ಯಾದಿ ಸೇವೆಗಳಿಗೆೆ ವಿಧಿಸಲಾಗುವ ಶುಲ್ಕವನ್ನು ಹೆಚ್ಚಿಸಿದೆ. ಎಸ್‌ಬಿಐ ಮಾದರಿಯಲ್ಲಿಯೇ ಇತರ ಬ್ಯಾಂಕ್ಗಳೂ ಶುಲ್ಕ ಏರಿಸುವ ನಿರೀಕ್ಷೆಯಿದೆ.

 ಈ ತಿಂಗಳು ಎಸ್‌ಬಿಐ ಜೊತೆ ವಿಲೀನಗೊಂಡಿರುವ ಐದು ಸಹ ಬ್ಯಾಂಕ್‌ಗಳು ಮತ್ತು ಭಾರತೀಯ ಮಹಿಳಾ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವ ಗ್ರಾಹಕರ ಮೇಲೆ ಈ ಹೆಚ್ಚುವರಿ ಶುಲ್ಕದ ಹೊರೆ ಬೀಳಲಿದೆ. ಬ್ಯಾಂಕ್‌ಗಳ ವಿಲೀನದ ಬಳಿಕ ಎಸ್‌ಬಿಐ ಗ್ರಾಹಕರ ಸಂಖ್ಯೆ 37 ಕೋಟಿಗೆ ಏರಿಕೆಯಾಗಿದೆ.

     ಆರು ಮಹಾನಗರಗಳಲ್ಲಿರುವ ಎಸ್‌ಬಿಐ ಶಾಖೆಗಳಲ್ಲಿ ಖಾತೆದಾರರು 5000 ರೂ. ತಿಂಗಳ ಸರಾಸರಿ ಬ್ಯಾಲೆನ್ಸ್ ಹೊಂದಿರಬೇಕು. ಇಲ್ಲದಿದ್ದರೆ ರೂ. 100ರವರೆಗೆ ದಂಡ ವಿಧಿಸಲಾಗುತ್ತದೆ. 2017ರ ಮಾರ್ಚ್ 31ರವರೆಗೆ ತಿಂಗಳ ಸರಾಸರಿ ಬ್ಯಾಲೆನ್ಸ್ ಮೊತ್ತ 500 ರೂ. (ಚೆಕ್ ಪುಸ್ತಕದ ಸೌಲಭ್ಯ ಇರದಿದ್ದರೆ) ಮತ್ತು 1000 ರೂ. (ಚೆಕ್ ಪುಸ್ತಕದ ಸೌಲಭ್ಯ ಇದ್ದರೆ ) ಆಗಿತ್ತು .ತಿಂಗಳ ಸರಾಸರಿ ಬ್ಯಾಲೆನ್ಸ್ (ಎಂಎಬಿ) ಮೊತ್ತವನ್ನು ಮಹಾನಗರ, ನಗರ, ಗ್ರಾಮೀಣ- ಹೀಗೆ ಪ್ರತ್ಯೇಕ ಪ್ರದೇಶಗಳಿಗೆ ಪ್ರತ್ಯೇಕವಾಗಿ ನಿಗದಿಗೊಳಿಸಲಾಗಿದೆ.

 ಮಹಾನಗರ ಶಾಖೆಗಳ ಖಾತೆದಾರರಿಗೆ ಎಂಎಬಿ 5000 ರೂ, ಇದಕ್ಕೆ ವಿಫಲವಾದರೆ ರೂ.50ರಿಂದ 100ರವರೆಗೆ ದಂಡ ವಿಧಿಸಲಾಗುವುದು. ನಗರ ಮತ್ತು ಅರೆನಗರ ಪ್ರದೇಶದ ಶಾಖೆಗಳ ಖಾತೆದಾರರಿಗೆ ಎಂಬಿಎ ಅನುಕ್ರಮವಾಗಿ 3000 ರೂ ಮತ್ತು 2000 ರೂ. ಆಗಿದೆ. ಗ್ರಾಮೀಣ ಪ್ರದೇಶದ ಶಾಖೆಗಳ ಖಾತೆದಾರರಿಗೆ ಎಂಬಿಎ 1000 ರೂ. ಇದಕ್ಕೆ ವಿಫಲವಾದರೆ ರೂ.20ರಿಂದ 50 ರೂ.ವರೆಗೆ ದಂಡ ವಿಧಿಸಲಾಗುವುದು.

    2017ರ ಎಪ್ರಿಲ್ 1ರಿಂದ ಅನ್ವಯವಾಗುವಂತೆ ಎಸ್‌ಬಿಐ ಮೂಲ ದರವನ್ನು 15 ಮೂಲ ಅಂಕದಷ್ಟು ಕಡಿತಗೊಳಿಸಿ , ಶೇ.9.25ರಿಂದ ಶೇ. 9.10ಕ್ಕೆ ಇಳಿಸಿದೆ. ಕನಿಷ್ಟ ವೆಚ್ಚ ಆಧಾರಿತ ಸಾಲ ದರ (ಎಂಸಿಎಲ್‌ಆರ್)ದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ಈ ಹಿಂದಿನಂತೆಯೇ ಆರು ತಿಂಗಳಾವಧಿಯ ಎಂಸಿಎಲ್‌ಆರ್ ಶೇ. 7.95 ಹಾಗೂ ಮೂರು ವರ್ಷದ ಎಂಸಿಎಲ್‌ಆರ್ ಶೇ. 8.15 ಆಗಿರುತ್ತದೆ.

ಈ ಹೊಸ ದರಗಳು ಸುರಭಿ, ಮೂಲ ಉಳಿತಾಯ ಬ್ಯಾಂಕ್ ಮತ್ತು ಪ್ರಧಾನಿ ಜನಧನ ಜನೆ ಖಾತೆಗಳಿಗೆ ಅನ್ವಯಿಸುವುದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X